Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...