Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....