Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

- Advertisement -
- Advertisement -

ದಂಪತಿಗಳಿಬ್ಬರ ಎರಡು ಚಿತ್ರಗಳ ಜೊತೆಗೆ ಸೂಟ್‌ಕೇಸ್‌ನೊಳಗೆ ಪತ್ತೆಯಾದ ಮೃತದೇಹವನ್ನು ಪೊಲೀಸರು ಪರಿಶೀಲನೆ ಮಾಡುತ್ತಿರುವ ಚಿತ್ರಗಳೊಂದಿಗೆ ಹಂಚಿ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮೇಲಿನ ಚಿತ್ರಗಳನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಭಾರಿ ಪ್ರಮಾಣದಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಅದರಲ್ಲಿ “ಲವ್ ಜಿಹಾದ್ ಯಾವಾಗಲೂ ಹಿಂದೂ ಹುಡುಗಿಯ ಮರಣದಲ್ಲಿ ಕೊನೆಗೊಳ್ಳುತ್ತದೆ” ಎಂಬುದರ ಜೊತೆಗೆ #MuslimsAreJihadi ಎಂಬ ಹ್ಯಾಶ್‌‌ಟ್ಯಾಗ್‌ ಕೂಡಾ ಬಳಸಲಾಗುತ್ತಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ

ಆಗಸ್ಟ್ 27 ರಂದು, “ಬಿಜೆಪಿ ಬಲೂಚಿಸ್ತಾನ್” ಹೆಸರಿನ ಟ್ವಿಟ್ಟರ್ ಖಾತೆಯು ಈ ಚಿತ್ರಗಳನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಇದರ ಲಿಂಕ್ ಇಲ್ಲಿದೆ.

ಫ್ಯಾಕ್ಟ್‌ಚೆಕ್

ವೈರಲ್ ಚಿತ್ರದ 1 ನೆ ಚಿತ್ರ ಹಾಗೂ  ಮತ್ತು 2 ನೇ ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ, ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ದಂಪತಿಗಳಿಬ್ಬರು ಇನ್ನೂ ಜೀವಂತವಾಗಿದ್ದಾರೆ ಹಾಗೂ ಇವರು ಅಂತರ್‌ಧರ್ಮಿಯ ವಿವಾಹವಾಗಿದ್ದು, ಇಬ್ಬರೂ ಡೆಹ್ರಾಡೂನ್ ಮೂಲದವರು ಗೋರಖ್‌ಪುರ್‌ ಚೌಕ್‌ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಚಿತ್ರದಲ್ಲಿ ಇರುವ ಮಹಿಳೆ ಸುರಭಿ ಚೌಹಾನ್ ಪಾಷಾ ಈ ಬಗ್ಗೆ ಮಾತನಾಡಿ, ಮೊಹಮ್ಮದ್ ಆದಿಲ್ ಪಾಷಾನನ್ನು ಮದುವೆಯಾದ ನಂತರ ಹಲವಾರು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ್ದವು ಎಂದು ಅವರು ತಿಳಿಸಿದ್ದಾರೆ.

“ನಮ್ಮ ಮದುವೆಯ ನಂತರ, ನಮ್ಮ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ಸುಳ್ಳು ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ. ಅದರಲ್ಲಿ ನನ್ನ ಗಂಡ ನನ್ನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಿದೆ. ಅದೆಲ್ಲವೂ ಸುಳ್ಳು. ನಾವು ಅನ್ಯೋನವಾಗಿದ್ದೇವೆ. ಈ ವದಂತಿಗಳನ್ನು ಭಜರಂಗದಳದ ಸದಸ್ಯರು ಪ್ರಸಾರ ಮಾಡುತ್ತಿದ್ದಾರೆ. ಸಹಾಯಕ್ಕಾಗಿ ನಾವು ಪೊಲೀಸರನ್ನು ಸಂಪರ್ಕಿಸಿದ್ದಾವೆ” ಎಂದು ಸುರಭಿ ಚೌಹಾನ್ ಪಾಷಾ ಹೇಳಿದ್ದಾರೆ.

ಸೂಟ್‌ಕೇಸ್‌ನೊಳಗೆ ಶವ ಪತ್ತೆಯಾದ ಯಾವುದೇ ಪ್ರಕರಣವು ಆ ಪ್ರದೇಶದಲ್ಲಿ ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ನಂತರ ಮೂರನೇ  ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ನಡೆಸಿದಾಗ, ಜುಲೈ 27 ರಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಚಿತ್ರದ ಬಗ್ಗೆ ವರದಿ ಮಾಡಿದ್ದು ಕಾಣಬುದಾಗಿದೆ.

ಚೀಲದೊಳಗೆ ಅಪರಿಚಿತ ಮಹಿಳೆಯ ಶವ ದೆಹಲಿ ಬಳಿಯ ಗಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಸ್ಫಷ್ಟೀಕರಣ ನೀಡಿದ ಗಾಜಿಯಾಬಾದ್ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ಸಿಂಗ್, “ಈ ಚಿತ್ರವು ಚೀಲದ ಒಳಗಿನಿಂದ ಮಹಿಳೆಯ ಮೃತದೇಹ ಪತ್ತೆಯಾಗಿರುವ ಚಿತ್ರವಾಗಿದೆ, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರ 1 ಮತ್ತು ಚಿತ್ರ 2 ರಲ್ಲಿರುವ ಮಹಿಳೆಯು ಗಾಜಿಯಾಬಾದ್‌ನಲ್ಲಿ ಶವವಾಗಿ ಪತ್ತೆಯಾದ ಮಹಿಳೆಯದ್ದಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧವಿಲ್ಲದ ಚಿತ್ರಗಳನ್ನು “ಲವ್ ಜಿಹಾದ್” ಹೆಸರಿನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....