Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...