Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...