Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

- Advertisement -
- Advertisement -

ದೆಹಲಿ- ಹರಿಯಾಣದ ಗಡಿಗೆ ಹೊಂದಿಕೊಂಡಿರುವ ಗುರುಗ್ರಾಮ್‌ನಲ್ಲಿ ಮುಸ್ಲಿಂ ಸಮುದಾಯದವರಿಗೆ ತೆರೆದ ಮೈದಾನದಲ್ಲಿ ನಮಾಜ್ ಮಾಡಲು ಕೆಲವು ಹಿಂದುತ್ವಾವಾದಿ ಗುಂಪುಗಳು ಮತ್ತು ನಗರದ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇದರ ನಡುವೆಯೇ ರಸ್ತೆ, ವಾಹನಗಳ ಮೇಲೆ ಸಾವಿರಾರು ಮಂದಿ ನಮಾಜ್ ಮಾಡುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ಹಲವು ಮಂದಿ ಇದನ್ನು ಹಂಚಿಕೊಂಡಿದ್ದಾರೆ.

ರಸ್ತೆಯೊಂದರಲ್ಲಿ ಮತ್ತು ವಾಹನಗಳ ಮೇಲೆ ನಮಾಜ್ ಮಾಡುತ್ತಿರುವ ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯನ್ನು ತೋರಿಸುವ ಚಿತ್ರವನ್ನು ಹಂಚಿಕೊಂಡಿರುವ ಜನ, ಇದು ಭಾರತದ ಹೆದ್ದಾರಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿರುವ ದೃಶ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರವನ್ನು ಪೋಸ್ಟ್ ಮಾಡಿದ್ದ ತಾರೆಕ್ ಫತಾಹ್ ಎನ್ನುವವರು – ಟ್ವಿಟರ್‌ನಲ್ಲಿ 7.5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. “ಶುಕ್ರವಾರದ ಪ್ರಾರ್ಥನೆ ಮಾಡಲು ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿದೆ. ಇದು ನನಗೆ ಪ್ರಾರ್ಥನೆಯಂತೆ ತೋರುತ್ತಿಲ್ಲ. ಇತರರನ್ನು ಬೆದರಿಸಲು ಮಾಡಿರುವ ಸಂಖ್ಯೆಗಳ ಪ್ರದರ್ಶನವಾಗಿದೆ” ಎಂದು ಆರೋಪಿಸಿದ್ದಾರೆ. ಈಗ ಈ ಟ್ವೀಟ್ ಅಳಿಸಲಾಗಿದೆ. ಆದರೆ ಪೋಸ್ಟ್‌ನ ಆರ್ಕೈವ್ ಇಲ್ಲಿ ನೋಡಬಹುದು.

ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ಚಿತ್ರವನ್ನು ಗೂಗಲ್(Google) ಇಮೇಜ್ ಹುಡುಕಾಟದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ಹುಡುಕಾಡಿದಾಗ ಇದು ಭಾರತದಲ್ಲ, ಬಾಂಗ್ಲಾದೇಶದ ಚಿತ್ರ ಎಂಬುದು ತಿಳಿದು ಬಂದಿದೆ.

ಈ ಚಿತ್ರವು ಬಾಂಗ್ಲಾದೇಶದ ಗಾಜಿಪುರದ ಪ್ರಮುಖ ಪಟ್ಟಣವಾದ ಟೋಂಗಿಯಲ್ಲಿ ನಡೆದ ಮುಸ್ಲಿಮರ ವಾರ್ಷಿಕ ಕಾರ್ಯಕ್ರಮ ಬಿಶ್ವಾ ಇಜ್ತೆಮಾದ (Bishwa Ijtema) ಚಿತ್ರವಾಗಿದೆ. ಬಿಶ್ವಾ ಇಜ್ತೆಮಾವನ್ನು ವಿಶ್ವದ ಅತಿದೊಡ್ಡ ಮುಸ್ಲಿಮರ ಸಭೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಈ ವೈರಲ್ ಚಿತ್ರದ ಉತ್ತಮ-ಗುಣಮಟ್ಟದ ಪೋಟೋವನ್ನು ಸರಿಯಾಗಿ ಗಮನಿಸಿದರೆ, ನಾವು ಬಾಂಗ್ಲಾದಲ್ಲಿ ಹಸಿರು ಬೋರ್ಡ್ ಅನ್ನು ನೋಡಬಹುದು. ಅದರ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಬಿಸ್ವಾ ಇಜ್ತೆಮಾ, 2020” ಎಂದು ಬರೆಯಲಾಗಿದೆ. ಹಸಿರು ಬ್ಯಾನರ್‌ನ ಬಲಭಾಗದಲ್ಲಿ ಕಾಣುವ ಸಣ್ಣ ಕಾವಲು ಗೋಪುರದ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಗಾಜಿಪುರ ಮೆಟ್ರೋಪಾಲಿಟನ್ ಪೋಲೀಸ್” ಎಂದು ಬರೆದಿರುವುದನ್ನು ಕಾಣಬಹುದು.

ಚಿತ್ರದಲ್ಲಿ ಕಂಡುಬರುವ ಕೆಂಪು ಡಬಲ್ ಡೆಕ್ಕರ್ ಬಸ್‌ನಲ್ಲಿ “BRTC” (ಬಾಂಗ್ಲಾದೇಶ ರಸ್ತೆ ಸಾರಿಗೆ ಸಂಸ್ಥೆ) ಎಂದು ಬರೆಯಲಾಗಿದೆ. ಈ ಬಸ್ಸಿನ ಹಿಂದಿನ ಕೆಂಪು ಬೋರ್ಡ್‌ನಲ್ಲಿ “ಮೋತಿಝೀಲ್-ಫಾರ್ಮ್ ಗೇಟ್, ಸ್ಟೇಷನ್ ರೋಡ್ (ಮಾರ್ಗ)” ಎಂದು ಬಾಂಗ್ಲಾ ಭಾಷೆಯಲ್ಲಿ ಬರೆಯಲಾಗಿದೆ. Google Maps ನಲ್ಲಿ ಈ ಮಾರ್ಗವನ್ನು ಹುಡುಕಾಡಿದರೆ ಅದು ಬಾಂಗ್ಲಾದೇಶದಲ್ಲಿನ ಸ್ಥಳವನ್ನು ತೋರಿಸುತ್ತದೆ.

ಅಲ್ಲದೆ, “ಫೈನ್ ಆರ್ಟ್ ಅಮೆರಿಕಾ” ಸೈಟ್ ಒದಗಿಸಿದ ಮಾಹಿತಿಯ ಪ್ರಕಾರ, ವೈಮಾನಿಕ ಛಾಯಾಗ್ರಹಣಕ್ಕೆ ಹೆಸರುವಾಸಿಯಾದ ಬಾಂಗ್ಲಾದೇಶದ ಛಾಯಾಗ್ರಾಹಕ ಅಜೀಮ್ ಖಾನ್ ರೋನಿ ಅವರು ಚಿತ್ರವನ್ನು ಕ್ಲಿಕ್ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಜೀಮ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅನೇಕ ಚಿತ್ರಗಳು ಇದೇ ಚಿತ್ರವನ್ನು ಹೋಲಿವುದನ್ನು ಕಾಣಬಹುದು.

ಹೀಗಾಗಿ ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿ ನಮಾಜ್ ಮಾಡುತ್ತಿದ್ದಾರೆ ಎಂದಿರುವ ಪ್ರತಿಪಾದನೆ ತಪ್ಪಾಗಿದೆ. ಈ ಚಿತ್ರವು ಬಾಂಗ್ಲಾದೇಶದ ಧಾರ್ಮಿಕ ಸಭೆಯ ಚಿತ್ರ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...