Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...