Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...