Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...