Homeಮುಖಪುಟಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಫಡ್ನವೀಸ್; ಉಪ ಮುಖ್ಯಮಂತ್ರಿಗಳಾಗಿ ಶಿಂಧೆ-ಪವಾರ್

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಫಡ್ನವೀಸ್; ಉಪ ಮುಖ್ಯಮಂತ್ರಿಗಳಾಗಿ ಶಿಂಧೆ-ಪವಾರ್

- Advertisement -
- Advertisement -

ಮುಂಬೈನ ಆಜಾದ್ ಮೈದಾನದಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಯಾಗಿ ಫಡ್ನವೀಸ್ ಅವರು ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಬಿಜೆಪಿ ನಾಯಕರೊಂದಿಗೆ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಕೂಡ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನುಳಿದ ಸಚಿವರು ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್, “ಆಡಳಿತಾತ್ಮಕ ಅಡಚಣೆ ತಪ್ಪಿಸಲು ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗುವ ಮುನ್ನವೇ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ” ಎಂದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲವಾಗಿ ಗೆದ್ದ ಮಹಾಯುತಿ ಮೈತ್ರಿಕೂಟದೊಳಗಿನ ಪಕ್ಷಗಳ ನಡುವೆ ಎರಡು ವಾರಗಳ ತೀವ್ರ ಮಾತುಕತೆಗಳ ನಂತರ ಹೊಸ ಸರ್ಕಾರ ರಚನೆಯಾಗಿದೆ.

ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಯೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ. ಬಿಜೆಪಿ ಏಕಾಂಗಿಯಾಗಿ 132ರಲ್ಲಿ ಗೆಲುವು ಸಾಧಿಸಿದೆ.

ಪ್ರಮಾಣ ವಚನ ಸಮಾರಂಭದಲ್ಲಿ ಶಾರುಖ್ ಖಾನ್, ಮಾಧುರಿ ದೀಕ್ಷಿತ್, ಸಚಿನ್ ತೆಂಡೂಲ್ಕರ್ ಮತ್ತು ಕುಮಾರ್ ಮಂಗಲಂ ಬಿರ್ಲಾ ಅವರಂತಹ ಉನ್ನತ ಅತಿಥಿಗಳು ಸೇರಿದಂತೆ 42,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ಮೋದಿಯವರಲ್ಲದೆ, ಹಲವಾರು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ವಿವಿಧ ರಾಜ್ಯಗಳ ಉಪ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

40,000 ಬಿಜೆಪಿ ಬೆಂಬಲಿಗರಿಗೆ ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಧಾರ್ಮಿಕ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನ ಪ್ರದೇಶವನ್ನು ನಿಗದಿಪಡಿಸಲಾಗಿದೆ. ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಫಡ್ನವೀಸ್, 2014 ರಿಂದ 2019 ರವರೆಗೆ ಬಿಜೆಪಿ-ಶಿವಸೇನೆ ಸರ್ಕಾರವನ್ನು ಮುನ್ನಡೆಸಿದರು. 2019 ರ ಚುನಾವಣೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿಯೊಂದಿಗೆ ಸಂಬಂಧವನ್ನು ಮುರಿದಾಗ, ಫಡ್ನವೀಸ್ ಮತ್ತೆ ಪ್ರಮಾಣವಚನ ಸ್ವೀಕರಿಸಿದರು. ಎನ್‌ಸಿಪಿ ಶಾಸಕರಿಂದ ಸಾಕಷ್ಟು ಬೆಂಬಲವನ್ನು ಪಡೆಯಲು ಪವಾರ್ ವಿಫಲವಾದ ಕಾರಣ ಈ ಸರ್ಕಾರ ಕೇವಲ 72 ಗಂಟೆಗಳ ಕಾಲ ಉಳಿಯಿತು. ಶಿವಸೇನೆಯಲ್ಲಿನ ವಿಭಜನೆಯ ನಂತರ, ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರದ ಅಡಿಯಲ್ಲಿ ಫಡ್ನವೀಸ್ ಉಪ ಮುಖ್ಯಮಂತ್ರಿಯಾದರು.

ಇದನ್ನೂ ಓದಿ; ‘ರಾಹುಲ್ ಗಾಂಧಿ -ಜಾರ್ಜ್ ಸೊರೊಸ್ ಎರಡು ದೇಹ, ಒಂದೆ ಆತ್ಮ..’; ಬಿಜೆಪಿ ಸಂಸದ ಸಂಬಿತ್ ಪಾತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...