Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

- Advertisement -
- Advertisement -

ದಂಪತಿಗಳಿಬ್ಬರ ಎರಡು ಚಿತ್ರಗಳ ಜೊತೆಗೆ ಸೂಟ್‌ಕೇಸ್‌ನೊಳಗೆ ಪತ್ತೆಯಾದ ಮೃತದೇಹವನ್ನು ಪೊಲೀಸರು ಪರಿಶೀಲನೆ ಮಾಡುತ್ತಿರುವ ಚಿತ್ರಗಳೊಂದಿಗೆ ಹಂಚಿ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮೇಲಿನ ಚಿತ್ರಗಳನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಭಾರಿ ಪ್ರಮಾಣದಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಅದರಲ್ಲಿ “ಲವ್ ಜಿಹಾದ್ ಯಾವಾಗಲೂ ಹಿಂದೂ ಹುಡುಗಿಯ ಮರಣದಲ್ಲಿ ಕೊನೆಗೊಳ್ಳುತ್ತದೆ” ಎಂಬುದರ ಜೊತೆಗೆ #MuslimsAreJihadi ಎಂಬ ಹ್ಯಾಶ್‌‌ಟ್ಯಾಗ್‌ ಕೂಡಾ ಬಳಸಲಾಗುತ್ತಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ

ಆಗಸ್ಟ್ 27 ರಂದು, “ಬಿಜೆಪಿ ಬಲೂಚಿಸ್ತಾನ್” ಹೆಸರಿನ ಟ್ವಿಟ್ಟರ್ ಖಾತೆಯು ಈ ಚಿತ್ರಗಳನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಇದರ ಲಿಂಕ್ ಇಲ್ಲಿದೆ.

ಫ್ಯಾಕ್ಟ್‌ಚೆಕ್

ವೈರಲ್ ಚಿತ್ರದ 1 ನೆ ಚಿತ್ರ ಹಾಗೂ  ಮತ್ತು 2 ನೇ ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ, ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ದಂಪತಿಗಳಿಬ್ಬರು ಇನ್ನೂ ಜೀವಂತವಾಗಿದ್ದಾರೆ ಹಾಗೂ ಇವರು ಅಂತರ್‌ಧರ್ಮಿಯ ವಿವಾಹವಾಗಿದ್ದು, ಇಬ್ಬರೂ ಡೆಹ್ರಾಡೂನ್ ಮೂಲದವರು ಗೋರಖ್‌ಪುರ್‌ ಚೌಕ್‌ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಚಿತ್ರದಲ್ಲಿ ಇರುವ ಮಹಿಳೆ ಸುರಭಿ ಚೌಹಾನ್ ಪಾಷಾ ಈ ಬಗ್ಗೆ ಮಾತನಾಡಿ, ಮೊಹಮ್ಮದ್ ಆದಿಲ್ ಪಾಷಾನನ್ನು ಮದುವೆಯಾದ ನಂತರ ಹಲವಾರು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ್ದವು ಎಂದು ಅವರು ತಿಳಿಸಿದ್ದಾರೆ.

“ನಮ್ಮ ಮದುವೆಯ ನಂತರ, ನಮ್ಮ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ಸುಳ್ಳು ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ. ಅದರಲ್ಲಿ ನನ್ನ ಗಂಡ ನನ್ನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಿದೆ. ಅದೆಲ್ಲವೂ ಸುಳ್ಳು. ನಾವು ಅನ್ಯೋನವಾಗಿದ್ದೇವೆ. ಈ ವದಂತಿಗಳನ್ನು ಭಜರಂಗದಳದ ಸದಸ್ಯರು ಪ್ರಸಾರ ಮಾಡುತ್ತಿದ್ದಾರೆ. ಸಹಾಯಕ್ಕಾಗಿ ನಾವು ಪೊಲೀಸರನ್ನು ಸಂಪರ್ಕಿಸಿದ್ದಾವೆ” ಎಂದು ಸುರಭಿ ಚೌಹಾನ್ ಪಾಷಾ ಹೇಳಿದ್ದಾರೆ.

ಸೂಟ್‌ಕೇಸ್‌ನೊಳಗೆ ಶವ ಪತ್ತೆಯಾದ ಯಾವುದೇ ಪ್ರಕರಣವು ಆ ಪ್ರದೇಶದಲ್ಲಿ ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ನಂತರ ಮೂರನೇ  ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ನಡೆಸಿದಾಗ, ಜುಲೈ 27 ರಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಚಿತ್ರದ ಬಗ್ಗೆ ವರದಿ ಮಾಡಿದ್ದು ಕಾಣಬುದಾಗಿದೆ.

ಚೀಲದೊಳಗೆ ಅಪರಿಚಿತ ಮಹಿಳೆಯ ಶವ ದೆಹಲಿ ಬಳಿಯ ಗಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಸ್ಫಷ್ಟೀಕರಣ ನೀಡಿದ ಗಾಜಿಯಾಬಾದ್ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ಸಿಂಗ್, “ಈ ಚಿತ್ರವು ಚೀಲದ ಒಳಗಿನಿಂದ ಮಹಿಳೆಯ ಮೃತದೇಹ ಪತ್ತೆಯಾಗಿರುವ ಚಿತ್ರವಾಗಿದೆ, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರ 1 ಮತ್ತು ಚಿತ್ರ 2 ರಲ್ಲಿರುವ ಮಹಿಳೆಯು ಗಾಜಿಯಾಬಾದ್‌ನಲ್ಲಿ ಶವವಾಗಿ ಪತ್ತೆಯಾದ ಮಹಿಳೆಯದ್ದಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧವಿಲ್ಲದ ಚಿತ್ರಗಳನ್ನು “ಲವ್ ಜಿಹಾದ್” ಹೆಸರಿನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...