Homeಮುಖಪುಟರಾಜ್ಯಪಾಲರು ಎರಡನೇ ಬಾರಿಯೂ ಮಸೂದೆಗೆ ಅಂಕಿತ ಹಾಕದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂದರ್ಥ : ತಮಿಳುನಾಡು...

ರಾಜ್ಯಪಾಲರು ಎರಡನೇ ಬಾರಿಯೂ ಮಸೂದೆಗೆ ಅಂಕಿತ ಹಾಕದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂದರ್ಥ : ತಮಿಳುನಾಡು ಸರ್ಕಾರ

- Advertisement -
- Advertisement -

ಸರ್ಕಾರ ಕಳುಹಿಸಿದ ಮಸೂದೆಗೆ ರಾಜ್ಯಪಾಲ ಆರ್‌.ಎನ್‌ ರವಿ ಅವರು ಎರಡನೇ ಬಾರಿಯೂ ಸಹಿ ಹಾಕದಿರುವುದು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ವಿಫಲಗೊಂಡಿದೆ ಎಂಬುವುದನ್ನು ತೋರಿಸುತ್ತದೆ ಎಂದು ತಮಿಳುನಾಡು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಕಳವಳ ವ್ಯಕ್ತಪಡಿಸಿದೆ.

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದ ಹಿನ್ನೆಲೆ ತಮಿಳುನಾಡು ಸರ್ಕಾರ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.

ಪಕ್ಷಗಳ ನಡುವಿನ ವಿವಾದದಿಂದಾಗಿ ಜನರು ಮತ್ತು ರಾಜ್ಯ ತೊಂದರೆ ಅನುಭವಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಮಿಳುನಾಡು ರಾಜ್ಯ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಕಾನೂನಿನ ಪ್ರಕಾರ ರಾಜ್ಯ ಶಾಸಕಾಂಗವು ಮಸೂದೆಯನ್ನು ಅಂಗೀಕರಿಸಿದರೆ, ರಾಜ್ಯಪಾಲರು ಮರುಪರಿಶೀಲನೆಗೆ ಕೋರಬಹುದು” ಎಂದು ಹೇಳಿದ್ದಾರೆ.

“ಆದಾಗ್ಯೂ, ಅದೇ ಮಸೂದೆಯನ್ನು ಪುನಃ ಅಂಗೀಕರಿಸಿ ಎರಡನೇ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದರೆ, ರಾಜ್ಯಪಾಲರಿಗೆ ಒಪ್ಪಿಗೆ ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಇದು ನಮ್ಮ ಸಾಂವಿಧಾನಿಕ ಚೌಕಟ್ಟಿನಲ್ಲಿ ನಿಗದಿಪಡಿಸಲಾದ ಕಾರ್ಯವಿಧಾನವಾಗಿದೆ. ಅವರು ಇನ್ನೂ ಒಪ್ಪಿಗೆ ನೀಡದಿದ್ದರೆ ಅಥವಾ ಒಪ್ಪಿಗೆ ನೀಡಲು ವಿಫಲವಾದರೆ, ಅದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ವೈಫಲ್ಯ” ಎಂದು ರೋಹಟಗಿ ವಾದಿಸಿದ್ದಾರೆ.

ಎರಡನೇ ಸುತ್ತಿನಲ್ಲಿ ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡುವುದಕ್ಕೆ ಬದ್ಧರು ಎಂಬುವುದಕ್ಕೆ ಸಾಂವಿಧಾನಿಕ ನಿಬಂಧನೆಗಳು ಬಹಳ ಸ್ಪಷ್ಟವಾಗಿವೆ ಎಂದು ರೋಹಟಗಿ ಹೇಳಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿದ ಮತ್ತೊಬ್ಬರು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವ ಆಯ್ಕೆಯನ್ನು ಮೊದಲ ಹಂತದಲ್ಲಿಯೇ ಮಾಡಬೇಕಾಗಿತ್ತು. ಮರು ಪರಿಶೀಲನೆಗೆ ಕಳುಹಿಸಿದ ಬಳಿಕ ಅದನ್ನು ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮಸೂದೆಯನ್ನು ಮರು ಮಂಡಿಸಿದ ಅನುಮೋದನೆ ಪಡೆದ ಬಳಿ ರಾಜ್ಯಪಾಲರಿಗೆ ಕಳುಹಿಸಿದರೆ, ಅದಕ್ಕೆ ಒಪ್ಪಿಗೆ ನೀಡುವುದನ್ನು ಬಿಟ್ಟು ರಾಜ್ಯಪಾಲರಿಗೆ ಬೇರೆ ದಾರಿ ಇಲ್ಲ. ಎರಡನೇ ಸುತ್ತಿನಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಮಸೂದೆಯನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯ ಫೆಬ್ರವರಿ 6ರಕ್ಕೆ ವಿಚಾರಣೆಯನ್ನು ಮುಂದೂಡಿದೆ. ತಮಿಳುನಾಡು ಸರ್ಕಾರದ ಪರ ವಕೀಲರು ಮತ್ತು ನಂತರ ರಾಜ್ಯಪಾಲರನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ವಾದವನ್ನು ಆಲಿಸುವುದಾಗಿ ಹೇಳಿದೆ.

ರಾಜ್ಯಪಾಲ ರವಿ ಅವರು ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ರಾಜ್ಯ ವಿಧಾನಸಭೆಯು ರಾಜ್ಯಪಾಲ ರವಿ ಅವರು ಹಿಂದಿರುಗಿಸಿದ 10 ಮಸೂದೆಗಳನ್ನು ಮರು ಅಂಗೀಕರಿಸಿದ ಬಳಿಕ ರಾಜ್ಯಪಾಲ ಮತ್ತು ಸರ್ಕಾರದ ನಡುವೆ ತಿಕ್ಕಾಟ ಶುರುವಾಗಿದೆ.

ಡಿಸೆಂಬರ್ 13, 2023ರಂದು, ಆಡಳಿತದ ವ್ಯವಹಾರಗಳು ಮುಂದುವರಿಯಬೇಕು ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ತಮಿಳುನಾಡು ವಿಧಾನಸಭೆ ಮರು ಅನುಮೋದಿಸಿರುವ ಮತ್ತು ರಾಜ್ಯಪಾಲ ರವಿ ಅವರ ಒಪ್ಪಿಗೆಗೆ ಕಳುಹಿಸಿರುವ ಮಸೂದೆಗಳಿಗೆ ರಾಷ್ಟ್ರಪತಿ ಸಹಿ ಹಾಕುವುದನ್ನು ತಡೆಯಲು ಬಯಸುವುದಿಲ್ಲ ಎಂದಿತ್ತು.

ಕುಂಭ ಮೇಳ ಕಾಲ್ತುಳಿತದಲ್ಲಿ 2,000 ಜನರು ಸಾವನ್ನಪ್ಪಿದ್ದಾರೆ : ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...