Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

70 ವರ್ಷಗಳಿಂದ ಭಾರತದಲ್ಲಿ ಪಾಕಿಸ್ತಾನ ಧ್ವಜವನ್ನು ಹಾರಿಸಿ ನಮ್ಮನ್ನು ಕೆರಳಿಸುತ್ತಿದ್ದರು. ಈಗ ಪಾಕಿಸ್ತಾನದಲ್ಲಿ ಭಾರತದ ಧ್ವಜ ಹಾರಾಡುತ್ತಿದೆ ಎಂದು ಚಿತ್ರವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಪಾಕಿಸ್ತಾನದ ಕರಾಚಿಯಲ್ಲಿ ನಡೆದ ಪ್ರತಿಭಟನೆಯ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಆ ಪ್ರತಿಭಟನೆಯಲ್ಲಿ ಭಾರತದ ಬಾವುಟವನ್ನು ಬಳಸಿರುವುದಾಗಿ ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಶುಭಮ್‌ರಾಜ್ ಎಂಬುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇದಕ್ಕೆ ಸಂಬಂಧಿಸಿದ ಚಿತ್ರವೊಂದನ್ನು ಹಂಚಿಕೊಂಡಿದ್ದು, “70 ವರ್ಷಗಳಿಂದ ಭಾರತದಲ್ಲಿ ಪಾಕಿಸ್ತಾನ ಧ್ವಜವನ್ನು ಹಾರಿಸಿ ನಮ್ಮನ್ನು ಕೆರಳಿಸುತ್ತಿದ್ದರು. ಈಗ ಪಾಕಿಸ್ತಾನದಲ್ಲಿ ಭಾರತದ ಧ್ವಜ ಹಾರಾಡುತ್ತಿದೆ” ಎಂದು ಬರೆದುಕೊಂಡಿದ್ದಾರೆ.

 

ಈ ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಇದೇ ಹೇಳಿಕೆಯೊಂದಿಗೆ ನೂರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು, ಫೇಸ್‌ಬುಕ್ ಮತ್ತು ಟ್ವಿಟ್ಟರ್ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ಪೋಸ್ಟ್‌ನ ಕೆಲವು ಕೀವರ್ಡ್‌ಗಳನ್ನು (ಕರಾಚಿಯಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು) ತೆಗೆದು ಗೂಗಲ್ ಹುಡುಕಾಟ ನಡೆಸಿದಾಗ, ಹಲವು ಸುದ್ದಿ ಸಂಸ್ಥೆಗಳ ವರದಿಗಳು ಪತ್ತೆಯಾದವು.

ರಾಯಿಟರ್ಸ್ ಪ್ರಕಾರ, “ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಉಚ್ಚಾಟಿಸುವ ಅಭಿಯಾನದ ಭಾಗವಾಗಿ ಅಕ್ಟೋಬರ್ 18 ರಂದು ಕರಾಚಿಯಲ್ಲಿ ನೂರಾರು ವಿರೋಧ ಪಕ್ಷದ ಬೆಂಬಲಿಗರು ಒಟ್ಟುಗೂಡಿದ್ದರು” ಎಂದು ವರದಿ ಮಾಡಿದೆ.

ನಂತರ ಈ ಫೋಟೋ ಮೂಲಕ ರಿವರ್ಸ್‌ ಇಮೇಜ್ ಹುಡುಕಾಟ ಮಾಡಿದಾಗ, ಪಾಕಿಸ್ತಾನ ಮುಸ್ಲಿಂ ಲೀಗ್ (ನವಾಜ್) ಮಾಡಿರುವ ಟ್ವೀಟ್ ಪತ್ತೆಯಾಯಿತು.

ಭಾರತದಲ್ಲಿ ವೈರಲ್ ಆಗುತ್ತಿರುವ ಚಿತ್ರವನ್ನು ಈ ಮೇಲೆ ಟ್ವೀಟ್ ಮಾಡಿರುವ ಚಿತ್ರದೊಂದಿಗೆ ಹೋಲಿಸಿ ನೋಡಿದಾಗ, ಭಾರತದ ಬಾವುಟವನ್ನು ಹಾರಿಸಲಾಗಿದೆ ಎನ್ನುವ ಚಿತ್ರವನ್ನು ಫೋಟೋಶಾಪ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ಭಾರತದ ಬಾವುಟ ಹಾರಾಡುತ್ತಿದೆ ಎಂದು ಹಂಚಿಕೊಂಡಿರುವ ಚಿತ್ರವನ್ನು ಜೂಮ್ ಮಾಡಿ ಅದಕ್ಕೆ ಭಾರತದ ಬಾವುಟವನ್ನು ಫೋಟೋಶಾಪ್ ಮಾಡಲಾಗಿದೆ.

ಕರಾಚಿಯಲ್ಲಿ ನಡೆದ ಸರ್ಕಾರ ವಿರೋಧಿ ರ್ಯಾಲಿಯಲ್ಲಿ ಭಾರತೀಯ ಧ್ವಜವನ್ನು ಹಾರಿಸಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...