Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

- Advertisement -
- Advertisement -

ದೆಹಲಿ- ಹರಿಯಾಣದ ಗಡಿಗೆ ಹೊಂದಿಕೊಂಡಿರುವ ಗುರುಗ್ರಾಮ್‌ನಲ್ಲಿ ಮುಸ್ಲಿಂ ಸಮುದಾಯದವರಿಗೆ ತೆರೆದ ಮೈದಾನದಲ್ಲಿ ನಮಾಜ್ ಮಾಡಲು ಕೆಲವು ಹಿಂದುತ್ವಾವಾದಿ ಗುಂಪುಗಳು ಮತ್ತು ನಗರದ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇದರ ನಡುವೆಯೇ ರಸ್ತೆ, ವಾಹನಗಳ ಮೇಲೆ ಸಾವಿರಾರು ಮಂದಿ ನಮಾಜ್ ಮಾಡುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ಹಲವು ಮಂದಿ ಇದನ್ನು ಹಂಚಿಕೊಂಡಿದ್ದಾರೆ.

ರಸ್ತೆಯೊಂದರಲ್ಲಿ ಮತ್ತು ವಾಹನಗಳ ಮೇಲೆ ನಮಾಜ್ ಮಾಡುತ್ತಿರುವ ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯನ್ನು ತೋರಿಸುವ ಚಿತ್ರವನ್ನು ಹಂಚಿಕೊಂಡಿರುವ ಜನ, ಇದು ಭಾರತದ ಹೆದ್ದಾರಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿರುವ ದೃಶ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರವನ್ನು ಪೋಸ್ಟ್ ಮಾಡಿದ್ದ ತಾರೆಕ್ ಫತಾಹ್ ಎನ್ನುವವರು – ಟ್ವಿಟರ್‌ನಲ್ಲಿ 7.5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. “ಶುಕ್ರವಾರದ ಪ್ರಾರ್ಥನೆ ಮಾಡಲು ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿದೆ. ಇದು ನನಗೆ ಪ್ರಾರ್ಥನೆಯಂತೆ ತೋರುತ್ತಿಲ್ಲ. ಇತರರನ್ನು ಬೆದರಿಸಲು ಮಾಡಿರುವ ಸಂಖ್ಯೆಗಳ ಪ್ರದರ್ಶನವಾಗಿದೆ” ಎಂದು ಆರೋಪಿಸಿದ್ದಾರೆ. ಈಗ ಈ ಟ್ವೀಟ್ ಅಳಿಸಲಾಗಿದೆ. ಆದರೆ ಪೋಸ್ಟ್‌ನ ಆರ್ಕೈವ್ ಇಲ್ಲಿ ನೋಡಬಹುದು.

ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ಚಿತ್ರವನ್ನು ಗೂಗಲ್(Google) ಇಮೇಜ್ ಹುಡುಕಾಟದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ಹುಡುಕಾಡಿದಾಗ ಇದು ಭಾರತದಲ್ಲ, ಬಾಂಗ್ಲಾದೇಶದ ಚಿತ್ರ ಎಂಬುದು ತಿಳಿದು ಬಂದಿದೆ.

ಈ ಚಿತ್ರವು ಬಾಂಗ್ಲಾದೇಶದ ಗಾಜಿಪುರದ ಪ್ರಮುಖ ಪಟ್ಟಣವಾದ ಟೋಂಗಿಯಲ್ಲಿ ನಡೆದ ಮುಸ್ಲಿಮರ ವಾರ್ಷಿಕ ಕಾರ್ಯಕ್ರಮ ಬಿಶ್ವಾ ಇಜ್ತೆಮಾದ (Bishwa Ijtema) ಚಿತ್ರವಾಗಿದೆ. ಬಿಶ್ವಾ ಇಜ್ತೆಮಾವನ್ನು ವಿಶ್ವದ ಅತಿದೊಡ್ಡ ಮುಸ್ಲಿಮರ ಸಭೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಈ ವೈರಲ್ ಚಿತ್ರದ ಉತ್ತಮ-ಗುಣಮಟ್ಟದ ಪೋಟೋವನ್ನು ಸರಿಯಾಗಿ ಗಮನಿಸಿದರೆ, ನಾವು ಬಾಂಗ್ಲಾದಲ್ಲಿ ಹಸಿರು ಬೋರ್ಡ್ ಅನ್ನು ನೋಡಬಹುದು. ಅದರ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಬಿಸ್ವಾ ಇಜ್ತೆಮಾ, 2020” ಎಂದು ಬರೆಯಲಾಗಿದೆ. ಹಸಿರು ಬ್ಯಾನರ್‌ನ ಬಲಭಾಗದಲ್ಲಿ ಕಾಣುವ ಸಣ್ಣ ಕಾವಲು ಗೋಪುರದ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಗಾಜಿಪುರ ಮೆಟ್ರೋಪಾಲಿಟನ್ ಪೋಲೀಸ್” ಎಂದು ಬರೆದಿರುವುದನ್ನು ಕಾಣಬಹುದು.

ಚಿತ್ರದಲ್ಲಿ ಕಂಡುಬರುವ ಕೆಂಪು ಡಬಲ್ ಡೆಕ್ಕರ್ ಬಸ್‌ನಲ್ಲಿ “BRTC” (ಬಾಂಗ್ಲಾದೇಶ ರಸ್ತೆ ಸಾರಿಗೆ ಸಂಸ್ಥೆ) ಎಂದು ಬರೆಯಲಾಗಿದೆ. ಈ ಬಸ್ಸಿನ ಹಿಂದಿನ ಕೆಂಪು ಬೋರ್ಡ್‌ನಲ್ಲಿ “ಮೋತಿಝೀಲ್-ಫಾರ್ಮ್ ಗೇಟ್, ಸ್ಟೇಷನ್ ರೋಡ್ (ಮಾರ್ಗ)” ಎಂದು ಬಾಂಗ್ಲಾ ಭಾಷೆಯಲ್ಲಿ ಬರೆಯಲಾಗಿದೆ. Google Maps ನಲ್ಲಿ ಈ ಮಾರ್ಗವನ್ನು ಹುಡುಕಾಡಿದರೆ ಅದು ಬಾಂಗ್ಲಾದೇಶದಲ್ಲಿನ ಸ್ಥಳವನ್ನು ತೋರಿಸುತ್ತದೆ.

ಅಲ್ಲದೆ, “ಫೈನ್ ಆರ್ಟ್ ಅಮೆರಿಕಾ” ಸೈಟ್ ಒದಗಿಸಿದ ಮಾಹಿತಿಯ ಪ್ರಕಾರ, ವೈಮಾನಿಕ ಛಾಯಾಗ್ರಹಣಕ್ಕೆ ಹೆಸರುವಾಸಿಯಾದ ಬಾಂಗ್ಲಾದೇಶದ ಛಾಯಾಗ್ರಾಹಕ ಅಜೀಮ್ ಖಾನ್ ರೋನಿ ಅವರು ಚಿತ್ರವನ್ನು ಕ್ಲಿಕ್ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಜೀಮ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅನೇಕ ಚಿತ್ರಗಳು ಇದೇ ಚಿತ್ರವನ್ನು ಹೋಲಿವುದನ್ನು ಕಾಣಬಹುದು.

ಹೀಗಾಗಿ ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿ ನಮಾಜ್ ಮಾಡುತ್ತಿದ್ದಾರೆ ಎಂದಿರುವ ಪ್ರತಿಪಾದನೆ ತಪ್ಪಾಗಿದೆ. ಈ ಚಿತ್ರವು ಬಾಂಗ್ಲಾದೇಶದ ಧಾರ್ಮಿಕ ಸಭೆಯ ಚಿತ್ರ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...