Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

- Advertisement -
- Advertisement -

ದೆಹಲಿ- ಹರಿಯಾಣದ ಗಡಿಗೆ ಹೊಂದಿಕೊಂಡಿರುವ ಗುರುಗ್ರಾಮ್‌ನಲ್ಲಿ ಮುಸ್ಲಿಂ ಸಮುದಾಯದವರಿಗೆ ತೆರೆದ ಮೈದಾನದಲ್ಲಿ ನಮಾಜ್ ಮಾಡಲು ಕೆಲವು ಹಿಂದುತ್ವಾವಾದಿ ಗುಂಪುಗಳು ಮತ್ತು ನಗರದ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇದರ ನಡುವೆಯೇ ರಸ್ತೆ, ವಾಹನಗಳ ಮೇಲೆ ಸಾವಿರಾರು ಮಂದಿ ನಮಾಜ್ ಮಾಡುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ಹಲವು ಮಂದಿ ಇದನ್ನು ಹಂಚಿಕೊಂಡಿದ್ದಾರೆ.

ರಸ್ತೆಯೊಂದರಲ್ಲಿ ಮತ್ತು ವಾಹನಗಳ ಮೇಲೆ ನಮಾಜ್ ಮಾಡುತ್ತಿರುವ ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯನ್ನು ತೋರಿಸುವ ಚಿತ್ರವನ್ನು ಹಂಚಿಕೊಂಡಿರುವ ಜನ, ಇದು ಭಾರತದ ಹೆದ್ದಾರಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿರುವ ದೃಶ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರವನ್ನು ಪೋಸ್ಟ್ ಮಾಡಿದ್ದ ತಾರೆಕ್ ಫತಾಹ್ ಎನ್ನುವವರು – ಟ್ವಿಟರ್‌ನಲ್ಲಿ 7.5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. “ಶುಕ್ರವಾರದ ಪ್ರಾರ್ಥನೆ ಮಾಡಲು ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿದೆ. ಇದು ನನಗೆ ಪ್ರಾರ್ಥನೆಯಂತೆ ತೋರುತ್ತಿಲ್ಲ. ಇತರರನ್ನು ಬೆದರಿಸಲು ಮಾಡಿರುವ ಸಂಖ್ಯೆಗಳ ಪ್ರದರ್ಶನವಾಗಿದೆ” ಎಂದು ಆರೋಪಿಸಿದ್ದಾರೆ. ಈಗ ಈ ಟ್ವೀಟ್ ಅಳಿಸಲಾಗಿದೆ. ಆದರೆ ಪೋಸ್ಟ್‌ನ ಆರ್ಕೈವ್ ಇಲ್ಲಿ ನೋಡಬಹುದು.

ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ಚಿತ್ರವನ್ನು ಗೂಗಲ್(Google) ಇಮೇಜ್ ಹುಡುಕಾಟದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ಹುಡುಕಾಡಿದಾಗ ಇದು ಭಾರತದಲ್ಲ, ಬಾಂಗ್ಲಾದೇಶದ ಚಿತ್ರ ಎಂಬುದು ತಿಳಿದು ಬಂದಿದೆ.

ಈ ಚಿತ್ರವು ಬಾಂಗ್ಲಾದೇಶದ ಗಾಜಿಪುರದ ಪ್ರಮುಖ ಪಟ್ಟಣವಾದ ಟೋಂಗಿಯಲ್ಲಿ ನಡೆದ ಮುಸ್ಲಿಮರ ವಾರ್ಷಿಕ ಕಾರ್ಯಕ್ರಮ ಬಿಶ್ವಾ ಇಜ್ತೆಮಾದ (Bishwa Ijtema) ಚಿತ್ರವಾಗಿದೆ. ಬಿಶ್ವಾ ಇಜ್ತೆಮಾವನ್ನು ವಿಶ್ವದ ಅತಿದೊಡ್ಡ ಮುಸ್ಲಿಮರ ಸಭೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಈ ವೈರಲ್ ಚಿತ್ರದ ಉತ್ತಮ-ಗುಣಮಟ್ಟದ ಪೋಟೋವನ್ನು ಸರಿಯಾಗಿ ಗಮನಿಸಿದರೆ, ನಾವು ಬಾಂಗ್ಲಾದಲ್ಲಿ ಹಸಿರು ಬೋರ್ಡ್ ಅನ್ನು ನೋಡಬಹುದು. ಅದರ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಬಿಸ್ವಾ ಇಜ್ತೆಮಾ, 2020” ಎಂದು ಬರೆಯಲಾಗಿದೆ. ಹಸಿರು ಬ್ಯಾನರ್‌ನ ಬಲಭಾಗದಲ್ಲಿ ಕಾಣುವ ಸಣ್ಣ ಕಾವಲು ಗೋಪುರದ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಗಾಜಿಪುರ ಮೆಟ್ರೋಪಾಲಿಟನ್ ಪೋಲೀಸ್” ಎಂದು ಬರೆದಿರುವುದನ್ನು ಕಾಣಬಹುದು.

ಚಿತ್ರದಲ್ಲಿ ಕಂಡುಬರುವ ಕೆಂಪು ಡಬಲ್ ಡೆಕ್ಕರ್ ಬಸ್‌ನಲ್ಲಿ “BRTC” (ಬಾಂಗ್ಲಾದೇಶ ರಸ್ತೆ ಸಾರಿಗೆ ಸಂಸ್ಥೆ) ಎಂದು ಬರೆಯಲಾಗಿದೆ. ಈ ಬಸ್ಸಿನ ಹಿಂದಿನ ಕೆಂಪು ಬೋರ್ಡ್‌ನಲ್ಲಿ “ಮೋತಿಝೀಲ್-ಫಾರ್ಮ್ ಗೇಟ್, ಸ್ಟೇಷನ್ ರೋಡ್ (ಮಾರ್ಗ)” ಎಂದು ಬಾಂಗ್ಲಾ ಭಾಷೆಯಲ್ಲಿ ಬರೆಯಲಾಗಿದೆ. Google Maps ನಲ್ಲಿ ಈ ಮಾರ್ಗವನ್ನು ಹುಡುಕಾಡಿದರೆ ಅದು ಬಾಂಗ್ಲಾದೇಶದಲ್ಲಿನ ಸ್ಥಳವನ್ನು ತೋರಿಸುತ್ತದೆ.

ಅಲ್ಲದೆ, “ಫೈನ್ ಆರ್ಟ್ ಅಮೆರಿಕಾ” ಸೈಟ್ ಒದಗಿಸಿದ ಮಾಹಿತಿಯ ಪ್ರಕಾರ, ವೈಮಾನಿಕ ಛಾಯಾಗ್ರಹಣಕ್ಕೆ ಹೆಸರುವಾಸಿಯಾದ ಬಾಂಗ್ಲಾದೇಶದ ಛಾಯಾಗ್ರಾಹಕ ಅಜೀಮ್ ಖಾನ್ ರೋನಿ ಅವರು ಚಿತ್ರವನ್ನು ಕ್ಲಿಕ್ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಜೀಮ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅನೇಕ ಚಿತ್ರಗಳು ಇದೇ ಚಿತ್ರವನ್ನು ಹೋಲಿವುದನ್ನು ಕಾಣಬಹುದು.

ಹೀಗಾಗಿ ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿ ನಮಾಜ್ ಮಾಡುತ್ತಿದ್ದಾರೆ ಎಂದಿರುವ ಪ್ರತಿಪಾದನೆ ತಪ್ಪಾಗಿದೆ. ಈ ಚಿತ್ರವು ಬಾಂಗ್ಲಾದೇಶದ ಧಾರ್ಮಿಕ ಸಭೆಯ ಚಿತ್ರ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...