Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಈ ಹೇಳಿಕೆಯೊಂದಿಗೆ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಹಲವಾರು ಬಳಕೆದಾರರು, ಅರ್ಧ ಸುಟ್ಟು ಕರಕಲಾಗಿರುವ ಮಹಿಳೆಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ಸುಟ್ಟು ಕರಕಲಾದ ಮಹಿಳೆಯ ದೇಹವೊಂದು ಪತ್ತೆಯಾಗಿದ್ದು, ರಾಜಸ್ಥಾನ ಮೂಲದ ನೆವಾಯ್‌ ಹಳ್ಳಿಯ 13 ವರ್ಷದ ಬಾಲಕಿಯನ್ನು ಅದೇ ಹಳ್ಳಿಯ ರಿಜ್ವಾನ್ ಎಂಬ ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟುಹಾಕಿದ್ದಾನೆ ಎಂದು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಮುಸ್ಲಿಂ ವ್ಯಕ್ತಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದಿದ್ದಾನೆ ಎಂದು ಹಲವರು ಹಂಚಿಕೊಂಡಿರುವ ಈ ಪೋಸ್ಟ್‌ ಅನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಈ ಹೇಳಿಕೆಯೊಂದಿಗೆ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಹಲವಾರು ಬಳಕೆದಾರರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಮಧ್ಯಪ್ರದೇಶದ ಸುದ್ಧಿ ಚಾನೆಲ್‌ಗಳಲ್ಲಿ ಇದೇ ಚಿತ್ರಗಳೊಂದಿಗೆ ವರದಿಯಾಗಿರುವ ಸುದ್ಧಿಗಳು ಕಂಡುಬಂದಿವೆ. ಇದನ್ನು ಮತ್ತಷ್ಟು ಪರಿಶೀಲಿಸಿದಾಗ, ಈ ಘಟನೆಯು ಮಧ್ಯಪ್ರದೇಶದ ಧಾರ್‌ನಲ್ಲಿರುವ ಗಾಂಧ್ವಾನಿ ಪ್ರದೇಶದಲ್ಲಿ ನಡೆದಿದ್ದೆಂದು ತಿಳಿದುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದರ ಕುರಿತು ಹೆಚ್ಚಿನ ಮಾಹಿತಿ ತಿಳಿಯುವ ಸಲುವಾಗಿ ಎಸ್‌.ಪಿ ಆದಿತ್ಯ ಪ್ರತಾಪ್ ಸಿಂಗ್‌ ಅವರನ್ನು ಸಂಪರ್ಕಿಸಿದಾಗ, “ಈ ಘಟನೆಯು ಸೆ. 29 ರಂದು ನಡೆದಿದ್ದು, ಇದಕ್ಕೆ ಯಾವುದೇ ಕೋಮು ದೃಷ್ಟಿಕೋನಗಳಿಲ್ಲ. ಈಕೆಯನ್ನು ಕೊಲೆ ಮಾಡಿದ ನಂತರ ಸುಡಲಾಗಿದ್ದು, ಇಬ್ಬರು ಆರೋಪಿಗಳಲ್ಲಿ ಸೋಹನ್ ಲಾಲ್ ಎಂಬಾತನನ್ನು ಬಂಧಿಸಲಾಗಿದ್ದು, ಗೋವಿಂದ್ ಎಂಬಾತ ಪರಾರಿಯಾಗಿದ್ದಾನೆ” ಎಂದು ಹೇಳಿದರು.

ಮೃತ ಮಹಿಳೆ ಮತ್ತು ಆರೋಪಿಯ ನಡುವೆ ಹಣಕಾಸಿನ ವಿಚಾರಕ್ಕಾಗಿ ವಿವಾದ ಉಂಟಾಗಿದ್ದು, ಆರೋಪಿ ಬೇರೆ ಯುವತಿಯನ್ನು ವಿವಾಹವಾಗಿದ್ದ ಎಂದು ಎಸ್‌.ಪಿ ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಇದಕ್ಕೆ ಸಂಬಂಧಿಸಿದಂತೆ ಸೆ.30 ರಂದು ಇಂಧೋರ್ ಸಮಾಚಾರ್ ಪತ್ರಿಕೆಯಲ್ಲಿ ಇದೇ ಚಿತ್ರದೊಂದಿಗೆ ಸುದ್ಧಿಯೊದು ಪ್ರಕಟವಾಗಿತ್ತು. ಅದೇ ವಿವರಗಳನ್ನು ಉಲ್ಲೇಖಿಸಿರುವ ಘಟನೆಯ ವೀಡಿಯೊ ವರದಿಯನ್ನು ಸಹ ಪತ್ತೆಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಹಲವಾರು ಸುದ್ದಿ ವರದಿಗಳ ಪ್ರಕಾರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ತಮ್ಮ ತನಿಖೆಯನ್ನು ಪ್ರಾರಂಭಿಸಿದರು ಎಂದು ತಿಳಿದುಬಂದಿದೆ. ಪ್ರಕರಣದ ಇತರ ಸುದ್ದಿ ವರದಿಗಳು ಮಹಿಳೆಯನ್ನು ನರ್ಮದಾ ನಗರದ 30 ವರ್ಷದ ಕೇಸರ್ಬಾಯಿ ಎಂದು ಗುರುತಿಸಿವೆ.

ಹಾಗಾಗಿ ಇದರಿಂದ ಸ್ಪಷ್ಟವಾಗಿ ತಿಳಿದುಬರುವುದೇನೆಂದರೆ, ಮಧ್ಯಪ್ರದೇಶ ಮೂಲದ ಮಹಿಳೆಯ ಸುಟ್ಟ ಶವವನ್ನು ದಾರಿತಪ್ಪಿಸುವ ಮತ್ತು ಕೋಮು ದ್ವೇಷ ಹರಡುವ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...