Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...