Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

- Advertisement -
- Advertisement -

ದಂಪತಿಗಳಿಬ್ಬರ ಎರಡು ಚಿತ್ರಗಳ ಜೊತೆಗೆ ಸೂಟ್‌ಕೇಸ್‌ನೊಳಗೆ ಪತ್ತೆಯಾದ ಮೃತದೇಹವನ್ನು ಪೊಲೀಸರು ಪರಿಶೀಲನೆ ಮಾಡುತ್ತಿರುವ ಚಿತ್ರಗಳೊಂದಿಗೆ ಹಂಚಿ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮೇಲಿನ ಚಿತ್ರಗಳನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಭಾರಿ ಪ್ರಮಾಣದಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಅದರಲ್ಲಿ “ಲವ್ ಜಿಹಾದ್ ಯಾವಾಗಲೂ ಹಿಂದೂ ಹುಡುಗಿಯ ಮರಣದಲ್ಲಿ ಕೊನೆಗೊಳ್ಳುತ್ತದೆ” ಎಂಬುದರ ಜೊತೆಗೆ #MuslimsAreJihadi ಎಂಬ ಹ್ಯಾಶ್‌‌ಟ್ಯಾಗ್‌ ಕೂಡಾ ಬಳಸಲಾಗುತ್ತಿದೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ

ಆಗಸ್ಟ್ 27 ರಂದು, “ಬಿಜೆಪಿ ಬಲೂಚಿಸ್ತಾನ್” ಹೆಸರಿನ ಟ್ವಿಟ್ಟರ್ ಖಾತೆಯು ಈ ಚಿತ್ರಗಳನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಇದರ ಲಿಂಕ್ ಇಲ್ಲಿದೆ.

ಫ್ಯಾಕ್ಟ್‌ಚೆಕ್

ವೈರಲ್ ಚಿತ್ರದ 1 ನೆ ಚಿತ್ರ ಹಾಗೂ  ಮತ್ತು 2 ನೇ ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ, ಚಿತ್ರದಲ್ಲಿರುವವರು ದಂಪತಿಗಳಾಗಿದ್ದು, ಅವರನ್ನು ಡೆಹ್ರಾಡೂನ್‌ನ ಗೋರಖ್‌ಪುರ್ ಚೌಕ್ ಪ್ರದೇಶದ ಲಾವಿ ಜೋಶಿ ಮತ್ತು ಮೊಹಮ್ಮದ್ ಆದಿಲ್ ಪಾಷಾ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ದಂಪತಿಗಳಿಬ್ಬರು ಇನ್ನೂ ಜೀವಂತವಾಗಿದ್ದಾರೆ ಹಾಗೂ ಇವರು ಅಂತರ್‌ಧರ್ಮಿಯ ವಿವಾಹವಾಗಿದ್ದು, ಇಬ್ಬರೂ ಡೆಹ್ರಾಡೂನ್ ಮೂಲದವರು ಗೋರಖ್‌ಪುರ್‌ ಚೌಕ್‌ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಚಿತ್ರದಲ್ಲಿ ಇರುವ ಮಹಿಳೆ ಸುರಭಿ ಚೌಹಾನ್ ಪಾಷಾ ಈ ಬಗ್ಗೆ ಮಾತನಾಡಿ, ಮೊಹಮ್ಮದ್ ಆದಿಲ್ ಪಾಷಾನನ್ನು ಮದುವೆಯಾದ ನಂತರ ಹಲವಾರು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ್ದವು ಎಂದು ಅವರು ತಿಳಿಸಿದ್ದಾರೆ.

“ನಮ್ಮ ಮದುವೆಯ ನಂತರ, ನಮ್ಮ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ಸುಳ್ಳು ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ. ಅದರಲ್ಲಿ ನನ್ನ ಗಂಡ ನನ್ನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಿದೆ. ಅದೆಲ್ಲವೂ ಸುಳ್ಳು. ನಾವು ಅನ್ಯೋನವಾಗಿದ್ದೇವೆ. ಈ ವದಂತಿಗಳನ್ನು ಭಜರಂಗದಳದ ಸದಸ್ಯರು ಪ್ರಸಾರ ಮಾಡುತ್ತಿದ್ದಾರೆ. ಸಹಾಯಕ್ಕಾಗಿ ನಾವು ಪೊಲೀಸರನ್ನು ಸಂಪರ್ಕಿಸಿದ್ದಾವೆ” ಎಂದು ಸುರಭಿ ಚೌಹಾನ್ ಪಾಷಾ ಹೇಳಿದ್ದಾರೆ.

ಸೂಟ್‌ಕೇಸ್‌ನೊಳಗೆ ಶವ ಪತ್ತೆಯಾದ ಯಾವುದೇ ಪ್ರಕರಣವು ಆ ಪ್ರದೇಶದಲ್ಲಿ ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ನಂತರ ಮೂರನೇ  ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ನಡೆಸಿದಾಗ, ಜುಲೈ 27 ರಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಚಿತ್ರದ ಬಗ್ಗೆ ವರದಿ ಮಾಡಿದ್ದು ಕಾಣಬುದಾಗಿದೆ.

ಚೀಲದೊಳಗೆ ಅಪರಿಚಿತ ಮಹಿಳೆಯ ಶವ ದೆಹಲಿ ಬಳಿಯ ಗಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಸ್ಫಷ್ಟೀಕರಣ ನೀಡಿದ ಗಾಜಿಯಾಬಾದ್ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ಸಿಂಗ್, “ಈ ಚಿತ್ರವು ಚೀಲದ ಒಳಗಿನಿಂದ ಮಹಿಳೆಯ ಮೃತದೇಹ ಪತ್ತೆಯಾಗಿರುವ ಚಿತ್ರವಾಗಿದೆ, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರ 1 ಮತ್ತು ಚಿತ್ರ 2 ರಲ್ಲಿರುವ ಮಹಿಳೆಯು ಗಾಜಿಯಾಬಾದ್‌ನಲ್ಲಿ ಶವವಾಗಿ ಪತ್ತೆಯಾದ ಮಹಿಳೆಯದ್ದಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧವಿಲ್ಲದ ಚಿತ್ರಗಳನ್ನು “ಲವ್ ಜಿಹಾದ್” ಹೆಸರಿನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...