Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...