Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

- Advertisement -
- Advertisement -

ದೆಹಲಿ- ಹರಿಯಾಣದ ಗಡಿಗೆ ಹೊಂದಿಕೊಂಡಿರುವ ಗುರುಗ್ರಾಮ್‌ನಲ್ಲಿ ಮುಸ್ಲಿಂ ಸಮುದಾಯದವರಿಗೆ ತೆರೆದ ಮೈದಾನದಲ್ಲಿ ನಮಾಜ್ ಮಾಡಲು ಕೆಲವು ಹಿಂದುತ್ವಾವಾದಿ ಗುಂಪುಗಳು ಮತ್ತು ನಗರದ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇದರ ನಡುವೆಯೇ ರಸ್ತೆ, ವಾಹನಗಳ ಮೇಲೆ ಸಾವಿರಾರು ಮಂದಿ ನಮಾಜ್ ಮಾಡುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ಹಲವು ಮಂದಿ ಇದನ್ನು ಹಂಚಿಕೊಂಡಿದ್ದಾರೆ.

ರಸ್ತೆಯೊಂದರಲ್ಲಿ ಮತ್ತು ವಾಹನಗಳ ಮೇಲೆ ನಮಾಜ್ ಮಾಡುತ್ತಿರುವ ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯನ್ನು ತೋರಿಸುವ ಚಿತ್ರವನ್ನು ಹಂಚಿಕೊಂಡಿರುವ ಜನ, ಇದು ಭಾರತದ ಹೆದ್ದಾರಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿರುವ ದೃಶ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರವನ್ನು ಪೋಸ್ಟ್ ಮಾಡಿದ್ದ ತಾರೆಕ್ ಫತಾಹ್ ಎನ್ನುವವರು – ಟ್ವಿಟರ್‌ನಲ್ಲಿ 7.5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. “ಶುಕ್ರವಾರದ ಪ್ರಾರ್ಥನೆ ಮಾಡಲು ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿದೆ. ಇದು ನನಗೆ ಪ್ರಾರ್ಥನೆಯಂತೆ ತೋರುತ್ತಿಲ್ಲ. ಇತರರನ್ನು ಬೆದರಿಸಲು ಮಾಡಿರುವ ಸಂಖ್ಯೆಗಳ ಪ್ರದರ್ಶನವಾಗಿದೆ” ಎಂದು ಆರೋಪಿಸಿದ್ದಾರೆ. ಈಗ ಈ ಟ್ವೀಟ್ ಅಳಿಸಲಾಗಿದೆ. ಆದರೆ ಪೋಸ್ಟ್‌ನ ಆರ್ಕೈವ್ ಇಲ್ಲಿ ನೋಡಬಹುದು.

ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ಚಿತ್ರವನ್ನು ಗೂಗಲ್(Google) ಇಮೇಜ್ ಹುಡುಕಾಟದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ಹುಡುಕಾಡಿದಾಗ ಇದು ಭಾರತದಲ್ಲ, ಬಾಂಗ್ಲಾದೇಶದ ಚಿತ್ರ ಎಂಬುದು ತಿಳಿದು ಬಂದಿದೆ.

ಈ ಚಿತ್ರವು ಬಾಂಗ್ಲಾದೇಶದ ಗಾಜಿಪುರದ ಪ್ರಮುಖ ಪಟ್ಟಣವಾದ ಟೋಂಗಿಯಲ್ಲಿ ನಡೆದ ಮುಸ್ಲಿಮರ ವಾರ್ಷಿಕ ಕಾರ್ಯಕ್ರಮ ಬಿಶ್ವಾ ಇಜ್ತೆಮಾದ (Bishwa Ijtema) ಚಿತ್ರವಾಗಿದೆ. ಬಿಶ್ವಾ ಇಜ್ತೆಮಾವನ್ನು ವಿಶ್ವದ ಅತಿದೊಡ್ಡ ಮುಸ್ಲಿಮರ ಸಭೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಈ ವೈರಲ್ ಚಿತ್ರದ ಉತ್ತಮ-ಗುಣಮಟ್ಟದ ಪೋಟೋವನ್ನು ಸರಿಯಾಗಿ ಗಮನಿಸಿದರೆ, ನಾವು ಬಾಂಗ್ಲಾದಲ್ಲಿ ಹಸಿರು ಬೋರ್ಡ್ ಅನ್ನು ನೋಡಬಹುದು. ಅದರ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಬಿಸ್ವಾ ಇಜ್ತೆಮಾ, 2020” ಎಂದು ಬರೆಯಲಾಗಿದೆ. ಹಸಿರು ಬ್ಯಾನರ್‌ನ ಬಲಭಾಗದಲ್ಲಿ ಕಾಣುವ ಸಣ್ಣ ಕಾವಲು ಗೋಪುರದ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಗಾಜಿಪುರ ಮೆಟ್ರೋಪಾಲಿಟನ್ ಪೋಲೀಸ್” ಎಂದು ಬರೆದಿರುವುದನ್ನು ಕಾಣಬಹುದು.

ಚಿತ್ರದಲ್ಲಿ ಕಂಡುಬರುವ ಕೆಂಪು ಡಬಲ್ ಡೆಕ್ಕರ್ ಬಸ್‌ನಲ್ಲಿ “BRTC” (ಬಾಂಗ್ಲಾದೇಶ ರಸ್ತೆ ಸಾರಿಗೆ ಸಂಸ್ಥೆ) ಎಂದು ಬರೆಯಲಾಗಿದೆ. ಈ ಬಸ್ಸಿನ ಹಿಂದಿನ ಕೆಂಪು ಬೋರ್ಡ್‌ನಲ್ಲಿ “ಮೋತಿಝೀಲ್-ಫಾರ್ಮ್ ಗೇಟ್, ಸ್ಟೇಷನ್ ರೋಡ್ (ಮಾರ್ಗ)” ಎಂದು ಬಾಂಗ್ಲಾ ಭಾಷೆಯಲ್ಲಿ ಬರೆಯಲಾಗಿದೆ. Google Maps ನಲ್ಲಿ ಈ ಮಾರ್ಗವನ್ನು ಹುಡುಕಾಡಿದರೆ ಅದು ಬಾಂಗ್ಲಾದೇಶದಲ್ಲಿನ ಸ್ಥಳವನ್ನು ತೋರಿಸುತ್ತದೆ.

ಅಲ್ಲದೆ, “ಫೈನ್ ಆರ್ಟ್ ಅಮೆರಿಕಾ” ಸೈಟ್ ಒದಗಿಸಿದ ಮಾಹಿತಿಯ ಪ್ರಕಾರ, ವೈಮಾನಿಕ ಛಾಯಾಗ್ರಹಣಕ್ಕೆ ಹೆಸರುವಾಸಿಯಾದ ಬಾಂಗ್ಲಾದೇಶದ ಛಾಯಾಗ್ರಾಹಕ ಅಜೀಮ್ ಖಾನ್ ರೋನಿ ಅವರು ಚಿತ್ರವನ್ನು ಕ್ಲಿಕ್ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಜೀಮ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅನೇಕ ಚಿತ್ರಗಳು ಇದೇ ಚಿತ್ರವನ್ನು ಹೋಲಿವುದನ್ನು ಕಾಣಬಹುದು.

ಹೀಗಾಗಿ ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿ ನಮಾಜ್ ಮಾಡುತ್ತಿದ್ದಾರೆ ಎಂದಿರುವ ಪ್ರತಿಪಾದನೆ ತಪ್ಪಾಗಿದೆ. ಈ ಚಿತ್ರವು ಬಾಂಗ್ಲಾದೇಶದ ಧಾರ್ಮಿಕ ಸಭೆಯ ಚಿತ್ರ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...