Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

- Advertisement -
- Advertisement -

ಬಾಪು’ತಿರುಪತಿ ದೇವಸ್ಥಾನಕ್ಕೆ ದೇಸಿ ತುಪ್ಪ ಪೂರೈಸಿದ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮಾಲೀಕರು’ ಎಂಬ ಬರಹದೊಂದಿಗೆ ಪಾಕಿಸ್ತಾನ ಮತ್ತು ಮುಸ್ಲಿಮರ ಹೆಸರಿನ ಪಟ್ಟಿಯಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇತ್ತಿಚೆಗೆ ತೀವ್ರ ವಿವಾದವಾಗಿದ್ದ ತಿರುಪತಿ ಲಡ್ಡು ವಿಚಾರವಾಗಿ ಈ ಚಿತ್ರ ಕೋಮುದ್ವೇಷ ಹರಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನುಗೌರಿ ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಿರುಪತಿ ಲಡ್ಡುವಿಗೆ ಬಳಸಿದ ತುಪ್ಪದಲ್ಲಿ ದನ, ಹಂದಿಯ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ವರದಿಯಾದ ಹಿನ್ನಲೆಯಲ್ಲಿ, ಅದನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಸಿದ್ದು ಮುಸ್ಲಿಮರು ಅದರಲ್ಲೂ ಪಾಕಿಸ್ತಾನಿ ಮುಸ್ಲಿಮರು ಎಂಬಂತೆ ಬಿಂಬಿಸಿ ಈ ವೈರಲ್ ಚಿತ್ರ ಹರಿದಾಡುತ್ತಿವೆ. ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಪ್‌ಗಳಲ್ಲಿ ಹರಿದಾಡುತ್ತಿವೆ. ಅವುಗಳ ಕೆಲವು ಆರ್ಕೈವ್‌ಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಇದೇ ಚಿತ್ರ ಹಾಗೂ ಬರಹ ಇಂಗ್ಲಿಷ್‌ನಲ್ಲೂ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ಮತ್ತು  ಇಲ್ಲಿ ನೋಡಬಹುದಾಗಿದೆ. ಇದನ್ನೂಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,
ಜೈ ಬಿಜೆಪಿ, ಜೈ ಮೋದಿ ಎಂಬ ಶಿವಮೊಗ್ಗ ಮೂಲದ ವಾಟ್ಸಪ್‌ ಗ್ರೂಪ್‌ನಲ್ಲಿ ಈ ಮಾಹಿತಿ ಹಂಚಲಾಗಿದೆ.

ಫ್ಯಾಕ್ಟ್‌ಚೆಕ್ ನಾನುಗೌರಿ ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ವೈರಲ್ ಚಿತ್ರದಲ್ಲಿ ಇರುವ ವ್ಯಕ್ತಿಗಳು ಪಾಕಿಸ್ತಾನಿ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಾಗಿದ್ದಾರೆ. ಈ ಕಂಪನಿ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಕೆಯನ್ನು ಮಾಡುತ್ತಿಲ್ಲ. ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸುವುದು ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ.

ಹೆಸರುಗಳಲ್ಲಿನ ಸಾಮ್ಯತೆಗಳನ್ನು ಬಳಸಿಕೊಂಡು ಬಿಜೆಪಿ ಪರವಿರುವ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಕ್ಕೀಡು ಮಾಡುವಂತೆ ಕೋಮುದ್ವೇಷ ಹರಡುತ್ತಿದ್ದಾರೆ.

ವೈರಲ್ ಚಿತ್ರದಲ್ಲಿರುವ ಪಾಕಿಸ್ತಾನಿ ಮೂಲದ ಕಂಪನಿ ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್ ಮತ್ತು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ತಮಿಳುನಾಡು ಮೂಲದ ಕಂಪೆನಿಯಾದ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಒಂದೇ ರೀತಿಯ ಹೆಸರಿನ ಕಂಪೆನಿಯಾದರೂ ಅವು ಬೇರೆ ಬೇರೆ ಕಂಪೆನಿಗಳಾಗಿವೆ.

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಮಸಾಲೆ ಕಂಪನಿಯಾಗಿದ್ದು, ಅದನ್ನು 1970 ರಲ್ಲಿ ಪಾಕಿಸ್ತಾನದಲ್ಲಿ ಸ್ಥಾಪಿಸಲಾಯಿತು. ಆದರೆ ಎ.ಆರ್. ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಭಾರತದಲ್ಲಿ 1995 ರಲ್ಲಿ ಸ್ಥಾಪಿಸಲಾಯಿತು. ಇದನ್ನೂಓದಿ: FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ಪಾಕಿಸ್ತಾನಿ ಕಂಪನಿ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ “ಫೂಲ್” ಬ್ರಾಂಡ್ ಆಹಾರ ವಸ್ತುಗಳನ್ನು ತಯಾರಿಸುತ್ತದೆ. ಈ ಕಂಪೆನಿಯು ಪ್ಯಾಕೇಜ್ ಮಾಡಿದ ಮಸಾಲೆಗಳನ್ನು ಮಾರಾಟ ಮಾಡುತ್ತದೆ. ವಿವರಗಳನ್ನು ಅವರ ವೆಬ್‌ಸೈಟ್‌ನಲ್ಲಿ ಕಾಣಬಹುದು (arfoods.com.pk). ಜೊತೆಗೆ “.pk” ಡೊಮೇನ್ ವೆಬ್‌ಸೈಟ್ ಇದು ಪಾಕಿಸ್ತಾನದಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ.

ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್‌ನ ಲಿಂಕ್ಡ್‌ಇನ್ ಪ್ರೊಫೈಲ್‌ನ ರಿವೀವ್‌ ಕಂಪೆನಿಯು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಕಂಪನಿಯ ಲಿಂಕ್ಡ್‌ಇನ್ ಪೇಜ್‌ನಲ್ಲಿ ವೈರಲ್ ಚಿತ್ರದಲ್ಲಿ ಪಟ್ಟಿ ಮಾಡಲಾದ ಐದು ಉದ್ಯೋಗಿಗಳಲ್ಲಿ ನಾಲ್ಕು ಉದ್ಯೋಗಿಗಳ ಹೆಸರುಗಳು, ಫೋಟೋಗಳು ಮತ್ತು ಉದ್ಯೋಗ ಶೀರ್ಷಿಕೆಗಳು ಹೊಂದಾಣಿಕೆಯಾಗುತ್ತವೆ.

ಗೌಪ್ಯತೆ ಸೆಟ್ಟಿಂಗ್‌ಗಳ ಕಾರಣದಿಂದ ಐದನೇ ವ್ಯಕ್ತಿಯ ‘ಲಿಯೋನಿಡಾಸ್ ಶೇಖ್’ ಅವರ ಪ್ರೊಫೈಲ್ ಅನ್ನು ವೀಕ್ಷಿಸಲು ಸಾಧ್ಯವಾಗದಿದ್ದರೂ, ಅವರು “A.R ಫುಡ್ಸ್ (ಪ್ರೈ) ಲಿಮಿಟೆಡ್‌ನಲ್ಲಿ ವೇರ್‌ಹೌಸ್ ಆಪರೇಷನ್ಸ್ ಮ್ಯಾನೇಜರ್” ಎಂದು ತಿಳಿದುಬರುತ್ತದೆ. ಹಾಗಾಗಿ ಈ ವೈರಲ್ ಚಿತ್ರವನ್ನು ಈ ಪಾಕಿಸ್ತಾನಿ ಕಂಪನಿಯ ಉದ್ಯೋಗಿಗಳ ಲಿಂಕ್ಡ್‌ಇನ್ ಖಾತೆಗಳಿಂದ ಪಡೆಯಲಾಗಿದೆ ಎಂಬುದು ಸ್ಪಷ್ಟವಾಗಿದೆ.

ಇದಲ್ಲದೆ, ವೈರಲ್ ಚಿತ್ರ ಮತ್ತು ಮೂಲ ಪ್ರೊಫೈಲ್‌ಗಳು ಈ ವ್ಯಕ್ತಿಗಳ ಸ್ಥಳ ಪಾಕಿಸ್ತಾನ ಎಂದು ಸ್ಪಷ್ಟವಾಗಿ ಹೇಳುತ್ತದೆ. ಇದನ್ನೂಓದಿ: FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,ಭಾರತೀಯ ಕಂಪನಿ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್

ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ತಮಿಳುನಾಡು ಮೂಲದ ಡೈರಿ ಕಂಪನಿಯಾಗಿದ್ದು ಅದು ರಾಜ್ ಮಿಲ್ಕ್ ಬ್ರಾಂಡ್ ಅನ್ನು ಮಾರಾಟ ಮಾಡುತ್ತದೆ. ಈ ಸಂಸ್ಥೆಯ ನಿರ್ದೇಶಕರು ರಾಜಶೇಖರನ್ ಸೂರ್ಯಪ್ರಭ, ರಾಜು ರಾಜಶೇಖರನ್ ಮತ್ತು ಶ್ರೀನಿವಾಸಲುನಾಯ್ಡು ರಾಮಚಂದ್ರನ್ ಶ್ರೀನಿವಾಸನ್ ಎಂಬವರಾಗಿದ್ದಾರೆ. ಕಂಪನಿಯು ತಮಿಳುನಾಡಿನ ದಿಂಡಿಗಲ್‌ನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಅದರ ಸ್ಥಳವು ಗೂಗಲ್ ನಕ್ಷೆಗಳಲ್ಲಿ ನೋಡಬಹುದಾಗಿದೆ.

ಅದಾಗ್ಯೂ, ಕಂಪನಿಯು ತನ್ನ ಉತ್ಪನ್ನಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಅದಾಗ್ಯೂ, ರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಹೆಚ್ಚು ಕಲಬೆರಕೆ ತುಪ್ಪವನ್ನು ಪೂರೈಸುವುದಕ್ಕಾಗಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಕಂಪನಿಯು ಶೋಕಾಸ್ ನೋಟಿಸ್‌ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ.

ಒಟ್ಟನಲ್ಲಿ ಹೇಳಬಹುದಾದರೆ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನಿ ಕಂಪನಿಯು ತಿರುಪತಿ ದೇವಸ್ಥಾನದ ಲಡ್ಡುಗಳಿಗೆ ತುಪ್ಪ ಪೂರೈಸುತ್ತಿಲ್ಲ. ಅದು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಎಂಬ ಮಸಾಲೆ ಪದಾರ್ಥಗಳ ಕಂಪೆನಿಯಾಗಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ತಮಿಳುನಾಡು ಮೂಲದ A.R. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ. ಇದರ ಮಾಲಿಕರು ಹಿಂದೂಗಳಾಗಿದ್ದಾರೆ. ಅದು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ಆರೋಪ ಎದುರಿಸುತ್ತಿದೆ.

ವಿಡಿಯೊ ನೋಡಿ: ಅಂಗನವಾಡಿ ನೌಕರರೆಂದರೆ ತಾತ್ಸಾರವೇಕೆ? ನಮ್ಮನ್ನು ಖಾಯಂ ಮಾಡಿ. ನಮ್ಮ ಅಳಲನ್ನು ಕೇಳಿ ಮುಖ್ಯಮಂತ್ರಿಗಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...