Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...