Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

- Advertisement -
- Advertisement -

ದಂಪತಿಗಳಿಬ್ಬರ ಎರಡು ಚಿತ್ರಗಳ ಜೊತೆಗೆ ಸೂಟ್‌ಕೇಸ್‌ನೊಳಗೆ ಪತ್ತೆಯಾದ ಮೃತದೇಹವನ್ನು ಪೊಲೀಸರು ಪರಿಶೀಲನೆ ಮಾಡುತ್ತಿರುವ ಚಿತ್ರಗಳೊಂದಿಗೆ ಹಂಚಿ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮೇಲಿನ ಚಿತ್ರಗಳನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಭಾರಿ ಪ್ರಮಾಣದಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಅದರಲ್ಲಿ “ಲವ್ ಜಿಹಾದ್ ಯಾವಾಗಲೂ ಹಿಂದೂ ಹುಡುಗಿಯ ಮರಣದಲ್ಲಿ ಕೊನೆಗೊಳ್ಳುತ್ತದೆ” ಎಂಬುದರ ಜೊತೆಗೆ #MuslimsAreJihadi ಎಂಬ ಹ್ಯಾಶ್‌‌ಟ್ಯಾಗ್‌ ಕೂಡಾ ಬಳಸಲಾಗುತ್ತಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ

ಆಗಸ್ಟ್ 27 ರಂದು, “ಬಿಜೆಪಿ ಬಲೂಚಿಸ್ತಾನ್” ಹೆಸರಿನ ಟ್ವಿಟ್ಟರ್ ಖಾತೆಯು ಈ ಚಿತ್ರಗಳನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಇದರ ಲಿಂಕ್ ಇಲ್ಲಿದೆ.

ಫ್ಯಾಕ್ಟ್‌ಚೆಕ್

ವೈರಲ್ ಚಿತ್ರದ 1 ನೆ ಚಿತ್ರ ಹಾಗೂ  ಮತ್ತು 2 ನೇ ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ, ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ದಂಪತಿಗಳಿಬ್ಬರು ಇನ್ನೂ ಜೀವಂತವಾಗಿದ್ದಾರೆ ಹಾಗೂ ಇವರು ಅಂತರ್‌ಧರ್ಮಿಯ ವಿವಾಹವಾಗಿದ್ದು, ಇಬ್ಬರೂ ಡೆಹ್ರಾಡೂನ್ ಮೂಲದವರು ಗೋರಖ್‌ಪುರ್‌ ಚೌಕ್‌ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಚಿತ್ರದಲ್ಲಿ ಇರುವ ಮಹಿಳೆ ಸುರಭಿ ಚೌಹಾನ್ ಪಾಷಾ ಈ ಬಗ್ಗೆ ಮಾತನಾಡಿ, ಮೊಹಮ್ಮದ್ ಆದಿಲ್ ಪಾಷಾನನ್ನು ಮದುವೆಯಾದ ನಂತರ ಹಲವಾರು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ್ದವು ಎಂದು ಅವರು ತಿಳಿಸಿದ್ದಾರೆ.

“ನಮ್ಮ ಮದುವೆಯ ನಂತರ, ನಮ್ಮ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ಸುಳ್ಳು ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ. ಅದರಲ್ಲಿ ನನ್ನ ಗಂಡ ನನ್ನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಿದೆ. ಅದೆಲ್ಲವೂ ಸುಳ್ಳು. ನಾವು ಅನ್ಯೋನವಾಗಿದ್ದೇವೆ. ಈ ವದಂತಿಗಳನ್ನು ಭಜರಂಗದಳದ ಸದಸ್ಯರು ಪ್ರಸಾರ ಮಾಡುತ್ತಿದ್ದಾರೆ. ಸಹಾಯಕ್ಕಾಗಿ ನಾವು ಪೊಲೀಸರನ್ನು ಸಂಪರ್ಕಿಸಿದ್ದಾವೆ” ಎಂದು ಸುರಭಿ ಚೌಹಾನ್ ಪಾಷಾ ಹೇಳಿದ್ದಾರೆ.

ಸೂಟ್‌ಕೇಸ್‌ನೊಳಗೆ ಶವ ಪತ್ತೆಯಾದ ಯಾವುದೇ ಪ್ರಕರಣವು ಆ ಪ್ರದೇಶದಲ್ಲಿ ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ನಂತರ ಮೂರನೇ  ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ನಡೆಸಿದಾಗ, ಜುಲೈ 27 ರಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಚಿತ್ರದ ಬಗ್ಗೆ ವರದಿ ಮಾಡಿದ್ದು ಕಾಣಬುದಾಗಿದೆ.

ಚೀಲದೊಳಗೆ ಅಪರಿಚಿತ ಮಹಿಳೆಯ ಶವ ದೆಹಲಿ ಬಳಿಯ ಗಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಸ್ಫಷ್ಟೀಕರಣ ನೀಡಿದ ಗಾಜಿಯಾಬಾದ್ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ಸಿಂಗ್, “ಈ ಚಿತ್ರವು ಚೀಲದ ಒಳಗಿನಿಂದ ಮಹಿಳೆಯ ಮೃತದೇಹ ಪತ್ತೆಯಾಗಿರುವ ಚಿತ್ರವಾಗಿದೆ, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರ 1 ಮತ್ತು ಚಿತ್ರ 2 ರಲ್ಲಿರುವ ಮಹಿಳೆಯು ಗಾಜಿಯಾಬಾದ್‌ನಲ್ಲಿ ಶವವಾಗಿ ಪತ್ತೆಯಾದ ಮಹಿಳೆಯದ್ದಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧವಿಲ್ಲದ ಚಿತ್ರಗಳನ್ನು “ಲವ್ ಜಿಹಾದ್” ಹೆಸರಿನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...