Homeಮುಖಪುಟಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

- Advertisement -
- Advertisement -

ಭಾರತದಲ್ಲಿ ಉಲ್ಭಣಿಸಿದ ಕೋವಿಡ್ ಎರಡನೇ ಅಲೆಯ ಸಾವು-ನೋವುಗಳ ತೀವ್ರತೆಯ ನಡುವೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಲ್ಲಿ ದಿಢೀರ್ ಕುಸಿತ ಕಂಡುಬಂದಿದೆ. ಅಲ್ಲದೆ ಅವರು ವಿರುದ್ಧದ ಅಲೆಯಲ್ಲಿ ಗಣನೀಯ ಹೆಚ್ಚಳವಾಗಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ 4 ರಂದು ಶೇಕಡಾ 65 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಆರಂಭಕ್ಕೆ ಶೇಕಡಾ 29 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಅಲ್ಲದೇ ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದರು. ಆದರೆ ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಲಸಿಕೆ ವಿಚಾರದಲ್ಲಿಯೂ ಪ್ರಧಾನಿ ಮೋದಿಯವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಉಚಿತ ಲಸಿಕೆ ಕೊಡುವಲ್ಲಿ ವಿಫಲತೆ, ಸಮಯಕ್ಕೆ ಸರಿಯಾಗಿ ಲಸಿಕೆ ಲಭ್ಯತೆಯಲ್ಲಿ ವಿಫಲತೆ ಮತ್ತು ವಿದೇಶದಿಂದ ಆಮದು ಮಾಡಿಕೊಳ್ಳುವಲ್ಲಿ ವಿಫಲತೆ ಸೇರಿದಂತೆ ಇಂದು ಭಾರತದಲ್ಲಿ ಲಸಿಕೆ ನೀಡುವುದು ದುಸ್ತರವಾಗಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...