Homeಕರ್ನಾಟಕತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

- Advertisement -
- Advertisement -

ವಕ್ಫ್, ಪಡಿತರ ಚೀಟಿ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿ ಬೀಳುತ್ತಿದ್ದ ರಾಜ್ಯ ಬಿಜೆಪಿ ನಾಯಕರು, ಈಗ ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ನಡೆಯುತ್ತಿದ್ದ ಶೀತಲಸಮರ ಈಗ ಬಹಿರಂಗ ವಾಗ್ಯುದ್ಧವಾಗಿ ಮಾರ್ಪಟ್ಟಿದ್ದು, ವಿವಾದ ದೆಹಲಿಯ ಅಂಗಳ ತಲುಪಿದೆ.

ಆರಂಭದಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಬಣದ ಕುರಿತು ಅಸಮಾಧಾನ ಹೊರ ಹಾಕುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇತ್ತೀಚೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ತಂಡದ ವಿರುದ್ಧ ನೇರಾ ವಾಗ್ದಾಳಿ ಶುರು ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.

ಭಾನುವಾರೂ (ಡಿ.1) ವಿಜಯೇಂದ್ರ ಬಣದ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ರಮೇಶ್ ಜಾರಕಿಹೊಳಿ ಅಪರೇಶನ್ ಮಾಡಿದ್ದರಿಂದ ಯಡಿಯೂರಪ್ಪ ಸಿಎಂ ಆದರು. ಈಗ ನಮ್ಮನ್ನು ಅಪರೇಶನ್ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಅಪರೇಶನ್ ಮಾಡುವಲ್ಲಿ ನಾವು ಟಾಪ್ ಮೋಸ್ಟ್ ಡಾಕ್ಟರ್‌ಗಳಿದ್ದೇವೆ. ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ” ಎಂದು ನೇರಾ ಸವಾಲು ಹಾಕಿದ್ದಾರೆ.

ಕೇವಲ ಯತ್ನಾಳ್ ಮಾತ್ರವಲ್ಲದೆ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಅರವಿಂದ ಲಿಂಬಾವಳಿ ಕೂಡ ವಿಜಯೇಂದ್ರ ವಿರುದ್ದ ಗಂಭೀರ ಆರೋಪ ಮಾಡಿ ಕಿಡಿಕಾರಿದ್ದಾರೆ “ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ರಾಜ್ಯಾಧ್ಯಕ್ಷ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ” ಎಂದಿದ್ದಾರೆ.

ಯತ್ನಾಳ್ ಬಣದ ಮತ್ತೋರ್ವ ನಾಯಕ ರಮೇಶ್ ಜಾರಕಿಹೊಳಿ “ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ” ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ವಕ್ಫ್ ಹೋರಾಟದ ನೆಪದಲ್ಲಿ ವಿಜಯೇಂದ್ರ ಬಣದ ವಿರುದ್ದ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನವೇ? ಎಂಬ ಪ್ರಶ್ನೆ ಮೂಡಿದೆ.

ಇತ್ತ ಯತ್ನಾಳ್ ಬಣ ಸರಣಿ ಆರೋಪಗಳನ್ನು ಮಾಡುತ್ತಿದ್ದರೆ, ಅತ್ತ ಯಡಿಯೂರಪ್ಪ ಮತ್ತು ವಿಜಯೇಂದ್ರ ಬಣ ಕೂಡ ಅಲರ್ಟ್‌ ಆಗಿದೆ. ಭಾನುವಾರ (ಡಿ.1) ಯಡಿಯೂರಪ್ಪ ಮನೆಯಲ್ಲಿ ನಡೆದ ನಿಷ್ಠರ ಸಭೆಯಲ್ಲಿ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಹರತಾಳು ಹಾಲಪ್ಪ ಸೇರಿಂದೆ 25ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಯತ್ನಾಳ್ ಆರೋಪ ಮತ್ತು ಟೀಕೆಗಳಿಗೆ ವಿಜಯೇಂದ್ರ ಆರಂಭದಲ್ಲಿ ಶಾಂತವಾಗಿ ಉತ್ತರ ಕೊಡುತ್ತಿದ್ದರು. ಆದರೆ, ಇಡೀ ಯತ್ನಾಳ್ ಬಣ ನೇರಾ ಸಮರಕ್ಕೆ ಇಳಿದಿರುವ ಹಿನ್ನೆಲೆ, ಮೊದಲ ಬಾರಿಗೆ ನಿಷ್ಠರ ಸಭೆ ನಡೆಸಿ, ಭಿನ್ನಮತೀಯರಿಗೆ ಎಚ್ಚರಿಕೆ ನೀಡಿದ್ದಾರೆ.

“ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿರಕೊಂಡಿದ್ದೇನೆ ಎಂಬುವುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಇದ್ದರೆ ತಕ್ಷಣವೇ ಬಹಿರಂಗಪಡಿಸಲಿ” ಎಂದು ಯತ್ನಾಳ್ ಬಣಕ್ಕೆ ವಿಜಯೇಂದ್ರ ಸವಾಲು ಹಾಕಿದ್ದಾರೆ.

ಮತ್ತೊಂದೆಡೆ ತಮ್ಮ ನಾಯಕರ ವಿರುದ್ದ ಯತ್ನಾಳ್ ಬಣ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿ ಸುಮ್ಮನಿರಳಾದರೆ ಯಡಿಯೂರಪ್ಪ ಅವರ ಆಪ್ತ ಎಂ.ಪಿ ರೇಣುಕಾಚಾರ್ಯ ಕಣಕ್ಕೆ ಇಳಿದಿದ್ದಾರೆ.

ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಯತ್ನಾಳ್ ಹಿಂದಿರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನರು ಮಾತ್ರ. ಇದೇ 10ರಂದು ದಾವಣಗೆರೆಯಲ್ಲಿ 10ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಛಾಟನೆಯ ತೀರ್ಮಾನ ಮಾಡುತ್ತೇವೆ” ಎಂದಿದ್ದಾರೆ.

“ಸ್ವಪಕ್ಷೀಯರ ವಿರುದ್ದವೇ ಮಾತನಾಡುತ್ತಿರುವ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ” ಎಂದು ಯಡಿಯೂರಪ್ಪ ಬಣ ಬಿ.ಸಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ವಾಕ್ಸಮರದ ನಡುವೆ, ಯತ್ನಾಳ್ ಮತ್ತು ಅವರ ಬಣದ ಸದಸ್ಯರು ಭಾನುವಾರ (ಡಿ.1) ಸಂಜೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರು ಅವರೇ ನೇಮಿಸಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಲ್ಲುತ್ತಾರಾ? ಇಲ್ಲ ಯತ್ನಾಳ್ ವಾದ ಆಲಿಸುತ್ತಾರಾ? ಎಂದು ಕಾದು ನೋಡಬೇಕಿದೆ. ಈ ನಡುವೆ ಡಿಸೆಂಬರ್ 10ರಂದು ದಾವಣಗೆರೆಯಲ್ಲಿ ಏನಾಗಲಿದೆ? ಎಂಬ ಕುತೂಹಲವೂ ಮೂಡಿದೆ.

ಇದನ್ನೂ ಓದಿ : ‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...