Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...