Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....