Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...