Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

- Advertisement -
- Advertisement -

‘ಕೇರಳದ ಮಲಪ್ಪುರಂ ಜಿಲ್ಲಾಧಿಕಾರಿ ರಾಣಿ ಸೋಯಮೋಯ್‌ ಅವರು ಏಕೆ ಮೇಕಪ್ ಮಾಡಿಕೊಳ್ಳುವುದಿಲ್ಲ’ ಎಂಬ ಬರಹವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. ಸೋಯಮೋಯ್‌ ಅವರು ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಇದೆಂದು ಬರಹವನ್ನು ಸಾಕಷ್ಟು ವೈರಲ್ ಮಾಡಲಾಗುತ್ತಿದೆ. ಮೊದಲು ಮಲೆಯಾಳಂನಲ್ಲಿ ಬಂದ ಈ ಬರಹ, ನಂತರ ಇಂಗ್ಲಿಷ್‌ಗೆ, ಈಗ ಕನ್ನಡಕ್ಕೂ ಅನುವಾದವಾಗಿದೆ. ಆ ಪೋಸ್ಟ್ ಈ ಕೆಳಗಿನಂತಿದೆ:

ಜಿಲ್ಲಾಧಿಕಾರಿ ಯಾಕೆ ಮೇಕಪ್ ಹಾಕಿಲ್ಲ…?
ಮಲಪ್ಪುರಂ ಜಿಲ್ಲಾಧಿಕಾರಿ ಶ್ರೀಮತಿ ರಾಣಿ ಸೋಯಾಮೊಯ್ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ…
……………………………………

ಕೇರಳ ರಾಜ್ಯದ ಜಿಲ್ಲಾಧಿಕಾರಿ ಕೈಗಡಿಯಾರವನ್ನು ಹೊರತುಪಡಿಸಿ ಬೇರೆ ಯಾವುದೇ ಆಭರಣವನ್ನು ಧರಿಸಿರಲಿಲ್ಲ. ಬಹುತೇಕ ಮಕ್ಕಳಿಗೆ ಅಚ್ಚರಿಯ ವಿಷಯವೆಂದರೆ ಅವರು ಮುಖಕ್ಕೆ ಪೌಡರ್ ಕೂಡ ಬಳಸಿರಲಿಲ್ಲ.

ಮಕ್ಕಳು ಜಿಲ್ಲಾಧಿಕಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದರು.
ಪ್ರ: ನಿಮ್ಮ ಹೆಸರೇನು?

ನನ್ನ ಹೆಸರು ರಾಣಿ. ಸೋಯಾಮೊಯ್ ನನ್ನ ಕುಟುಂಬದ ಹೆಸರು. ನಾನು ಜಾರ್ಖಂಡ್ ಮೂಲದವಳು.

ಒಬ್ಬ ತೆಳ್ಳಗಿನ ಹುಡುಗಿ ಪ್ರೇಕ್ಷಕರಿಂದ ಎದ್ದು ನಿಂತಳು.

“ಮೇಡಂ, ನಿಮ್ಮ ಮುಖಕ್ಕೆ ಮೇಕಪ್ ಏಕೆ ಬಳಸಬಾರದು?”

ಡಿಸ್ಟ್ರಿಕ್ಟ್ ಕಲೆಕ್ಟರ್ ಮುಖ ಇದ್ದಕ್ಕಿದ್ದಂತೆ ವಿವರ್ಣವಾಯಿತು. ತೆಳುವಾದ ಹಣೆಯ ಮೇಲೆ ಬೆವರು ಹರಿಯಿತು. ಮುಖದಲ್ಲಿನ ನಗು ಮರೆಯಾಯಿತು. ಸಭಿಕರು ಇದ್ದಕ್ಕಿದ್ದಂತೆ ಮೌನವಾದರು. ಟೇಬಲ್ ಮೇಲಿದ್ದ ನೀರಿನ ಬಾಟಲಿಯನ್ನು ತೆರೆದು ಸ್ವಲ್ಪ ಕುಡಿದು, ಮಗುವಿಗೆ ಕುಳಿತುಕೊಳ್ಳುವಂತೆ ಸನ್ನೆ ಮಾಡಿದರು. ನಂತರ ನಿಧಾನವಾಗಿ ಮಾತನಾಡತೊಡಗಿದರು.

ನಾನು ಹುಟ್ಟಿದ್ದು ಜಾರ್ಖಂಡ್‌ ರಾಜ್ಯದ ಬುಡಕಟ್ಟು ಪ್ರದೇಶದಲ್ಲಿ. ನಾನು ಹುಟ್ಟಿದ್ದು ಕೊಡೆರ್ಮಾ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ “ಮೈಕಾ” ಗಣಿಗಳಿಂದ ತುಂಬಿದ ಸಣ್ಣ ಗುಡಿಸಲಿನಲ್ಲಿ. ನನ್ನ ತಂದೆ ಮತ್ತು ತಾಯಿ ಗಣಿಗಾರರಾಗಿದ್ದರು. ನನಗೆ ಇಬ್ಬರು ಸಹೋದರರು ಮತ್ತು ಒಬ್ಬ ಸಹೋದರಿ ಇದ್ದರು. ಮಳೆ ಬಂದರೆ ಸೋರುವ ಪುಟ್ಟ ಗುಡಿಸಲಿನಲ್ಲಿ ವಾಸ. ಬೇರೆ ಕೆಲಸ ಸಿಗದ ಕಾರಣ ನನ್ನ ತಂದೆ-ತಾಯಿ ಗಣಿಗಳಲ್ಲಿ ಅತ್ಯಲ್ಪ ಸಂಬಳಕ್ಕೆ ದುಡಿಯುತ್ತಿದ್ದರು. ಇದು ತುಂಬಾ ಗೊಂದಲಮಯ ಕೆಲಸವಾಗಿತ್ತು.

ನಾನು ನಾಲ್ಕು ವರ್ಷದವಳಾಗಿದ್ದಾಗ, ನನ್ನ ತಂದೆ, ತಾಯಿ ಮತ್ತು ಇಬ್ಬರು ಸಹೋದರರು ವಿವಿಧ ಕಾಯಿಲೆಗಳಿಂದ ಹಾಸಿಗೆ ಹಿಡಿದರು. ಗಣಿಗಳಲ್ಲಿನ ಮಾರಣಾಂತಿಕ ಮೈಕಾ ಧೂಳನ್ನು ಆಘ್ರಾಣಿಸುವ ಮೂಲಕ ಈ ರೋಗವು ಉಂಟಾಗುತ್ತದೆ ಎಂದು ಅವರು ಆ ಸಮಯದಲ್ಲಿ ತಿಳಿದಿರಲಿಲ್ಲ. ನಾನು ಐದು ವರ್ಷದವಳಾಗಿದ್ದಾಗ, ನನ್ನ ಸಹೋದರರು ಅನಾರೋಗ್ಯದಿಂದ ನಿಧನರಾದರು.

ಒಂದು ಸಣ್ಣ ನಿಟ್ಟುಸಿರಿನೊಂದಿಗೆ ಕಲೆಕ್ಟರ್ ಮಾತು ನಿಲ್ಲಿಸಿ ಕಣ್ಣೀರಿನಿಂದ ತುಂಬಿದ ಕಣ್ಣುಗಳನ್ನು ಮುಚ್ಚಿದರು.

ಹೆಚ್ಚಿನ ದಿನಗಳಲ್ಲಿ ನಮ್ಮ ಆಹಾರ ನೀರು ಮತ್ತು ಒಂದು ಅಥವಾ ಎರಡು ಬ್ರೆಡ್ ಅನ್ನು ಒಳಗೊಂಡಿತ್ತು. ನನ್ನ ಸಹೋದರರಿಬ್ಬರೂ ತೀವ್ರ ಅನಾರೋಗ್ಯ ಮತ್ತು ಹಸಿವಿನಿಂದ ಇಹಲೋಕ ತ್ಯಜಿಸಿದರು. ನನ್ನ ಹಳ್ಳಿಯಲ್ಲಿ ವೈದ್ಯರ ಬಳಿಗೆ ಅಥವಾ ಶಾಲೆಗೆ ಹೋಗುವವರು ಇರಲಿಲ್ಲ. ಶಾಲೆ, ಆಸ್ಪತ್ರೆ, ವಿದ್ಯುತ್ ಅಥವಾ ಶೌಚಾಲಯ ಇಲ್ಲದ ಗ್ರಾಮವನ್ನು ನೀವು ಊಹಿಸಬಲ್ಲಿರಾ?
ಒಂದು ದಿನ ನಾನು ಹಸಿದಿದ್ದಾಗ, ನನ್ನ ತಂದೆ ನನ್ನನ್ನು, ಎಲ್ಲಾ ಚರ್ಮ ಮತ್ತು ಮೂಳೆಗಳನ್ನು ಹಿಡಿದು ಎಳೆದ ಕಬ್ಬಿಣದ ಹಾಳೆಗಳಿಂದ ಮುಚ್ಚಿದ ದೊಡ್ಡ ಗಣಿ ಬಳಿಗೆ ಎಳೆದೊಯ್ದರು. ಕಾಲಾಂತರದಲ್ಲಿ ಕುಖ್ಯಾತಿ ಗಳಿಸಿದ್ದ ಮೈಕಾ ಗಣಿ ಅದು. ಇದು ಪುರಾತನ ಗಣಿಯಾಗಿದ್ದು, ಭೂಗತ ಲೋಕವನ್ನು ಅಗೆದು ಹಾಕಲಾಯಿತು. ನನ್ನ ಕೆಲಸವು ಕೆಳಭಾಗದಲ್ಲಿರುವ ಸಣ್ಣ ಗುಹೆಗಳ ಮೂಲಕ ತೆವಳುತ್ತಾ ಮೈಕಾ ಅದಿರುಗಳನ್ನು ಸಂಗ್ರಹಿಸುವುದು. ಹತ್ತು ವರ್ಷದೊಳಗಿನ ಮಕ್ಕಳಿಗೆ ಮಾತ್ರ ಇದು ಸಾಧ್ಯವಿತ್ತು.
ನನ್ನ ಜೀವನದಲ್ಲಿ ಮೊದಲ ಬಾರಿಗೆ, ನಾನು ಹೊಟ್ಟೆ ತುಂಬಾ ಬ್ರೆಡ್ ತಿಂದೆ. ಆದರೆ ಆ ದಿನ ನಾನು ವಾಂತಿ ಮಾಡಿಕೊಂಡೆ. ನಾನು ಒಂದನೇ ತರಗತಿಯಲ್ಲಿದ್ದಾಗ, ನಾನು ವಿಷಪೂರಿತ ಧೂಳನ್ನು ಉಸಿರಾಡುವ ಕತ್ತಲೆಯ ಕೋಣೆಗಳ ಮೂಲಕ ಮೈಕಾವನ್ನು ನುಂಗುತ್ತಿದ್ದೆ. ಸಾಂದರ್ಭಿಕ ಭೂಕುಸಿತದಲ್ಲಿ ದುರದೃಷ್ಟಕರ ಮಕ್ಕಳು ಸಾಯುವುದು ಸಾಮಾನ್ಯ ಸಂಗತಿಯಾಗಿರಲಿಲ್ಲ. ಮತ್ತು ಕೆಲವರು ಮಾರಣಾಂತಿಕ ಕಾಯಿಲೆಗೆ ತುತ್ತಾಗುತಿದ್ದರು. ದಿನಕ್ಕೆ ಎಂಟು ಗಂಟೆ ಕೆಲಸ ಮಾಡಿದರೆ ಕನಿಷ್ಠ ಒಂದು ರೊಟ್ಟಿಯಾದರೂ ಸಿಗುತ್ತದೆ. ಹಸಿವು ಮತ್ತು ಹಸಿವಿನಿಂದ ನಾನು ಪ್ರತಿದಿನ ತೆಳ್ಳಗೆ ಮತ್ತು ನಿರ್ಜಲೀಕರಣಗೊಂಡಿದ್ದೆ.

ಒಂದು ವರ್ಷದ ನಂತರ ನನ್ನ ತಂಗಿಯೂ ಗಣಿ ಕೆಲಸಕ್ಕೆ ಹೋಗತೊಡಗಿದಳು. ಸ್ವಲ್ಪ ಚೇತರಿಸಿಕೊಂಡ ತಕ್ಷಣ ನಾನು ಅಪ್ಪ, ಅಮ್ಮ, ತಂಗಿ ಸೇರಿ ದುಡಿದು ಕೊಂಚ ಬದುಕುವ ಹಂತಕ್ಕೆ ಬಂದೆವು. ಆದರೆ ವಿಧಿ ಇನ್ನೊಂದು ರೂಪದಲ್ಲಿ ನಮ್ಮನ್ನು ಕಾಡಲಾರಂಭಿಸಿತ್ತು. ಒಂದು ದಿನ ನಾನು ವಿಪರೀತ ಜ್ವರದಿಂದ ಕೆಲಸಕ್ಕೆ ಹೋಗದೆ ಇದ್ದಾಗ ಇದ್ದಕ್ಕಿದ್ದಂತೆ ಮಳೆ ಬಂತು. ಗಣಿ ತಳದಲ್ಲಿ ಕಾರ್ಮಿಕರ ಮುಂದೆ ಗಣಿ ಕುಸಿದು ನೂರಾರು ಜನರು ಸತ್ತರು. ಅವರಲ್ಲಿ ನನ್ನ ತಂದೆ, ತಾಯಿ ಮತ್ತು ಸಹೋದರಿ ಕೂಡಾ. ಸಭಿಕರೆಲ್ಲರೂ ಉಸಿರಾಡುವುದನ್ನೂ ಮರೆತರು. ಹಲವರ ಕಣ್ಣಲ್ಲಿ ನೀರು ತುಂಬಿತ್ತು.

ನನಗೆ ಕೇವಲ ಆರು ವರ್ಷ ಎಂದು ನಾನು ನೆನಪಿಸಿಕೊಳ್ಳಬೇಕು. ಕೊನೆಗೆ ನಾನು ಸರ್ಕಾರಿ ಮಂದಿರಕ್ಕೆ ಬಂದೆ. ಅಲ್ಲಿ ನಾನು ಶಿಕ್ಷಣ ಪಡೆದೆ. ನನ್ನ ಹಳ್ಳಿಯಿಂದ ವರ್ಣಮಾಲೆ ಕಲಿತ ಮೊದಲಿಗಳು ನಾನು. ಅಂತಿಮವಾಗಿ ಇಲ್ಲಿ ನಿಮ್ಮ ಮುಂದೆ ಜಿಲ್ಲಾಧಿಕಾರಿ ಆಗದ್ದೇನೆ. ನಾನು ಮೇಕಪ್ ಮಾಡದಿರುವುದಕ್ಕೂ ಇದಕ್ಕೂ ಏನು ಸಂಬಂಧ ಎಂದು ನೀವು ಆಶ್ಚರ್ಯ ಪಡಬಹುದು. ಆ ದಿನಗಳಲ್ಲಿ ಕತ್ತಲೆಯಲ್ಲಿ ತೆವಳುತ್ತಾ ನಾನು ಸಂಗ್ರಹಿಸಿದ ಸಂಪೂರ್ಣ ಮೈಕಾವನ್ನು ಮೇಕಪ್ ಉತ್ಪನ್ನಗಳಲ್ಲಿ ಬಳಸಲಾಗುತ್ತಿದೆ ಎಂದು ನನಗೆ ಆಗ ಅರಿವಾಯಿತು.

ಮೈಕಾ ಫ್ಲೋರೋಸೆಂಟ್ ಸಿಲಿಕೇಟ್ ಖನಿಜದ ಮೊದಲ ವಿಧವಾಗಿದೆ. ಅನೇಕ ದೊಡ್ಡ ಕಾಸ್ಮೆಟಿಕ್ ಕಂಪನಿಗಳು ನೀಡುವ ಖನಿಜ ಮೇಕಪ್ ಗಳಲ್ಲಿ, ಬಹು-ಬಣ್ಣದ ಮೈಕಾ ಅತ್ಯಂತ ವರ್ಣರಂಜಿತವಾಗಿದೆ, ಅದು ನಿಮ್ಮ ತ್ವಚೆಯನ್ನು 20,000 ಚಿಕ್ಕ ಮಕ್ಕಳ ಪ್ರಾಣವನ್ನು ಪಣಕ್ಕಿಡುವಂತೆ ಮಾಡುತ್ತದೆ. ಗುಲಾಬಿಯ ಮೃದುತ್ವವು ನಿಮ್ಮ ಕೆನ್ನೆಗಳ ಮೇಲೆ ಅವರ ಸುಟ್ಟ ಕನಸುಗಳು, ಅವರ ಛಿದ್ರಗೊಂಡ ಜೀವನ ಮತ್ತು ಕಲ್ಲುಗಳ ನಡುವೆ ಪುಡಿಮಾಡಿದ ಮಾಂಸ ಮತ್ತು ರಕ್ತದೊಂದಿಗೆ ಹರಡುತ್ತದೆ. ಲಕ್ಷಾಂತರ ಡಾಲರ್ ಮೌಲ್ಯದ ಮೈಕಾವನ್ನು ಇನ್ನೂ ಮಗುವಿನ ಕೈಗಳಿಂದ ಗಣಿಗಳಿಂದ ಎತ್ತಿಕೊಳ್ಳಲಾಗುತ್ತದೆ. ನಮ್ಮ ಸೌಂದರ್ಯವನ್ನು ಹೆಚ್ಚಿಸಲು.

ಈಗ ನೀನು ಹೇಳು. ನನ್ನ ಮುಖದ ಮೇಲೆ ನಾನು ಮೇಕಪ್ ಅನ್ನು ಹೇಗೆ ಮಾಡಿಕೊಳ್ಳಲಿ? ಹಸಿವಿನಿಂದ ಸಾವಿಗೀಡಾದ ನನ್ನ ಸಹೋದರರ ನೆನಪಿಗಾಗಿ ನಾನು ಹೇಗೆ ಹೊಟ್ಟೆ ತುಂಬ ತಿನ್ನಲಿ? ಸದಾ ಹರಿದ ಬಟ್ಟೆ ತೊಡುತಿದ್ದ ಅಮ್ಮನ ನೆನಪಿಗಾಗಿ ದುಬಾರಿ ಬೆಲೆಯ ರೇಷ್ಮೆ ಬಟ್ಟೆ ತೊಡುವುದು ಹೇಗೆ?

ಒಂದು ಸಣ್ಣ ನಗುವನ್ನು ತುಂಬಿಕೊಂಡು ಬಾಯಿ ತೆರೆಯದೆ ತಲೆಯೆತ್ತಿ ಆಕೆ ಹೊರನಡೆಯುತ್ತಿದ್ದಂತೆ ಇಡೀ ಸಭಿಕರೇ ತಿಳಿಯದಂತೆ ಎದ್ದು ನಿಂತರು. ಅವರ ಮುಖದ ಮೇಕಪ್ ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಬಿಸಿ ಕಣ್ಣೀರಿನಲ್ಲಿ ನೆನೆಯಲು ಪ್ರಾರಂಭಿಸಿತು.

ಜಾರ್ಖಂಡ್‌ನಲ್ಲಿ ಇನ್ನೂ ಅತ್ಯುನ್ನತ ಗುಣಮಟ್ಟದ ಮೈಕಾವನ್ನು ಗಣಿಗಾರಿಕೆ ಮಾಡಲಾಗುತ್ತದೆ. 20,000 ಕ್ಕೂ ಹೆಚ್ಚು ಚಿಕ್ಕ ಮಕ್ಕಳು ಶಾಲೆಗೆ ಹೋಗದೆ ಅಲ್ಲಿ ಕೆಲಸ ಮಾಡುತ್ತಾರೆ. ಕೆಲವರು ಭೂಕುಸಿತದಿಂದ ಮತ್ತು ಕೆಲವರು ರೋಗದಿಂದ ಹೂತುಹೋಗಿದ್ದಾರೆ.

(ಮಲಯಾಳಂನಿಂದ ಅನುವಾದಿಸಲಾಗಿದೆ…)

***

ಈ ಫೋಸ್ಟ್‌ಅನ್ನ ವ್ಯಾಪಕವಾಗಿ ಹಂಚಿಕೊಂಡಿರುವುದನ್ನು ನೋಡಲು ‘ಇಲ್ಲಿ ಕ್ಲಿಕ್’ ಮಾಡಿ.

ಇದನ್ನು ಹಲವಾರು ಮಾಧ್ಯಮಗಳು ಸಹ ಸುದ್ದಿ ಮಾಡಿವೆ. ಅವುಗಳನ್ನು ಈ ಕೆಳಗೆ ನೋಡಬಹುದು.

https://dailynewscatcher.com/rani-soyamoyi-ias/

https://mymorningtea.in/rani-soyamoyi-ias/

https://pressinformant.com/rani-soyamoyi-ias-story-husband-biography-wiki-age-family-parents-education-net-worth/

ಫ್ಯಾಕ್ಟ್‌ಚೆಕ್: ಮಲಪ್ಪುರಂ ಜಿಲ್ಲಾಧಿಕಾರಿಗಳ ವಿವರಗಳನ್ನು ಗೂಗಲ್‌ನಲ್ಲಿ ಹುಡಿಕಿದಾಗ ಆ ಜಿಲ್ಲೆಯಲ್ಲಿ  ಸೇವೆ ಸಲ್ಲಿಸಿದ ಜಿಲ್ಲಾಧಿಕಾರಿಗಳ ಪಟ್ಟಿಗಳಲ್ಲಿ ರಾಣಿ ಸೋಯಮೋಯ್ ಎಂಬ ಹೆಸರಿನ ಜಿಲ್ಲಾಧಿಕಾರಿ ಸಿಗಲಿಲ್ಲ. ಅಂತಹ ಅಧಿಕಾರಿಯ ಬಗ್ಗೆ ಯಾವುದೇ ದಾಖಲೆಯೂ ಸಿಕ್ಕಿಲ್ಲ. ಈ ಕುರಿತು ಫ್ಯಾಕ್ಟ್ಲಿ, ಏನ್‌ಸುದ್ದಿ ಡಾಟ್‌ಕಾಮ್‌, ನ್ಯೂಸ್‌ ಮೀಟರ್‌ ವೆಬ್‌ಸೈಟ್‌ಗಳು ಫ್ಯಾಕ್ಟ್‌ಚೆಕ್ ಮಾಡಿವೆ.

ಇನ್ನಷ್ಟು ಹುಡುಕಿದಾಗ ಇದು ಒಂದು ಕಾಲ್ಪನಿಕ ಕಥೆಯಾಗಿದ್ದು, ಹಕೀಮ್ ಮೊರೆ ಬರೆದ ಮಲಯಾಳಂ ಸಣ್ಣ ಕಥೆಗಳ ಸಂಕಲನದಲ್ಲಿ ಈ ಭಾಗವಿರುವುದು ತಿಳಿದುಬಂದಿದೆ. ಆದರೆ 2020ರಿಂದಲೂ ಈ ಭಾಗವನ್ನು ನೈಜ ಘಟನೆಯಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ನ್ಯೂಸ್‌ಮೀಟರ್’ ವೆಬ್‌ಸೈಟ್ ಈ ಬರಹದ ಕಥಾ ಸಂಕಲನದ ಭಾಗವನ್ನು ಹುಡುಕಿದೆ. ಈ ಕಥೆಯನ್ನು ಹಕೀಮ್ ಮೊರೆಯೂರು ಬರೆದಿದ್ದು “ಹೊಳೆಯುವ ಮುಖಗಳು” ಎಂದು ಕಥೆಗೆ ಹೆಸರಿಡಲಾಗಿದೆ. ಮೊರೆಯೂರು ಮಲಪ್ಪುರಂ ಮೂಲದವರಾಗಿದ್ದು, “ರಾಣಿ ಸೋಯಮೋಯ್‌ ಎಂಬ ನೈಜ ವೈಕ್ತಿ ಇಲ್ಲ, ನನ್ನ ಕಥೆಯಲ್ಲಿ ಬರುವ ಕಾಲ್ಪನಿಕ ಪಾತ್ರವಾಗಿದೆ” ಎಂದು ಅವರು ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಹಕೀಂ ಮೊರೆಯೂರ್ ಫೇಸ್‌ಬುಕ್‌ನಲ್ಲಿ ಈ ರೀತಿಯ ಸ್ಪಷ್ಟನೆ ನೀಡಿದ್ದು, “ಮೂರು ಹೆಂಗಸರು- ಎಂಬ ನನ್ನ ಕಥಾ ಸಂಕಲನದಿಂದ ಈ ಭಾಗವನ್ನು ಆಯ್ದುಕೊಂಡು ಅನೇಕ ಜನರು ಹಂಚಿಕೊಂಡಿದ್ದಾರೆ. ಕೆಲವು ಮಹಿಳೆಯರ ಚಿತ್ರಗಳೊಂದಿಗೆ ತಮ್ಮದೇ ಆದ ರೀತಿಯಲ್ಲಿ ಅದನ್ನು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ ಎಂದು ನನಗೆ ತಿಳಿದಿದೆ. ಇದು ಕೇವಲ ಕಾಲ್ಪನಿಕ ಕಥೆಯಾಗಿದೆ. ರಾಣಿ ಸೋಯಮೋಯ್‌ ಎಂಬ ನನ್ನ ಕಥಾ ನಾಯಕಿ ನಿಜವಾದ ವ್ಯಕ್ತಿ ಎಂದು ಅನೇಕ ಜನರು ಭಾವಿಸುತ್ತಾರೆ. ಈ ವಿಷಯದಲ್ಲಿ ಉದ್ಭವಿಸಬಹುದಾದ ಯಾವುದೇ ಸಮಸ್ಯೆಗೆ ನಾನು ಜವಾಬ್ದಾರನಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನು ಈಗ ವೈರಲ್ ಆಗುತ್ತಿರುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬಳಸಲಾದಂತಹ ಫೋಟೊ ಐಎಎಸ್ ಅಧಿಕಾರಿ ಶೈನಾಮೋಲ್ ಅವರದ್ದಾಗಿದೆ. ಅವರ ಫೋಟೊವನ್ನು ಶೈನಾಮೋಲ್‌ ಅವರ ಫೇಸ್ ಬುಕ್ ಪೇಜ್ ನಲ್ಲಿ ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ ಇಲ್ಲಿ ಹೇಳಲಾಗುತ್ತಿರುವ ರಾಣಿ ಸೋಯಮೊಯ್ ಎಂಬವರು ನೈಜ ವ್ಯಕ್ತಿಯಲ್ಲ. ಸೋಯಮೊಯ್‌ ಎಂಬವರು ಮೈಕಾ ಗಣಿಯಿಂದ ಹಿಡಿದು ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಹಾದಿಯು ಕಾಲ್ಪನಿಕವಾಗಿದೆ. ಆ ಫೋಟೊ ಮತ್ತು ಆ ಕಥೆಗೆ ಯಾವುದೇ ಸಂಬಂಧವಿಲ್ಲ.


ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....