Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದು, "ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿಯಾಗಿದೆ ಎನ್ನುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಅಕ್ಟೋಬರ್ 29 ರಂದು ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ದಾಳಿಯ ಅಕ್ರೋಶದ ನಡುವೆ ಈ ವೀಡಿಯೋ ಹರಿದಾಡುತ್ತಿದೆ.

“ಮ್ಯಾಕ್ರಾನ್ 100 ಕ್ಕೂ ಹೆಚ್ಚು ಮಸೀದಿಗಳನ್ನು ಫ್ರಾನ್ಸ್‌ನಾದ್ಯಂತ ಮುಚ್ಚುತ್ತಲೇ ಇದೆ” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಈ ಲೇಖನವನ್ನು ಬರೆಯುವ ಸಮಯದಲ್ಲಿ 48,700 ಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 1,100 ಲೈಕ್‌ಗಳು ದಾಖಲಾಗಿವೆ.

ಇದನ್ನೂ ಓದಿ: ಫ್ರಾನ್ಸ್ ಚರ್ಚ್‌ ದಾಳಿಯಲ್ಲಿ 3 ಸಾವು: ’ಅಲ್ಲಾಹು ಅಕ್ಬರ್‌’ ಎನ್ನುತ್ತಾ ಮಹಿಳೆಯ ಶಿರಚ್ಚೇದ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು.

ಅರೇಬಿಕ್ ಶೀರ್ಷಿಕೆ ಹೊಂದಿರುವ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಫ್ರಾನ್ಸ್ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ” ಎಂದು ಬರೆದುಕೊಂಡಿದ್ದಾರೆ.

ಇದರ ಆರ್ಕೈವ್ ಆವತ್ತಿಯನ್ನು ಇಲ್ಲಿ ನೋಡಬಹುದು. ಇದೇ ಹೆಳಿಕೆಯೊಂದಿಗೆ ನೂರಾರು ಜನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: 

ಪ್ಯಾರಿಸ್ ಉಪನಗರ ಕ್ಲಿಚಿಯಲ್ಲಿನ ಮಸೀದಿಯ ಮೇಲೆ ‘ದಾಳಿ ಮಾಡಲಾಗಿದೆ’ ಎಂಬ ಪದವನ್ನು ಬಳಸಿ ಫ್ರೆಂಚ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ಮಾಡಲಾಯಿತು. ಆಗ ಮಾರ್ಚ್ 2017 ರಲ್ಲಿ ಅಪ್‌ಲೋಡ್ ಮಾಡಲಾದ ಹಲವಾರು ಯೂಟ್ಯೂಬ್ ವೀಡಿಯೊಗಳು ಕಂಡುಬಂದವು. ಈ ವೀಡಿಯೋದಲ್ಲಿ “ಡೌನ್‌ಟೌನ್‌ ಕ್ಲಿಚಿ-ಲಾ-ಗರೆನ್ನೆಯಲ್ಲಿರುವ ಮಸೀದಿಯನ್ನು ಸ್ಥಳಾಂತರಿಸುವುದು” ಮತ್ತು “ಸಿಆರ್‌ಎಸ್ ಪ್ಯಾರಿಸ್‌ ಮುಚ್ಚಿದ ಕ್ಲಿಚಿ ಮಸೀದಿ” ಎಂದು ವಿವರಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಎಳೆದಾಡುತ್ತಿರುವ ಕೆಂಪು ಬಣ್ಣದ ಉಡುಪಿನ ವ್ಯಕ್ತಿಯಿರುವ ದೃಶ್ಯಗಳು ಕಂಡುಬಂದಿದೆ.

ಇದನ್ನೂ ಓದಿ: ಬಿಜೆಪಿ ಸೇರಿರುವ ಈ ಶೂಟರ್‌‌ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಪುತ್ರಿ ಅಲ್ಲ; ಯಾರಿವರು?

ಇಷ್ಟೆ ಅಲ್ಲದೆ ಫ್ರೆಂಚ್ ದೈನಂದಿನ ಸುದ್ದಿ ಪತ್ರಿಕೆ ‘20 ಮಿನಿಟ್ಸ್‌’ ಇದೇ ರೀತಿಯ ದೃಶ್ಯಗಳನ್ನು ಹೊಂದಿದೆ.

ಇದರಲ್ಲಿ, ಫ್ರೆಂಚ್ ರಾಷ್ಟ್ರೀಯ ಪೊಲೀಸರ ಸಾಮಾನ್ಯ ಮೀಸಲು “ಕಂಪ್ಯಾಗ್ನೀಸ್ ರಿಪಬ್ಲಿಕನ್ಸ್ ಡಿ ಸೆಕುರಿಟಾ(CRS)” ಕ್ಲಿಚಿಯ ಟೌನ್ ಹಾಲ್‌ನಲ್ಲಿರುವ ‘ಪ್ರಾರ್ಥನಾ ಕೊಠಡಿಯಿಂದ’ ಮುಸ್ಲಿಮರನ್ನು ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಟೌನ್ ಹಾಲ್ ಬದಲಿಗೆ ಮುಸ್ಲಿಂ ಸಮುದಾಯವು ತಮ್ಮ ಪ್ರಾರ್ಥನೆಗಾಗಿ ಆಕ್ರಮಿಸಿಕೊಂಡಿರುವ ಕೋಣೆಯಲ್ಲಿ ಮಾಧ್ಯಮ ಗ್ರಂಥಾಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಹಾಗಾಗಿ ಈ ವರದಿಗಳಿಂದ ತಿಳಿದುಬರುವುದೇನೆಂದರೆ, “2017ರ ಹಳೆಯ ವೀಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ” ಎಂಬುದು ಸ್ಪಷ್ಟವಾಗಿದೆ. ಆದಾಗ್ಯೂ ಕೆಲವು ವರದಿಗಳ ಪ್ರಕಾರ ಪೊಲೀಸರು ಪ್ರಾರ್ಥನಾ ಕೊಠಡಿಯನ್ನಷ್ಟೆ ಸ್ಥಳಾಂತರಿಸಿದ್ದಾರೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...