Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...