Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

- Advertisement -
- Advertisement -

ಪಂಜಾಬ್‌‌ನ ನೂತನ ಮುಖ್ಯಮಂತ್ರಿಯಾಗಿರುವ ಚರಣ್‌‌ಜಿತ್‌‌ ಸಿಂಗ್ ಚನ್ನಿ ಅವರು ಮತಾಂತರವಾಗುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವೈರಲ್‌ ವಿಡಿಯೊದಲ್ಲಿ ಸಿಖ್‌ ವ್ಯಕ್ತಿಯಂತೆ ಕಾಣುತ್ತಿರುವ ವ್ಯಕ್ತಿಯೊಬ್ಬರು ಕ್ರೈಸ್ತ ಪಾದ್ರಿಯಿಂದ ಬ್ಯಾಪ್ಟಿಸಂ(ದೀಕ್ಷಾಸ್ನಾನ) ಆಗುತ್ತಿರುವುದನ್ನು ನೋಡಬಹುದಾಗಿದೆ.

ವೀಡಿಯೊದಲ್ಲಿರುವ ವ್ಯಕ್ತಿಯು ಪಂಜಾಬ್‌ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಹೋಲಿಕೆಯನ್ನು ಹೊಂದಿಲ್ಲ. ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯ ಚಿತ್ರದೊಂದಿಗೆ ಚರಣಜಿತ್ ಸಿಂಗ್ ಚನ್ನಿಯ ಚಿತ್ರವನ್ನು ಜೋಡಿಸಿ ನೋಡಿದಾಗ ಕೂಡಾ ನಮಗೆ ಯಾವುದೇ ಹೋಲಿಕೆಗಳನ್ನು ಕಂಡುಹಿಡಿಯಲಾಗಲಿಲ್ಲ.

ವೀಡಿಯೊದ 0:30 ಸಮಯದ ಸ್ಟಾಂಪ್‌ನಲ್ಲಿ, ಪಾದ್ರಿ ಅವರು ‘ಸಿಮ್ರಂಜೀತ್ ಸಿಂಗ್’ ಎಂದು ಉಚ್ಚರಿಸುವುದನ್ನು ನಾವು ಸ್ಪಷ್ಟವಾಗಿ ಕೇಳಬಹುದು. ಅವರ ಈ ಹೇಳಿಕೆ, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಚರಣ್‌ಜಿತ್ ಸಿಂಗ್ ಚನ್ನಿ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ, ಅವರ ಧಾರ್ಮಿಕತೆಯನ್ನು ಪ್ರಶ್ನಿಸುವ ವೀಡಿಯೊಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಹಿಂದೆ, “ಚನ್ನಿ ಅವರು ವಿಡಿಯೊವೊಂದರಲ್ಲಿ ಹಲ್ಲೆಲುಯಾ ಎಂದು ಹೇಳುತ್ತಿದ್ದಾರೆ, ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಏಸುಗೆ ಧನ್ಯವಾದ ಹೇಳಿದರು’ ಎಂದು ಪ್ರತಿಪಾದಿಸಿ ವಿಡಿಯೊ ಹಂಚಿಕೊಳ್ಳಲಾಗಿತ್ತು.

ಆದರೆ, ಆ ವಿಡಿಯೊ ಚನ್ನಿ ಅವರು ಪಂಜಾಬ್‌ನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಚರ್ಚ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ್ದಾಗಿದೆ. ಆ ವೀಡಿಯೋ ಬಗ್ಗೆ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಫ್ಯಾಕ್ಟ್‌ಚೆಕ್‌ ಮಾಡಿದೆ. ಅದನ್ನು ಇಲ್ಲಿ ಓದಬಹುದು.

ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಚನ್ನಿ ಸಿಖ್ ಧರ್ಮಿಯರಾಗಿದ್ದಾರೆ. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ಅವರು ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಈ ವೀಡಿಯೋದಲ್ಲಿ ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ.

ಪ್ರತಿಪಾದನೆ: ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಕ್ರೈಸ್ತರ ದೀಕ್ಷಾಸ್ನಾನ ಪಡೆಯುವ ವಿಡಿಯೋ.
ವಾಸ್ತವ: ವೈರಲ್ ಆಗಿರುವ ವೀಡಿಯೋದಲ್ಲಿರುವ ವ್ಯಕ್ತಿ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಸಾಮ್ಯತೆಯನ್ನು ಹೊಂದಿಲ್ಲ. ವಿಡಿಯೋದಲ್ಲಿ ಇರುವ ಪಾದ್ರಿಯು, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿಯ ಹೆಸರು ‘ಸಿಮ್ರಂಜೀತ್ ಸಿಂಗ್’ ಎಂದು ಹೇಳುವುದನ್ನು ಸ್ಪಷ್ಟವಾಗಿ ಕೇಳಬಹುದು. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...