Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

- Advertisement -
- Advertisement -

ದೆಹಲಿ- ಹರಿಯಾಣದ ಗಡಿಗೆ ಹೊಂದಿಕೊಂಡಿರುವ ಗುರುಗ್ರಾಮ್‌ನಲ್ಲಿ ಮುಸ್ಲಿಂ ಸಮುದಾಯದವರಿಗೆ ತೆರೆದ ಮೈದಾನದಲ್ಲಿ ನಮಾಜ್ ಮಾಡಲು ಕೆಲವು ಹಿಂದುತ್ವಾವಾದಿ ಗುಂಪುಗಳು ಮತ್ತು ನಗರದ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿರುವುದು ವರದಿಯಾಗುತ್ತಲೇ ಇದೆ. ಇದರ ನಡುವೆಯೇ ರಸ್ತೆ, ವಾಹನಗಳ ಮೇಲೆ ಸಾವಿರಾರು ಮಂದಿ ನಮಾಜ್ ಮಾಡುತ್ತಿರುವ ಚಿತ್ರವೊಂದು ವೈರಲ್ ಆಗಿದ್ದು, ಹಲವು ಮಂದಿ ಇದನ್ನು ಹಂಚಿಕೊಂಡಿದ್ದಾರೆ.

ರಸ್ತೆಯೊಂದರಲ್ಲಿ ಮತ್ತು ವಾಹನಗಳ ಮೇಲೆ ನಮಾಜ್ ಮಾಡುತ್ತಿರುವ ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯನ್ನು ತೋರಿಸುವ ಚಿತ್ರವನ್ನು ಹಂಚಿಕೊಂಡಿರುವ ಜನ, ಇದು ಭಾರತದ ಹೆದ್ದಾರಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿರುವ ದೃಶ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರವನ್ನು ಪೋಸ್ಟ್ ಮಾಡಿದ್ದ ತಾರೆಕ್ ಫತಾಹ್ ಎನ್ನುವವರು – ಟ್ವಿಟರ್‌ನಲ್ಲಿ 7.5 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. “ಶುಕ್ರವಾರದ ಪ್ರಾರ್ಥನೆ ಮಾಡಲು ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಮಾಡಲಾಗಿದೆ. ಇದು ನನಗೆ ಪ್ರಾರ್ಥನೆಯಂತೆ ತೋರುತ್ತಿಲ್ಲ. ಇತರರನ್ನು ಬೆದರಿಸಲು ಮಾಡಿರುವ ಸಂಖ್ಯೆಗಳ ಪ್ರದರ್ಶನವಾಗಿದೆ” ಎಂದು ಆರೋಪಿಸಿದ್ದಾರೆ. ಈಗ ಈ ಟ್ವೀಟ್ ಅಳಿಸಲಾಗಿದೆ. ಆದರೆ ಪೋಸ್ಟ್‌ನ ಆರ್ಕೈವ್ ಇಲ್ಲಿ ನೋಡಬಹುದು.

ಇದನ್ನೂ ಓದಿ: ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ಈ ಚಿತ್ರವನ್ನು ಗೂಗಲ್(Google) ಇಮೇಜ್ ಹುಡುಕಾಟದಲ್ಲಿ ಮತ್ತು ಬೇರೆ ಬೇರೆ ರೀತಿಯಲ್ಲಿ ಹುಡುಕಾಡಿದಾಗ ಇದು ಭಾರತದಲ್ಲ, ಬಾಂಗ್ಲಾದೇಶದ ಚಿತ್ರ ಎಂಬುದು ತಿಳಿದು ಬಂದಿದೆ.

ಈ ಚಿತ್ರವು ಬಾಂಗ್ಲಾದೇಶದ ಗಾಜಿಪುರದ ಪ್ರಮುಖ ಪಟ್ಟಣವಾದ ಟೋಂಗಿಯಲ್ಲಿ ನಡೆದ ಮುಸ್ಲಿಮರ ವಾರ್ಷಿಕ ಕಾರ್ಯಕ್ರಮ ಬಿಶ್ವಾ ಇಜ್ತೆಮಾದ (Bishwa Ijtema) ಚಿತ್ರವಾಗಿದೆ. ಬಿಶ್ವಾ ಇಜ್ತೆಮಾವನ್ನು ವಿಶ್ವದ ಅತಿದೊಡ್ಡ ಮುಸ್ಲಿಮರ ಸಭೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಈ ವೈರಲ್ ಚಿತ್ರದ ಉತ್ತಮ-ಗುಣಮಟ್ಟದ ಪೋಟೋವನ್ನು ಸರಿಯಾಗಿ ಗಮನಿಸಿದರೆ, ನಾವು ಬಾಂಗ್ಲಾದಲ್ಲಿ ಹಸಿರು ಬೋರ್ಡ್ ಅನ್ನು ನೋಡಬಹುದು. ಅದರ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಬಿಸ್ವಾ ಇಜ್ತೆಮಾ, 2020” ಎಂದು ಬರೆಯಲಾಗಿದೆ. ಹಸಿರು ಬ್ಯಾನರ್‌ನ ಬಲಭಾಗದಲ್ಲಿ ಕಾಣುವ ಸಣ್ಣ ಕಾವಲು ಗೋಪುರದ ಮೇಲೆ ಬಾಂಗ್ಲಾ ಭಾಷೆಯಲ್ಲಿ “ಗಾಜಿಪುರ ಮೆಟ್ರೋಪಾಲಿಟನ್ ಪೋಲೀಸ್” ಎಂದು ಬರೆದಿರುವುದನ್ನು ಕಾಣಬಹುದು.

ಚಿತ್ರದಲ್ಲಿ ಕಂಡುಬರುವ ಕೆಂಪು ಡಬಲ್ ಡೆಕ್ಕರ್ ಬಸ್‌ನಲ್ಲಿ “BRTC” (ಬಾಂಗ್ಲಾದೇಶ ರಸ್ತೆ ಸಾರಿಗೆ ಸಂಸ್ಥೆ) ಎಂದು ಬರೆಯಲಾಗಿದೆ. ಈ ಬಸ್ಸಿನ ಹಿಂದಿನ ಕೆಂಪು ಬೋರ್ಡ್‌ನಲ್ಲಿ “ಮೋತಿಝೀಲ್-ಫಾರ್ಮ್ ಗೇಟ್, ಸ್ಟೇಷನ್ ರೋಡ್ (ಮಾರ್ಗ)” ಎಂದು ಬಾಂಗ್ಲಾ ಭಾಷೆಯಲ್ಲಿ ಬರೆಯಲಾಗಿದೆ. Google Maps ನಲ್ಲಿ ಈ ಮಾರ್ಗವನ್ನು ಹುಡುಕಾಡಿದರೆ ಅದು ಬಾಂಗ್ಲಾದೇಶದಲ್ಲಿನ ಸ್ಥಳವನ್ನು ತೋರಿಸುತ್ತದೆ.

ಅಲ್ಲದೆ, “ಫೈನ್ ಆರ್ಟ್ ಅಮೆರಿಕಾ” ಸೈಟ್ ಒದಗಿಸಿದ ಮಾಹಿತಿಯ ಪ್ರಕಾರ, ವೈಮಾನಿಕ ಛಾಯಾಗ್ರಹಣಕ್ಕೆ ಹೆಸರುವಾಸಿಯಾದ ಬಾಂಗ್ಲಾದೇಶದ ಛಾಯಾಗ್ರಾಹಕ ಅಜೀಮ್ ಖಾನ್ ರೋನಿ ಅವರು ಚಿತ್ರವನ್ನು ಕ್ಲಿಕ್ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ. ಅಜೀಮ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಅನೇಕ ಚಿತ್ರಗಳು ಇದೇ ಚಿತ್ರವನ್ನು ಹೋಲಿವುದನ್ನು ಕಾಣಬಹುದು.

ಹೀಗಾಗಿ ಭಾರತದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟುಮಾಡಿ ನಮಾಜ್ ಮಾಡುತ್ತಿದ್ದಾರೆ ಎಂದಿರುವ ಪ್ರತಿಪಾದನೆ ತಪ್ಪಾಗಿದೆ. ಈ ಚಿತ್ರವು ಬಾಂಗ್ಲಾದೇಶದ ಧಾರ್ಮಿಕ ಸಭೆಯ ಚಿತ್ರ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...