Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...