HomeUncategorized11 ವರ್ಷಗಳ ನಂತರ ಫಹಾದ್ ಶಾ ಪ್ರಕರಣ ಮುನ್ನಲೆಗೆ : ಜೆ & ಕೆ ಹೈಕೋರ್ಟ್

11 ವರ್ಷಗಳ ನಂತರ ಫಹಾದ್ ಶಾ ಪ್ರಕರಣ ಮುನ್ನಲೆಗೆ : ಜೆ & ಕೆ ಹೈಕೋರ್ಟ್

- Advertisement -
- Advertisement -

ಪತ್ರಕರ್ತ ಫಹಾದ್ ಶಾ ವಿರುದ್ಧದ ‘ದಿ ಕಾಶ್ಮೀರ್ ವಾಲ್ಲಾ’ ಸುದ್ದಿ ವೆಬ್‌ಸೈಟ್‌ನ ‘ದೇಶದ್ರೋಹಿ’ ಲೇಖನಕ್ಕೆ ಸಂಬಂಧಿಸಿದ ಪ್ರಕರಣವನ್ನು ಲೇಖನ ಪ್ರಕಟಗೊಂಡ 11 ವರ್ಷಗಳ ನಂತರ ಅಧಿಕಾರಿಗಳು ಮುನ್ನಲೆಗೆ ತಂದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಹೇಳಿದೆ.

ಪ್ರಕರಣದ ಆರಂಭದಿಂದ ಇದುವರೆಗೆ ಕಾಶ್ಮೀರ್ ವಾಲ್ಲಾದ ಲೇಖನವು ಉಗ್ರವಾದಕ್ಕೆ ಜನರನ್ನು ಉತ್ತೇಜಿಸುವ ಅಂಶಗಳನ್ನು ಒಳಗೊಂಡಿತ್ತು ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಒಬ್ಬ ಸಾಕ್ಷಿಯೂ ಇದನ್ನು ದೃಢೀಕರಿಸಿಲ್ಲ ಎಂದು ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಮೋಹನ್ ಲಾಲ್ ಅವರನ್ನು ಒಳಗೊಂಡ ಪೀಠವು ಫಹಾದ್ ಶಾಗೆ ಜಾಮೀನು ನೀಡುವಾಗ ತಿಳಿಸಿದೆ.

ನವೆಂಬರ್ 17 ರಂದು ಫಹಾದ್ ಶಾಗೆ ಜಾಮೀನು ದೊರೆತಿದೆ. ಆದರೆ, ಅವರ ವಕೀಲರು ಕಾನೂನು ವಿಧಿಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ ಶಾಗೆ ಇನ್ನೂ ಜೈಲಿನಿಂದ ಬಿಡುಗಡೆ ಭಾಗ್ಯ ದೊರೆತಿಲ್ಲ.

‘ಸಮಾಜಕ್ಕೆ ಸ್ಪಷ್ಟ ಮತ್ತು ಪ್ರಸ್ತುತ ಅಪಾಯ’ ಎಂಬ ಅಂಶವನ್ನು ಮುಂದಿಟ್ಟುಕೊಂಡು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಆರೋಪಿಗೆ ಜಾಮೀನು ನೀಡುವುದನ್ನು ತನಿಖಾ ಸಂಸ್ಥೆ ವಿರೋಧಿಸಿದೆ ಎಂದು ತೀರ್ಪು ನೀಡುವಾಗ ನ್ಯಾಯಾಲಯ ಹೇಳಿದೆ ಎಂದು ತಿಳಿದು ಬಂದಿದೆ.

‘ಗುಲಾಮಗಿರಿಯ ಸಂಕೋಲೆಗಳು ಮುರಿಯಲಿವೆ’ ಎಂಬ ಶೀರ್ಷಿಕೆಯ ಲೇಖನವನ್ನು ಶಿಕ್ಷಣ ತಜ್ಞ ಅಬ್ದುಲ್ ಆಲಾ ಫಾಜಿಲಿ ಬರೆದಿದ್ದರು. ಇದನ್ನು 2011 ರಲ್ಲಿ ದಿ ಕಾಶ್ಮೀರ್ ವಾಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದ ರಾಜ್ಯ ತನಿಖಾ ಸಂಸ್ಥೆಯು ಈ ಲೇಖನವು ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ. ಅಲ್ಲದೆ ಯುವಕರನ್ನು ಭಯೋತ್ಪಾದನೆ ಮತ್ತು ಹಿಂಸಾಚಾರದ ಹಾದಿ ಹಿಡಿಯಲು ಪ್ರೇರೇಪಿಸುತ್ತದೆ ಎಂದು ಆರೋಪಿಸಿತ್ತು.

ಈ ಪ್ರಕರಣ ಸಂಬಂಧ ಸ್ವತಂತ್ರ ಸುದ್ದಿ ಸಂಸ್ಥೆ ದಿ ಕಾಶ್ಮೀರ್ ವಾಲ್ಲಾದ ಮುಖ್ಯ ಸಂಪಾದಕ ಫಹಾದ್ ಶಾ ಅವರನ್ನು ಕಳೆದ ವರ್ಷ ಫೆಬ್ರವರಿಯಲ್ಲಿ ಪೊಲೀಸರು ಬಂಧಿಸಿದ್ದರು. ಫಹಾದ್ ಶಾ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದ್ದಾರೆ, ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಶುಕ್ರವಾರ (ನ.17) ಫಹಾದ್ ಶಾಗೆ ಜಾಮೀನು ದೊರೆತಿದೆ.

ಕಾಶ್ಮೀರ್‌ ವಾಲ್ಲಾದ ಲೇಖನ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸಲು ಕರೆ ನೀಡುತ್ತದೆ. ಆದರೆ, ಅದು ಹಿಂಸಾಚಾರವನ್ನು ಪ್ರಚೋದಿಸುವುದಿಲ್ಲ ಅಥವಾ ರಾಜ್ಯದ ವಿರುದ್ಧ ಸಶಸ್ತ್ರ ದಂಗೆಗೆ ಕರೆ ನೀಡುವುದಿಲ್ಲ ಎಂದು ಹೈಕೋರ್ಟ್ ನ್ಯಾಯಾಧೀಶರು ಜಾಮೀನು ನೀಡುವಾಗ ಹೇಳಿದ್ದಾಗಿ ತಿಳಿದು ಬಂದಿದೆ.

ಇದನ್ನು ಓದಿ : ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...