Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

- Advertisement -
- Advertisement -

ಬಾಪು’ತಿರುಪತಿ ದೇವಸ್ಥಾನಕ್ಕೆ ದೇಸಿ ತುಪ್ಪ ಪೂರೈಸಿದ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮಾಲೀಕರು’ ಎಂಬ ಬರಹದೊಂದಿಗೆ ಪಾಕಿಸ್ತಾನ ಮತ್ತು ಮುಸ್ಲಿಮರ ಹೆಸರಿನ ಪಟ್ಟಿಯಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇತ್ತಿಚೆಗೆ ತೀವ್ರ ವಿವಾದವಾಗಿದ್ದ ತಿರುಪತಿ ಲಡ್ಡು ವಿಚಾರವಾಗಿ ಈ ಚಿತ್ರ ಕೋಮುದ್ವೇಷ ಹರಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನುಗೌರಿ ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಿರುಪತಿ ಲಡ್ಡುವಿಗೆ ಬಳಸಿದ ತುಪ್ಪದಲ್ಲಿ ದನ, ಹಂದಿಯ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ವರದಿಯಾದ ಹಿನ್ನಲೆಯಲ್ಲಿ, ಅದನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಸಿದ್ದು ಮುಸ್ಲಿಮರು ಅದರಲ್ಲೂ ಪಾಕಿಸ್ತಾನಿ ಮುಸ್ಲಿಮರು ಎಂಬಂತೆ ಬಿಂಬಿಸಿ ಈ ವೈರಲ್ ಚಿತ್ರ ಹರಿದಾಡುತ್ತಿವೆ. ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಪ್‌ಗಳಲ್ಲಿ ಹರಿದಾಡುತ್ತಿವೆ. ಅವುಗಳ ಕೆಲವು ಆರ್ಕೈವ್‌ಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಇದೇ ಚಿತ್ರ ಹಾಗೂ ಬರಹ ಇಂಗ್ಲಿಷ್‌ನಲ್ಲೂ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ಮತ್ತು  ಇಲ್ಲಿ ನೋಡಬಹುದಾಗಿದೆ. ಇದನ್ನೂಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,
ಜೈ ಬಿಜೆಪಿ, ಜೈ ಮೋದಿ ಎಂಬ ಶಿವಮೊಗ್ಗ ಮೂಲದ ವಾಟ್ಸಪ್‌ ಗ್ರೂಪ್‌ನಲ್ಲಿ ಈ ಮಾಹಿತಿ ಹಂಚಲಾಗಿದೆ.

ಫ್ಯಾಕ್ಟ್‌ಚೆಕ್ ನಾನುಗೌರಿ ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ವೈರಲ್ ಚಿತ್ರದಲ್ಲಿ ಇರುವ ವ್ಯಕ್ತಿಗಳು ಪಾಕಿಸ್ತಾನಿ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಾಗಿದ್ದಾರೆ. ಈ ಕಂಪನಿ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಕೆಯನ್ನು ಮಾಡುತ್ತಿಲ್ಲ. ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸುವುದು ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ.

ಹೆಸರುಗಳಲ್ಲಿನ ಸಾಮ್ಯತೆಗಳನ್ನು ಬಳಸಿಕೊಂಡು ಬಿಜೆಪಿ ಪರವಿರುವ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಕ್ಕೀಡು ಮಾಡುವಂತೆ ಕೋಮುದ್ವೇಷ ಹರಡುತ್ತಿದ್ದಾರೆ.

ವೈರಲ್ ಚಿತ್ರದಲ್ಲಿರುವ ಪಾಕಿಸ್ತಾನಿ ಮೂಲದ ಕಂಪನಿ ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್ ಮತ್ತು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ತಮಿಳುನಾಡು ಮೂಲದ ಕಂಪೆನಿಯಾದ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಒಂದೇ ರೀತಿಯ ಹೆಸರಿನ ಕಂಪೆನಿಯಾದರೂ ಅವು ಬೇರೆ ಬೇರೆ ಕಂಪೆನಿಗಳಾಗಿವೆ.

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಮಸಾಲೆ ಕಂಪನಿಯಾಗಿದ್ದು, ಅದನ್ನು 1970 ರಲ್ಲಿ ಪಾಕಿಸ್ತಾನದಲ್ಲಿ ಸ್ಥಾಪಿಸಲಾಯಿತು. ಆದರೆ ಎ.ಆರ್. ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಭಾರತದಲ್ಲಿ 1995 ರಲ್ಲಿ ಸ್ಥಾಪಿಸಲಾಯಿತು. ಇದನ್ನೂಓದಿ: FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ಪಾಕಿಸ್ತಾನಿ ಕಂಪನಿ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ “ಫೂಲ್” ಬ್ರಾಂಡ್ ಆಹಾರ ವಸ್ತುಗಳನ್ನು ತಯಾರಿಸುತ್ತದೆ. ಈ ಕಂಪೆನಿಯು ಪ್ಯಾಕೇಜ್ ಮಾಡಿದ ಮಸಾಲೆಗಳನ್ನು ಮಾರಾಟ ಮಾಡುತ್ತದೆ. ವಿವರಗಳನ್ನು ಅವರ ವೆಬ್‌ಸೈಟ್‌ನಲ್ಲಿ ಕಾಣಬಹುದು (arfoods.com.pk). ಜೊತೆಗೆ “.pk” ಡೊಮೇನ್ ವೆಬ್‌ಸೈಟ್ ಇದು ಪಾಕಿಸ್ತಾನದಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ.

ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್‌ನ ಲಿಂಕ್ಡ್‌ಇನ್ ಪ್ರೊಫೈಲ್‌ನ ರಿವೀವ್‌ ಕಂಪೆನಿಯು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಕಂಪನಿಯ ಲಿಂಕ್ಡ್‌ಇನ್ ಪೇಜ್‌ನಲ್ಲಿ ವೈರಲ್ ಚಿತ್ರದಲ್ಲಿ ಪಟ್ಟಿ ಮಾಡಲಾದ ಐದು ಉದ್ಯೋಗಿಗಳಲ್ಲಿ ನಾಲ್ಕು ಉದ್ಯೋಗಿಗಳ ಹೆಸರುಗಳು, ಫೋಟೋಗಳು ಮತ್ತು ಉದ್ಯೋಗ ಶೀರ್ಷಿಕೆಗಳು ಹೊಂದಾಣಿಕೆಯಾಗುತ್ತವೆ.

ಗೌಪ್ಯತೆ ಸೆಟ್ಟಿಂಗ್‌ಗಳ ಕಾರಣದಿಂದ ಐದನೇ ವ್ಯಕ್ತಿಯ ‘ಲಿಯೋನಿಡಾಸ್ ಶೇಖ್’ ಅವರ ಪ್ರೊಫೈಲ್ ಅನ್ನು ವೀಕ್ಷಿಸಲು ಸಾಧ್ಯವಾಗದಿದ್ದರೂ, ಅವರು “A.R ಫುಡ್ಸ್ (ಪ್ರೈ) ಲಿಮಿಟೆಡ್‌ನಲ್ಲಿ ವೇರ್‌ಹೌಸ್ ಆಪರೇಷನ್ಸ್ ಮ್ಯಾನೇಜರ್” ಎಂದು ತಿಳಿದುಬರುತ್ತದೆ. ಹಾಗಾಗಿ ಈ ವೈರಲ್ ಚಿತ್ರವನ್ನು ಈ ಪಾಕಿಸ್ತಾನಿ ಕಂಪನಿಯ ಉದ್ಯೋಗಿಗಳ ಲಿಂಕ್ಡ್‌ಇನ್ ಖಾತೆಗಳಿಂದ ಪಡೆಯಲಾಗಿದೆ ಎಂಬುದು ಸ್ಪಷ್ಟವಾಗಿದೆ.

ಇದಲ್ಲದೆ, ವೈರಲ್ ಚಿತ್ರ ಮತ್ತು ಮೂಲ ಪ್ರೊಫೈಲ್‌ಗಳು ಈ ವ್ಯಕ್ತಿಗಳ ಸ್ಥಳ ಪಾಕಿಸ್ತಾನ ಎಂದು ಸ್ಪಷ್ಟವಾಗಿ ಹೇಳುತ್ತದೆ. ಇದನ್ನೂಓದಿ: FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,ಭಾರತೀಯ ಕಂಪನಿ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್

ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ತಮಿಳುನಾಡು ಮೂಲದ ಡೈರಿ ಕಂಪನಿಯಾಗಿದ್ದು ಅದು ರಾಜ್ ಮಿಲ್ಕ್ ಬ್ರಾಂಡ್ ಅನ್ನು ಮಾರಾಟ ಮಾಡುತ್ತದೆ. ಈ ಸಂಸ್ಥೆಯ ನಿರ್ದೇಶಕರು ರಾಜಶೇಖರನ್ ಸೂರ್ಯಪ್ರಭ, ರಾಜು ರಾಜಶೇಖರನ್ ಮತ್ತು ಶ್ರೀನಿವಾಸಲುನಾಯ್ಡು ರಾಮಚಂದ್ರನ್ ಶ್ರೀನಿವಾಸನ್ ಎಂಬವರಾಗಿದ್ದಾರೆ. ಕಂಪನಿಯು ತಮಿಳುನಾಡಿನ ದಿಂಡಿಗಲ್‌ನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಅದರ ಸ್ಥಳವು ಗೂಗಲ್ ನಕ್ಷೆಗಳಲ್ಲಿ ನೋಡಬಹುದಾಗಿದೆ.

ಅದಾಗ್ಯೂ, ಕಂಪನಿಯು ತನ್ನ ಉತ್ಪನ್ನಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಅದಾಗ್ಯೂ, ರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಹೆಚ್ಚು ಕಲಬೆರಕೆ ತುಪ್ಪವನ್ನು ಪೂರೈಸುವುದಕ್ಕಾಗಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಕಂಪನಿಯು ಶೋಕಾಸ್ ನೋಟಿಸ್‌ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ.

ಒಟ್ಟನಲ್ಲಿ ಹೇಳಬಹುದಾದರೆ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನಿ ಕಂಪನಿಯು ತಿರುಪತಿ ದೇವಸ್ಥಾನದ ಲಡ್ಡುಗಳಿಗೆ ತುಪ್ಪ ಪೂರೈಸುತ್ತಿಲ್ಲ. ಅದು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಎಂಬ ಮಸಾಲೆ ಪದಾರ್ಥಗಳ ಕಂಪೆನಿಯಾಗಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ತಮಿಳುನಾಡು ಮೂಲದ A.R. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ. ಇದರ ಮಾಲಿಕರು ಹಿಂದೂಗಳಾಗಿದ್ದಾರೆ. ಅದು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ಆರೋಪ ಎದುರಿಸುತ್ತಿದೆ.

ವಿಡಿಯೊ ನೋಡಿ: ಅಂಗನವಾಡಿ ನೌಕರರೆಂದರೆ ತಾತ್ಸಾರವೇಕೆ? ನಮ್ಮನ್ನು ಖಾಯಂ ಮಾಡಿ. ನಮ್ಮ ಅಳಲನ್ನು ಕೇಳಿ ಮುಖ್ಯಮಂತ್ರಿಗಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...