Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...