Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

- Advertisement -
- Advertisement -

ಬಾಪು’ತಿರುಪತಿ ದೇವಸ್ಥಾನಕ್ಕೆ ದೇಸಿ ತುಪ್ಪ ಪೂರೈಸಿದ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮಾಲೀಕರು’ ಎಂಬ ಬರಹದೊಂದಿಗೆ ಪಾಕಿಸ್ತಾನ ಮತ್ತು ಮುಸ್ಲಿಮರ ಹೆಸರಿನ ಪಟ್ಟಿಯಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇತ್ತಿಚೆಗೆ ತೀವ್ರ ವಿವಾದವಾಗಿದ್ದ ತಿರುಪತಿ ಲಡ್ಡು ವಿಚಾರವಾಗಿ ಈ ಚಿತ್ರ ಕೋಮುದ್ವೇಷ ಹರಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನುಗೌರಿ ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಿರುಪತಿ ಲಡ್ಡುವಿಗೆ ಬಳಸಿದ ತುಪ್ಪದಲ್ಲಿ ದನ, ಹಂದಿಯ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ವರದಿಯಾದ ಹಿನ್ನಲೆಯಲ್ಲಿ, ಅದನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಸಿದ್ದು ಮುಸ್ಲಿಮರು ಅದರಲ್ಲೂ ಪಾಕಿಸ್ತಾನಿ ಮುಸ್ಲಿಮರು ಎಂಬಂತೆ ಬಿಂಬಿಸಿ ಈ ವೈರಲ್ ಚಿತ್ರ ಹರಿದಾಡುತ್ತಿವೆ. ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಪ್‌ಗಳಲ್ಲಿ ಹರಿದಾಡುತ್ತಿವೆ. ಅವುಗಳ ಕೆಲವು ಆರ್ಕೈವ್‌ಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಇದೇ ಚಿತ್ರ ಹಾಗೂ ಬರಹ ಇಂಗ್ಲಿಷ್‌ನಲ್ಲೂ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ಮತ್ತು  ಇಲ್ಲಿ ನೋಡಬಹುದಾಗಿದೆ. ಇದನ್ನೂಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,
ಜೈ ಬಿಜೆಪಿ, ಜೈ ಮೋದಿ ಎಂಬ ಶಿವಮೊಗ್ಗ ಮೂಲದ ವಾಟ್ಸಪ್‌ ಗ್ರೂಪ್‌ನಲ್ಲಿ ಈ ಮಾಹಿತಿ ಹಂಚಲಾಗಿದೆ.

ಫ್ಯಾಕ್ಟ್‌ಚೆಕ್ ನಾನುಗೌರಿ ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ವೈರಲ್ ಚಿತ್ರದಲ್ಲಿ ಇರುವ ವ್ಯಕ್ತಿಗಳು ಪಾಕಿಸ್ತಾನಿ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಾಗಿದ್ದಾರೆ. ಈ ಕಂಪನಿ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಕೆಯನ್ನು ಮಾಡುತ್ತಿಲ್ಲ. ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸುವುದು ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ.

ಹೆಸರುಗಳಲ್ಲಿನ ಸಾಮ್ಯತೆಗಳನ್ನು ಬಳಸಿಕೊಂಡು ಬಿಜೆಪಿ ಪರವಿರುವ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಕ್ಕೀಡು ಮಾಡುವಂತೆ ಕೋಮುದ್ವೇಷ ಹರಡುತ್ತಿದ್ದಾರೆ.

ವೈರಲ್ ಚಿತ್ರದಲ್ಲಿರುವ ಪಾಕಿಸ್ತಾನಿ ಮೂಲದ ಕಂಪನಿ ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್ ಮತ್ತು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ತಮಿಳುನಾಡು ಮೂಲದ ಕಂಪೆನಿಯಾದ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಒಂದೇ ರೀತಿಯ ಹೆಸರಿನ ಕಂಪೆನಿಯಾದರೂ ಅವು ಬೇರೆ ಬೇರೆ ಕಂಪೆನಿಗಳಾಗಿವೆ.

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಮಸಾಲೆ ಕಂಪನಿಯಾಗಿದ್ದು, ಅದನ್ನು 1970 ರಲ್ಲಿ ಪಾಕಿಸ್ತಾನದಲ್ಲಿ ಸ್ಥಾಪಿಸಲಾಯಿತು. ಆದರೆ ಎ.ಆರ್. ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಭಾರತದಲ್ಲಿ 1995 ರಲ್ಲಿ ಸ್ಥಾಪಿಸಲಾಯಿತು. ಇದನ್ನೂಓದಿ: FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ಪಾಕಿಸ್ತಾನಿ ಕಂಪನಿ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ “ಫೂಲ್” ಬ್ರಾಂಡ್ ಆಹಾರ ವಸ್ತುಗಳನ್ನು ತಯಾರಿಸುತ್ತದೆ. ಈ ಕಂಪೆನಿಯು ಪ್ಯಾಕೇಜ್ ಮಾಡಿದ ಮಸಾಲೆಗಳನ್ನು ಮಾರಾಟ ಮಾಡುತ್ತದೆ. ವಿವರಗಳನ್ನು ಅವರ ವೆಬ್‌ಸೈಟ್‌ನಲ್ಲಿ ಕಾಣಬಹುದು (arfoods.com.pk). ಜೊತೆಗೆ “.pk” ಡೊಮೇನ್ ವೆಬ್‌ಸೈಟ್ ಇದು ಪಾಕಿಸ್ತಾನದಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ.

ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್‌ನ ಲಿಂಕ್ಡ್‌ಇನ್ ಪ್ರೊಫೈಲ್‌ನ ರಿವೀವ್‌ ಕಂಪೆನಿಯು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಕಂಪನಿಯ ಲಿಂಕ್ಡ್‌ಇನ್ ಪೇಜ್‌ನಲ್ಲಿ ವೈರಲ್ ಚಿತ್ರದಲ್ಲಿ ಪಟ್ಟಿ ಮಾಡಲಾದ ಐದು ಉದ್ಯೋಗಿಗಳಲ್ಲಿ ನಾಲ್ಕು ಉದ್ಯೋಗಿಗಳ ಹೆಸರುಗಳು, ಫೋಟೋಗಳು ಮತ್ತು ಉದ್ಯೋಗ ಶೀರ್ಷಿಕೆಗಳು ಹೊಂದಾಣಿಕೆಯಾಗುತ್ತವೆ.

ಗೌಪ್ಯತೆ ಸೆಟ್ಟಿಂಗ್‌ಗಳ ಕಾರಣದಿಂದ ಐದನೇ ವ್ಯಕ್ತಿಯ ‘ಲಿಯೋನಿಡಾಸ್ ಶೇಖ್’ ಅವರ ಪ್ರೊಫೈಲ್ ಅನ್ನು ವೀಕ್ಷಿಸಲು ಸಾಧ್ಯವಾಗದಿದ್ದರೂ, ಅವರು “A.R ಫುಡ್ಸ್ (ಪ್ರೈ) ಲಿಮಿಟೆಡ್‌ನಲ್ಲಿ ವೇರ್‌ಹೌಸ್ ಆಪರೇಷನ್ಸ್ ಮ್ಯಾನೇಜರ್” ಎಂದು ತಿಳಿದುಬರುತ್ತದೆ. ಹಾಗಾಗಿ ಈ ವೈರಲ್ ಚಿತ್ರವನ್ನು ಈ ಪಾಕಿಸ್ತಾನಿ ಕಂಪನಿಯ ಉದ್ಯೋಗಿಗಳ ಲಿಂಕ್ಡ್‌ಇನ್ ಖಾತೆಗಳಿಂದ ಪಡೆಯಲಾಗಿದೆ ಎಂಬುದು ಸ್ಪಷ್ಟವಾಗಿದೆ.

ಇದಲ್ಲದೆ, ವೈರಲ್ ಚಿತ್ರ ಮತ್ತು ಮೂಲ ಪ್ರೊಫೈಲ್‌ಗಳು ಈ ವ್ಯಕ್ತಿಗಳ ಸ್ಥಳ ಪಾಕಿಸ್ತಾನ ಎಂದು ಸ್ಪಷ್ಟವಾಗಿ ಹೇಳುತ್ತದೆ. ಇದನ್ನೂಓದಿ: FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,ಭಾರತೀಯ ಕಂಪನಿ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್

ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ತಮಿಳುನಾಡು ಮೂಲದ ಡೈರಿ ಕಂಪನಿಯಾಗಿದ್ದು ಅದು ರಾಜ್ ಮಿಲ್ಕ್ ಬ್ರಾಂಡ್ ಅನ್ನು ಮಾರಾಟ ಮಾಡುತ್ತದೆ. ಈ ಸಂಸ್ಥೆಯ ನಿರ್ದೇಶಕರು ರಾಜಶೇಖರನ್ ಸೂರ್ಯಪ್ರಭ, ರಾಜು ರಾಜಶೇಖರನ್ ಮತ್ತು ಶ್ರೀನಿವಾಸಲುನಾಯ್ಡು ರಾಮಚಂದ್ರನ್ ಶ್ರೀನಿವಾಸನ್ ಎಂಬವರಾಗಿದ್ದಾರೆ. ಕಂಪನಿಯು ತಮಿಳುನಾಡಿನ ದಿಂಡಿಗಲ್‌ನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಅದರ ಸ್ಥಳವು ಗೂಗಲ್ ನಕ್ಷೆಗಳಲ್ಲಿ ನೋಡಬಹುದಾಗಿದೆ.

ಅದಾಗ್ಯೂ, ಕಂಪನಿಯು ತನ್ನ ಉತ್ಪನ್ನಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಅದಾಗ್ಯೂ, ರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಹೆಚ್ಚು ಕಲಬೆರಕೆ ತುಪ್ಪವನ್ನು ಪೂರೈಸುವುದಕ್ಕಾಗಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಕಂಪನಿಯು ಶೋಕಾಸ್ ನೋಟಿಸ್‌ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ.

ಒಟ್ಟನಲ್ಲಿ ಹೇಳಬಹುದಾದರೆ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನಿ ಕಂಪನಿಯು ತಿರುಪತಿ ದೇವಸ್ಥಾನದ ಲಡ್ಡುಗಳಿಗೆ ತುಪ್ಪ ಪೂರೈಸುತ್ತಿಲ್ಲ. ಅದು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಎಂಬ ಮಸಾಲೆ ಪದಾರ್ಥಗಳ ಕಂಪೆನಿಯಾಗಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ತಮಿಳುನಾಡು ಮೂಲದ A.R. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ. ಇದರ ಮಾಲಿಕರು ಹಿಂದೂಗಳಾಗಿದ್ದಾರೆ. ಅದು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ಆರೋಪ ಎದುರಿಸುತ್ತಿದೆ.

ವಿಡಿಯೊ ನೋಡಿ: ಅಂಗನವಾಡಿ ನೌಕರರೆಂದರೆ ತಾತ್ಸಾರವೇಕೆ? ನಮ್ಮನ್ನು ಖಾಯಂ ಮಾಡಿ. ನಮ್ಮ ಅಳಲನ್ನು ಕೇಳಿ ಮುಖ್ಯಮಂತ್ರಿಗಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...