Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...