Homeಕರ್ನಾಟಕFactcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ...

Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

ತುಮಕೂರಿನ ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಎಷ್ಟೆಲ್ಲಾ ಒತ್ತಾಯ ಮಾಡಿದರೂ ಕೇಂದ್ರ ಸರ್ಕಾರ ಇದುವರೆಗೂ ಕೊಟ್ಟಿಲ್ಲ.

- Advertisement -
- Advertisement -

ಅನೇಕರು ಅಂಬೇಡ್ಕರ್‌ರವರನ್ನು ಗುತ್ತಿಗೆ ಪಡೆದವರಂತೆ ಆಡುತ್ತಿದ್ದಾರೆ. ಆದರೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರ ಬರಬೇಕಾಯಿತು ಎಂಬುದು ಗೊತ್ತಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಇದೇ ವಾದವನ್ನು ಮುಂದಿಟ್ಟಿದ್ದರು.

ವಾಸ್ತವವೇನು?

ಆದರೆ ಸತ್ಯವೇನೆಂದರೆ 1990ರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಕೊಟ್ಟಿದ್ದು ವಿ.ಪಿ ಸಿಂಗ್ ಸರ್ಕಾರ ಎಂದು ವಿಕಿಪೀಡಿಯಾ ತಿಳಿಸುತ್ತದೆ. ವಿ.ಪಿ ಸಿಂಗ್‌ರವರು ಆಗ ಜನಮೋರ್ಚ ಪಕ್ಷದಿಂದ ಗೆದ್ದಿದ್ದು ಜನತಾ ಪಕ್ಷ, ಲೋಕದಳ ಮತ್ತು ಕಾಂಗ್ರೆಸ್‌ ಎಸ್‌ ಪಕ್ಷಗಳು ವಿಲೀನಗೊಂಡು ಸಮ್ಮಿಶ್ರ ಸರ್ಕಾರ ರಚಿಸಿದ್ದಾಗ ಅಂಬೇಡ್ಕರ್‌ರವರಿಗೆ ಭಾರತ ರತ್ನ ಸಿಕ್ಕಿದೆ.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು

ಇನ್ನು ಅಟಲ್‌ ಬಿಹಾರಿ ವಾಜಪೇಯಿಯವರು ಮೊದಲ ಬಾರಿ ಪ್ರಧಾನಿಯಾಗಿದ್ದುದೆ 1996ರಲ್ಲಿ. ಇನ್ನು ಅಂಬೇಡ್ಕರ್‌ರವರಿಗೆ ಭಾರತ ರತ್ನ ನೀಡುವುದಕ್ಕೆ ಬಿಜೆಪಿಗೆ ವಿರೋಧವಿತ್ತು. ಈಗ ನೋಡಿದರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ದೂರಿದ್ದರು.

ಈ ಬಿಜೆಪಿ, ಆರ್‌ಎಸ್‌ಎಸ್‌ನವರು ಮೇಲ್ಜಾತಿ ಅದರಲ್ಲಿಯೂ ಬ್ರಾಹ್ಮಣರಿಗೆ ಮಾತ್ರ ಅಧಿಕಾರ ಪ್ರಶಸ್ತಿಗಳನ್ನು ನೀಡುತ್ತಾರೆಯೇ ವಿನಃ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳಿಗಲ್ಲ ಎಂದು ಒವೈಸಿ ಕೂಡ ಕಳೆದ ವರ್ಷ ಟೀಕಿಸಿದ್ದರು.

ಅಷ್ಟೇ ಏಕೆ ಕರ್ನಾಟಕದ ನಿತ್ಯ ದಾಸೋಹಿ, ನಡೆದಾಡುವ ದೇವರು ಎಂದು ಪ್ರಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಎಷ್ಟೆಲ್ಲಾ ಒತ್ತಾಯ ಮಾಡಿದರೂ ಕೇಂದ್ರ ಸರ್ಕಾರ ಇದುವರೆಗೂ ಕೊಟ್ಟಿಲ್ಲ.

ಹಾಗಾಗಿ ಬಿ.ಎಲ್‌ ಸಂತೋಷ್‌ ಹೇಳಿರುವುದು ಸುಳ್ಳಾಗಿದ್ದು, ಅಂಬೇಡ್ಕರ್‌ಗೆ ಬಿಜೆಪಿ ಎನನ್ನೂ ಮಾಡಿಲ್ಲ.

ಹಾಗೆ ನೋಡಿದರೆ ಅತಿದೊಡ್ಡ ವಿದ್ವಾಂಸ, ಪ್ರಖರ ಪಂಡಿತ, ಸಂವಿಧಾನದ ಶಿಲ್ಪಿ, ಶೋಷಿತ ಜನರ ವಿಮೋಚಕ ಅಂಬೇಡ್ಕರ್‌ರವರಿಗೆ ಯಾವ ಪ್ರಶಸ್ತಿಗಳು ಅಗತ್ಯವಲ್ಲ. ಆದರೆ ಈ ರಾಜಕೀಯ ಪಕ್ಷಗಳು ಅವರ ಹೆಸರು ಬಳಸಿಕೊಳ್ಳಲು ಈ ರೀತಿಯ ಸುಳ್ಳು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. The cunning lie told by BJP person Santosh must be published in main stream meadia, not under fact check. This one lie exposes their every dirt in their mind.

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...