Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

- Advertisement -
- Advertisement -

ಪಂಜಾಬ್‌‌ನ ನೂತನ ಮುಖ್ಯಮಂತ್ರಿಯಾಗಿರುವ ಚರಣ್‌‌ಜಿತ್‌‌ ಸಿಂಗ್ ಚನ್ನಿ ಅವರು ಮತಾಂತರವಾಗುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವೈರಲ್‌ ವಿಡಿಯೊದಲ್ಲಿ ಸಿಖ್‌ ವ್ಯಕ್ತಿಯಂತೆ ಕಾಣುತ್ತಿರುವ ವ್ಯಕ್ತಿಯೊಬ್ಬರು ಕ್ರೈಸ್ತ ಪಾದ್ರಿಯಿಂದ ಬ್ಯಾಪ್ಟಿಸಂ(ದೀಕ್ಷಾಸ್ನಾನ) ಆಗುತ್ತಿರುವುದನ್ನು ನೋಡಬಹುದಾಗಿದೆ.

ವೀಡಿಯೊದಲ್ಲಿರುವ ವ್ಯಕ್ತಿಯು ಪಂಜಾಬ್‌ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಹೋಲಿಕೆಯನ್ನು ಹೊಂದಿಲ್ಲ. ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯ ಚಿತ್ರದೊಂದಿಗೆ ಚರಣಜಿತ್ ಸಿಂಗ್ ಚನ್ನಿಯ ಚಿತ್ರವನ್ನು ಜೋಡಿಸಿ ನೋಡಿದಾಗ ಕೂಡಾ ನಮಗೆ ಯಾವುದೇ ಹೋಲಿಕೆಗಳನ್ನು ಕಂಡುಹಿಡಿಯಲಾಗಲಿಲ್ಲ.

ವೀಡಿಯೊದ 0:30 ಸಮಯದ ಸ್ಟಾಂಪ್‌ನಲ್ಲಿ, ಪಾದ್ರಿ ಅವರು ‘ಸಿಮ್ರಂಜೀತ್ ಸಿಂಗ್’ ಎಂದು ಉಚ್ಚರಿಸುವುದನ್ನು ನಾವು ಸ್ಪಷ್ಟವಾಗಿ ಕೇಳಬಹುದು. ಅವರ ಈ ಹೇಳಿಕೆ, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಚರಣ್‌ಜಿತ್ ಸಿಂಗ್ ಚನ್ನಿ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ, ಅವರ ಧಾರ್ಮಿಕತೆಯನ್ನು ಪ್ರಶ್ನಿಸುವ ವೀಡಿಯೊಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಹಿಂದೆ, “ಚನ್ನಿ ಅವರು ವಿಡಿಯೊವೊಂದರಲ್ಲಿ ಹಲ್ಲೆಲುಯಾ ಎಂದು ಹೇಳುತ್ತಿದ್ದಾರೆ, ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಏಸುಗೆ ಧನ್ಯವಾದ ಹೇಳಿದರು’ ಎಂದು ಪ್ರತಿಪಾದಿಸಿ ವಿಡಿಯೊ ಹಂಚಿಕೊಳ್ಳಲಾಗಿತ್ತು.

ಆದರೆ, ಆ ವಿಡಿಯೊ ಚನ್ನಿ ಅವರು ಪಂಜಾಬ್‌ನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಚರ್ಚ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ್ದಾಗಿದೆ. ಆ ವೀಡಿಯೋ ಬಗ್ಗೆ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಫ್ಯಾಕ್ಟ್‌ಚೆಕ್‌ ಮಾಡಿದೆ. ಅದನ್ನು ಇಲ್ಲಿ ಓದಬಹುದು.

ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಚನ್ನಿ ಸಿಖ್ ಧರ್ಮಿಯರಾಗಿದ್ದಾರೆ. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ಅವರು ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಈ ವೀಡಿಯೋದಲ್ಲಿ ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ.

ಪ್ರತಿಪಾದನೆ: ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಕ್ರೈಸ್ತರ ದೀಕ್ಷಾಸ್ನಾನ ಪಡೆಯುವ ವಿಡಿಯೋ.
ವಾಸ್ತವ: ವೈರಲ್ ಆಗಿರುವ ವೀಡಿಯೋದಲ್ಲಿರುವ ವ್ಯಕ್ತಿ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಸಾಮ್ಯತೆಯನ್ನು ಹೊಂದಿಲ್ಲ. ವಿಡಿಯೋದಲ್ಲಿ ಇರುವ ಪಾದ್ರಿಯು, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿಯ ಹೆಸರು ‘ಸಿಮ್ರಂಜೀತ್ ಸಿಂಗ್’ ಎಂದು ಹೇಳುವುದನ್ನು ಸ್ಪಷ್ಟವಾಗಿ ಕೇಳಬಹುದು. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...