HomeUncategorizedಫ್ಯಾಕ್ಟ್‌ಚೆಕ್: ಯುವತಿಯ ಅಪಹರಣದ ವೀಡಿಯೋ ವೈರಲ್; ಇದು ಉತ್ತರಪ್ರದೇಶದ್ದೇ?

ಫ್ಯಾಕ್ಟ್‌ಚೆಕ್: ಯುವತಿಯ ಅಪಹರಣದ ವೀಡಿಯೋ ವೈರಲ್; ಇದು ಉತ್ತರಪ್ರದೇಶದ್ದೇ?

"ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳನ್ನು ಹಗಲು ಹೊತ್ತಿನಲ್ಲಿ ಅಪಹರಿಸಲಾಗುತ್ತಿದೆ, ಅಂಧ ಭಕ್ತರು ಇನ್ನೂ ಕಣ್ಣುಮುಚ್ಚಿ ಕುಳಿತಿದ್ದಾರೆ" ಎನ್ನುವ ಹೇಳಿಕೆಯೊಂದಿಗೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಮತ್ತೊಂದು ಉದಾಹರಣೆ ಎಂದು, ಹಾಡಹಗಲೇ ಯುವತಿಯನ್ನು ಅಪಹರಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಹಂಚಿಕೊಳ್ಳಲಾಗುತ್ತಿದೆ.

“ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳನ್ನು ಹಗಲು ಹೊತ್ತಿನಲ್ಲಿ ಅಪಹರಿಸಲಾಗುತ್ತಿದೆ, ಅಂಧ ಭಕ್ತರು ಇನ್ನೂ ಕಣ್ಣುಮುಚ್ಚಿ ಕುಳಿತಿದ್ದಾರೆ” ಎನ್ನುವ ಹೇಳಿಕೆಯೊಂದಿಗೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಕಾಂಗ್ರೆಸ್‌ನ ರಾಷ್ಟ್ರೀಯ ಸಂಯೋಜಕಿ ಎಂದು ಹೇಳಿಕೊಂಡಿರುವ ಸುಜಾತಾ ಪಾಲ್ ಎಂಬುವವರು ತಮ್ಮ ವಾಲ್‌ನಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವರದಿ ಬರೆಯುವ ವೇಳೆಗೆ, 1 ಲಕ್ಷದ 74 ಸಾವಿರ ಜನರು ಇದನ್ನು ವೀಕ್ಷಿಸಿದ್ದು, 8 ಸಾವಿರ ಜನರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ರಶ್ಮಿಕಾ ಮಂದಣ್ಣ ಫ್ಯಾನ್ಸ್‌ ಗುಂಪಿನಲ್ಲಿಯೂ ಈ ವಿಡಿಯೋವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಹೀಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ವೀಡಿಯೋ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂಬ ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ. ಇದನ್ನು ನೂರಾರು ಜನರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌ಚೆಕ್:

ಈ ವೀಡಿಯೋನ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಡವು ಡಿಜಿಟಲ್ ಸುದ್ಧಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ಗೆ ಕರೆದೊಯ್ಯಿತು ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಈ ಅಪಹರಣ ಘಟನೆಯು ಆಗಸ್ಟ್ 14, 2020 ರಂದು ಬೆಳಿಗ್ಗೆ 11.30ಕ್ಕೆ ಕೋಲಾರದಲ್ಲಿ ನಡೆದಿದೆ ಎಂದು ಅಲ್ಲಿನ ಲೇಖನವೊಂದರಲ್ಲಿ ಹೇಳಲಾಗಿದೆ. ಶಿವಶಂಕರ್, ಬಾಲಾಜಿ ಮತ್ತು ದೀಪಕ್ ಎಂದು ಗುರುತಿಸಲ್ಪಟ್ಟ ಮೂವರ ಗುಂಪು ಬಾಲಕಿಯನ್ನು ಹಾಡಹಗಲೇ ಅಪಹರಿಸಿತ್ತು. ಈ ಗುಂಪಿನಲ್ಲಿ ಒಬ್ಬನಾದ ಶಿವಶಂಕರ್ ನೀಡಿದ ಮದುವೆಯ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದರಿಂದ ಆಕೆಯನ್ನು ಅಪಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಈ ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಈಗ ಆಕೆ ತನ್ನ ಕುಟುಂಬದೊಂದಿಗೆ ಇದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

“ಬೆಳಿಗ್ಗೆ 10 ಗಂಟೆಯ ಸುಮಾರಿಗೆ ನಾವು ಅಪಹರಣಕಾರರನ್ನು ಬೆನ್ನಟ್ಟಿದೆವು. ನಂತರ ಅವರನ್ನು ಪತ್ತೆಹಚ್ಚಿ ಯುವತಿಯನ್ನು ರಕ್ಷಿಸಿ ಕೋಲಾರಕ್ಕೆ ಕರೆತರುವಾಗ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ” ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದರು.

ಈ ಘಟನೆಯನ್ನು ಟೈಮ್ಸ್ ಆಫ್ ಇಂಡಿಯಾ, ನ್ಯೂಸ್ 18 ಕನ್ನಡ ಮತ್ತು ಮಿರರ್ ನೌ ಸಹ ವರದಿ ಮಾಡಿದೆ.

ಇದರಿಂದ ತಿಳಿದುಬರುವುದೇನೆಂದರೆ, ಕರ್ನಾಟಕದಲ್ಲಿ ನಡೆದ ಅಪಹರಣದ ವೀಡಿಯೋವನ್ನು ಉತ್ತರಪ್ರದೇಶದಲ್ಲಿ ನಡೆದಿದೆ ಎಂಬ ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...