Homeಮುಖಪುಟಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

- Advertisement -
- Advertisement -

ಭಾರತದಲ್ಲಿ ಉಲ್ಭಣಿಸಿದ ಕೋವಿಡ್ ಎರಡನೇ ಅಲೆಯ ಸಾವು-ನೋವುಗಳ ತೀವ್ರತೆಯ ನಡುವೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯಲ್ಲಿ ದಿಢೀರ್ ಕುಸಿತ ಕಂಡುಬಂದಿದೆ. ಅಲ್ಲದೆ ಅವರು ವಿರುದ್ಧದ ಅಲೆಯಲ್ಲಿ ಗಣನೀಯ ಹೆಚ್ಚಳವಾಗಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ 4 ರಂದು ಶೇಕಡಾ 65 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಆರಂಭಕ್ಕೆ ಶೇಕಡಾ 29 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಅಲ್ಲದೇ ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದರು. ಆದರೆ ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಲಸಿಕೆ ವಿಚಾರದಲ್ಲಿಯೂ ಪ್ರಧಾನಿ ಮೋದಿಯವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಉಚಿತ ಲಸಿಕೆ ಕೊಡುವಲ್ಲಿ ವಿಫಲತೆ, ಸಮಯಕ್ಕೆ ಸರಿಯಾಗಿ ಲಸಿಕೆ ಲಭ್ಯತೆಯಲ್ಲಿ ವಿಫಲತೆ ಮತ್ತು ವಿದೇಶದಿಂದ ಆಮದು ಮಾಡಿಕೊಳ್ಳುವಲ್ಲಿ ವಿಫಲತೆ ಸೇರಿದಂತೆ ಇಂದು ಭಾರತದಲ್ಲಿ ಲಸಿಕೆ ನೀಡುವುದು ದುಸ್ತರವಾಗಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...