Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...