Homeಮುಖಪುಟತಮಿಳುನಾಡಿನಲ್ಲಿ ಕೈಕೊಟ್ಟ ’ಸೆಂಗೋಲ್' ಡ್ರಾಮಾ; ರೈಡ್ ರಾಜಕಾರಣಕ್ಕೆ ಮೊರೆಹೋದ ಬಿಜೆಪಿ!

ತಮಿಳುನಾಡಿನಲ್ಲಿ ಕೈಕೊಟ್ಟ ’ಸೆಂಗೋಲ್’ ಡ್ರಾಮಾ; ರೈಡ್ ರಾಜಕಾರಣಕ್ಕೆ ಮೊರೆಹೋದ ಬಿಜೆಪಿ!

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪ್ರಭಾವಿ ಸಚಿವ ಸೆಂಥಿಲ್ ಬಾಲಾಜಿ ಅವರ ದಿಢೀರ್ ಬಂಧನ ರಾಷ್ಟ್ರ ರಾಜಕಾರಣದಲ್ಲಿ ಪ್ರಸ್ತುತ ಭಾರೀ ಸದ್ದು ಮಾಡುತ್ತಿದೆ. ದೆಹಲಿ ಡಿಸಿಎಂ ಮನೀಶ್ ಸಿಸೋಡಿಯ ಬಂಧನದ ಬೆನ್ನಿಗೇ, ಕೇಂದ್ರ ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ ಮತ್ತೊಂದು ಅಧ್ಯಾಯ ಅನಾವರಣಗೊಂಡಿದೆಯೇ? ಎಂಬ ಚರ್ಚೆಯೂ ಮುನ್ನಲೆಗೆ ಬಂದಿದೆ.

ಮಮತಾ ಬ್ಯಾನರ್ಜಿ, ಚಂದ್ರಶೇಖರ್ ರಾವ್, ಅರವಿಂದ ಕೇಜ್ರಿವಾಲ್ ಆದಿಯಾಗಿ ಅನೇಕ ರಾಜಕೀಯ ಮುಖಂಡರು ಈ ಬಂಧನವನ್ನು ಖಂಡಿಸಿದ್ದಾರೆ. ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲಿ ಗಾಢ ನಿದ್ರೆಗೆ ಜಾರಿರುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ, ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರ ವಿರೋಧ ಪಕ್ಷಗಳ ನಾಯಕರ ಮೇಲೆ ಹೀಗೆ ಸಾಲುಸಾಲು ದಾಳಿಗಳನ್ನು ನಡೆಸುತ್ತಿರುವುದು ಸಹ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವುದು ಸುಳ್ಳಲ್ಲ. ಈ ನಡುವೆ ತಮಿಳುನಾಡಿನ ಸಚಿವ ಸೆಂಥಿಲ್ ಬಾಲಾಜಿ ಬಂಧನವೂ ರಾಜಕೀಯ ಪ್ರೇರಿತವೇ? ಎಂಬ ಪ್ರಶ್ನೆ ಎಲ್ಲೆಡೆ ಮೂಡಿದೆ. ಈ ಸಂಶಯಗಳಿಗೆ ಕಾರಣಗಳಿಲ್ಲದೆ ಏನಿಲ್ಲ.

ಸಚಿವರ ಬಂಧನಕ್ಕೆ ಕಾರಣವೇನು?

ಸೆಂಥಿಲ್ ಬಾಲಾಜಿ ಮೂಲತಃ ಎಡಿಎಂಕೆ ಪಕ್ಷದ ನಾಯಕ. ಮಾಜಿ ಸಿಎಂ ಜೆ. ಜಯಲಲಿತ ಅವರ ಅವಧಿಯಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜಯಲಲಿತ ಸಾವಿನ ನಂತರ ಡಿಎಂಕೆ ಸೇರಿದ ಬಾಲಾಜಿ ಸೆಂಥಿಲ್ ಪ್ರಸ್ತುತ ಇಕ್ಕಟ್ಟಿಗೆ ಸಿಲುಕಲು ಕಾರಣ ಜಯಲಲಿತ ಸಿಎಂ ಆಗಿದ್ದ ಕಾಲದಲ್ಲಿ ಸಾರಿಗೆ ಸಚಿವರು ಹಗರಣ ನಡೆಸಿದ್ದಾರೆನ್ನುವ ಆರೋಪ.

ಜಯಲಲಿತಾ

2011ರಿಂದ 2014ರ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದಾಗ ಸೆಂಥಿಲ್ ಕೆಲಸ ಕೊಡಿಸುವ ಭರವಸೆ ನೀಡಿ ಅನೇಕ ಯುವಕರ ಬಳಿ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪವಿದೆ. ಹಣ ನೀಡಿಯೂ ಕೆಲಸ ಸಿಗದ ಕಾರಣ ನೂರಾರು ಯುವಕರು ಬೀದಿಗಿಳಿದು ಹೋರಾಟ ನಡೆಸಿದ್ದರು. ಆ ಕಾಲದಲ್ಲಿ ಈ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಪರಿಣಾಮ ಒಂದು ದಶಕದ ಹಿಂದೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮನಿ ಲಾಂಡರಿಂಗ್ ಆರೋಪದ ಅಡಿಯಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ಸಚಿವ ಸೆಂಥಿಲ್ ಬಾಲಾಜಿ ಬಂಧನವಾಗಿರುವುದು ಒಂದು ದಶಕದ ಹಿಂದಿನ ಇದೇ ಪ್ರಕರಣದ ಅಡಿಯಲ್ಲಿ ಎಂಬುದು ಗಮನಾರ್ಹ.

ಬಂಧನ ವಿವಾದವಾಗಿದ್ದು ಏಕೆ?

ಅಸಲಿಗೆ ಆರೋಪಿತ ಸಚಿವ ಸೆಂಥಿಲ್ ಬಾಲಾಜಿ ಬಂಧನಕ್ಕೆ ರಾಜಕೀಯ ವಲಯದಲ್ಲಿ ಯಾರ ತಕರಾರು ಇಲ್ಲ. ಬದಲಾಗಿ ಬಂಧನವಾಗಿರುವ ಸಮಯ ಮತ್ತು ಬಂಧಿತ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿಕೊಂಡಿರುವ ರೀತಿ ದೊಡ್ಡ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಅಧಿಕಾರಿಗಳ ಈ ಕ್ರಮ ಸೇಡಿನ ರಾಜಕಾರಣದ ಆರೋಪಕ್ಕೂ ಪುಷ್ಠಿ ನೀಡುವಂತಿದೆ.

ಏಕೆಂದರೆ ಸಚಿವ ಸೆಂಥಿಲ್ ಬಂಧನವಾಗಿರುವುದು 2014ರಲ್ಲಿ ದಾಖಲಾದ ಪ್ರಕರಣದಲ್ಲಿ. ನಿಜವಾಗಿಯೂ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕೆಂಬ ಉದ್ದೇಶ ಇದ್ದಿದ್ದರೆ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆ ಕೆಲಸವನ್ನು ದಶಕಗಳ ಹಿಂದೆಯೇ ಮಾಡಬಹುದಿತ್ತಲ್ಲ? ಈಗ ದಿಢೀರ್ ಎಂದು ತುರ್ತು ಬಂಧನ ಉದ್ಭವಿಸಿದ್ದು ಏಕೆ? ಎಂಬುದು ಹಲವು ನಾಯಕರ ಪ್ರಶ್ನೆ.

ಈ ಕುರಿತು ಖಂಡನಾರ್ಹ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ಸಿಎಂ ಸ್ಟಾಲಿನ್ ಕೂಡ ಇಂತಹದ್ದೇ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. “ಸೆಂಥಿಲ್ ಬಾಲಾಜಿ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಅವರ ವಿರುದ್ಧ ನ್ಯಾಯಾಲಯದ ತೀರ್ಪಿದ್ದರೆ ಅಧಿಕಾರಿಗಳು ಧಾರಾಳವಾಗಿ ಅವರ ವಿಚಾರಣೆ ನಡೆಸಲಿ. ನಾನು ಅದನ್ನು ಯಾವತ್ತೂ ಬೇಡವೆನ್ನುವುದಿಲ್ಲ. ಆದರೆ, ಅಧಿಕಾರಿಗಳು ದಾಳಿ ನಡೆಸಿದಾಗ, ವಿಚಾರಣೆಗೆ ಸೆಂಥಿಲ್ ಬಾಲಾಜಿ ಎಲ್ಲ ಸಹಕಾರ ನೀಡಿದ್ದರೂ, ದಾಖಲೆಗಳಿಗೆ ಸಂಬಂಧಿಸಿದಂತಹ ಯಾವುದೇ ಪ್ರಶ್ನೆಗಳಿಗೆ ವಿವರಣೆಯನ್ನ ನೀಡಿದ್ದರೂ, ಅವರನ್ನೇಕೆ 18 ಗಂಟೆಗಳ ಕಾಲ ಕೂಡಿಹಾಕಿ ಕಿರುಕುಳ ನೀಡಲಾಗಿತ್ತು? ಇಂತಹ ನಡವಳಿಕೆಗಳ ಹಿಂದಿನ ಉದ್ದೇಶವೇನು? ಇದು ದ್ವೇಷದ ರಾಜಕಾರಣವಲ್ಲದೆ ಮತ್ತೇನು?” ಎಂಬುದು ಮುಖ್ಯಮಂತ್ರಿ ಸ್ಟಾಲಿನ್ ಅವರ ಪ್ರಶ್ನೆ.

ಇದು ದ್ವೇಷ ರಾಜಕಾರಣ ಹೌದೇ?

ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿಕೊಂಡಿರುವ ರೀತಿಯನ್ನು ಗಮನಿಸಿದರೆ, ಇದು ಕೇಂದ್ರ ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣದ ಮತ್ತೊಂದು ಅಧ್ಯಾಯ ಎಂಬುದು ಮೇಲ್ನೋಟಕ್ಕೇ ಸ್ಪಷ್ಟವಾಗುತ್ತದೆ.

ಎಡಪ್ಪಾಡಿ ಪಳನಿಸ್ವಾಮಿ

ಏಕೆಂದರೆ ಸಚಿವ ಸೆಂಥಿಲ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಬರೋಬ್ಬರಿ ಒಂದು ದಶಕಗಳ ಕಾಲ ಅವಕಾಶವಿತ್ತು. ಆದರೆ, ಈ ಅವಧಿಯಲ್ಲಿ ಅಧಿಕಾರಿಗಳು ಏಕೆ ಆರೋಪಿಯನ್ನು ಬಂಧಿಸಿರಲಿಲ್ಲ ಎಂಬುದು ಮೊದಲ ಪ್ರಶ್ನೆ.

ಈ ಪ್ರಶ್ನೆಗೆ ಉತ್ತರ ಇಲ್ಲದೇ ಏನಿಲ್ಲ. ಏಕೆಂದರೆ 2016ರವರೆಗೆ ಅಂದಿನ ಸಿಎಂ ಜಯಲಲಿತ ಬಿಜೆಪಿ ಪಕ್ಷವನ್ನು ಹತ್ತಿರಕ್ಕೂ ಬಿಟ್ಟುಕೊಂಡಿರಲಿಲ್ಲ. ಆ ಕಾಲದಲ್ಲಿ ದೇಶದಾದ್ಯಂತ ಮೋದಿ ಮೇನಿಯಾದ ಅಬ್ಬರವಿದ್ದರೂ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲಾಗಿರಲಿಲ್ಲ. ಅದಕ್ಕೆ ಕಾರಣ ಜಯಲಲಿತಾ ಎಂಬ ಗಟ್ಟಿಗಿತ್ತಿ. ಇದೇ ಕಾಲದಲ್ಲಿ “ದೆಹಲಿಗೆ ಮೋದಿಯಾದರೆ, ತಮಿಳುನಾಡಿಗೆ ಲೇಡಿ” ಎಂಬ ರಾಜಕೀಯ ಮಾತು ಭಾರೀ ಸದ್ದು ಮಾಡಿತ್ತು.

ಆದರೆ, ಜಯಲಲಿತಾ ಮರಣದ ಬೆನ್ನಿಗೆ ಎಡಿಎಂಕೆ ಪಕ್ಷದ ಎರಡನೇ ಸಾಲಿನ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ-ಇಡಿ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದರು. ಈ ದಾಳಿಗಳಿಗೆ ಅಂದಿನ ಎಡಿಎಂಕೆ ಸರ್ಕಾರವೇ ತಲ್ಲಣಿಸಿಹೋಗಿತ್ತು. ಈ ದಾಳಿಯನ್ನು ಆಯೋಜಿಸಿದ್ದೂ ಸಹ ಕೇಂದ್ರ ಬಿಜೆಪಿ ಸರ್ಕಾರವೇ ಎಂಬುದು ಗುಟ್ಟಾಗೇನು ಉಳಿದಿಲ್ಲ.

ಈ ಸರಣಿ ದಾಳಿಗಳಿಗೆ ಹೆದರಿದ್ದ ಎಡಿಎಂಕೆ ನಾಯಕರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕೊನೆಗೂ ಬಿಜೆಪಿ ಜೊತೆಗೆ ಒತ್ತಾಯದ ಮೈತ್ರಿಗೆ ಕೈಜೋಡಿಸಿದ್ದರು. ಪರಿಣಾಮ ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಓ ಪನ್ನೀರ್ ಸೆಲ್ವಂ ಸೇರಿದಂತೆ ಹಲವರ ಮೇಲಿನ ಪ್ರಕರಣಗಳನ್ನು ಕೈಬಿಡಲಾಗಿತ್ತು. ಸೆಂಥಿಲ್ ಬಾಲಾಜಿ ಅವರ ಪ್ರಕರಣದ ಫೈಲ್‌ಗಳನ್ನೂ ಮೂಲೆಗೆ ಎಸೆಯಲಾಗಿತ್ತು.

ಇದನ್ನೂ ಓದಿ: ನಮ್ಮನ್ನು ಎದುರು ಹಾಕಿಕೊಂಡರೆ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ: ಸೆಂಥಿಲ್ ಬಾಲಾಜಿ ಬಂಧನದ ಕುರಿತು ಬಿಜೆಪಿಗೆ ತಮಿಳುನಾಡು ಸಿಎಂ ಸ್ಟಾಲಿನ್…

ಆದರೆ, ಯಾವಾಗ ಸೆಂಥಿಲ್ ಬಾಲಾಜಿ ಡಿಎಂಕೆಗೆ ಪಕ್ಷಾಂತರ ಮಾಡಿದರೋ, ಇಂಧನ ಮತ್ತು ಅಬಕಾರಿ ಸಚಿವರಾಗಿ ನೇಮಕಗೊಂಡು ಪ್ರಭಾವಿಯಾಗಿ ಬೆಳೆಯಲು ಆರಂಭಿಸಿದರೋ ಆಗಲೇ ಇಡಿ ಅಧಿಕಾರಿಗಳು ಮತ್ತೆ ಅವರ ಫೈಲ್ ಓಪನ್ ಮಾಡಿದ್ದಾರೆ. ಇನ್ನೂ ಫೆಬ್ರವರಿ ತಿಂಗಳಲ್ಲಿ ಈರೋಡ್ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸೋಲಿಗೆ ಸೆಂಥಿಲ್ ಬಾಲಾಜಿ ಪ್ರಮುಖ ಕಾರಣರಾಗಿದ್ದರು. ಈ ಬೆಳವಣಿಗೆ ಸಾಮಾನ್ಯವಾಗಿ ಕೇಂದ್ರ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

ಸೆಂಥಿಲ್ ಬಾಲಾಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ನೊಟಿಸ್ ನೀಡಿದ್ದೂ ಸಹ ಇದೇ ಕಾಲಘಟ್ಟದಲ್ಲಿ. ಸೆಂಥಿಲ್ ಬಾಲಾಜಿ ಇ.ಡಿ ಅಧಿಕಾರಿಗಳು ಯಾವಾಗ ವಿಚಾರಣೆಗೆ ಕರೆದರೂ ಹಾಜರಾಗಿದ್ದಾರೆ. ಅವರ ಎಲ್ಲ ಪ್ರಶ್ನೆಗಳಿಗೆ ವಿವರಣೆ ನೀಡಿದ್ದಾರೆ. ಈ ನಡುವೆ ತನ್ನ ಮೇಲಿನ ವಿಚಾರಣೆಗೆ ಹೈಕೋರ್ಟ್‌ನಿಂದ ಒಮ್ಮೆ ತಡೆಯಾಜ್ಞೆಯನ್ನೂ ತಂದಿದ್ದಾರೆ. ವಿಚಾರಣೆಗೆ ಸಹಕರಿಸಿಯೂ ನಡುರಾತ್ರಿ ಬಂಧಿಸುವ ಅಗತ್ಯವೇನಿತ್ತು? ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದೆ ಎಂಬ ಮಾಹಿತಿ ಇದ್ದಾಗ್ಯೂ ಸತತ 18 ಗಂಟೆಗಳ ಕಾಲ ಕೂಡಿಹಾಕಿ ವಿಚಾರಣೆ ನಡೆಸುವ ಔಚಿತ್ಯ ಏನಿತ್ತು? ಅವರೇನು ಉಗ್ರಗಾಮಿಯೇ? ಎಂಬುದು ಮುಖ್ಯಮಂತ್ರಿ ಸ್ಟಾಲಿನ್ ಅವರ ಪ್ರಶ್ನೆ. ಆದರೆ, ಈ ಯಾವ ಪ್ರಶ್ನೆಗಳಿಗೂ ಕೇಂದ್ರ ಸರ್ಕಾರವಾಗಲಿ, ಜಾರಿ ನಿರ್ದೇಶನಾಲಯದ ಅಧಿಕಾರಿಗಳಾಗಲಿ ಉತ್ತರಿಸುವ ಗೋಜಿಗೆ ಹೋಗಿಲ್ಲ.

ಕೈಕೊಟ್ಟ ಸೆಂಗೋಲ್ ಡ್ರಾಮಾ, ರೈಡ್ ಪಾಲಿಟಿಕ್ಸ್ ಮೊರೆ?

ತಮಿಳುನಾಡಿನ ಸ್ಟಾಲಿನ್ ನೇತೃತ್ವದ ದ್ರಾವಿಡ ಮಾಡೆಲ್ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನಡುವಿನ ಸಂಬಂಧ ಎಣ್ಣೆಸೀಗೆಕಾಯಿಯಂತದ್ದು ಎಂಬುದು ರಾಷ್ಟ್ರ ರಾಜಕಾರಣದಲ್ಲಿ ಎಲ್ಲರಿಗೂ ತಿಳಿದಿರುವ ವಿಚಾರವೇ. ಅದಕ್ಕೆ ಕಾರಣ ತಮಿಳುನಾಡಿನಲ್ಲಿ ಎಲ್ಲ ಕಾಲದಲ್ಲೂ ಪ್ರಸ್ತುತವಾಗಿರುವ ಹಾಗೂ ಬಲಿಷ್ಠವಾಗಿರುವ ಪೆರಿಯಾರ್ ಚಿಂತನೆ.

ಎಂ ಕೆ ಸ್ಟಾಲಿನ್

ಪೆರಿಯಾರ್ ಕಾಲದಿಂದಲೂ ಬಲಪಂಥೀಯ ವಾದಕ್ಕೆ ಬೆನ್ನುತೋರಿಸುತ್ತಲೇ ಇರುವ ಡಿಎಂಕೆ ತಮಿಳುನಾಡಿನಲ್ಲಿ ಖಾತೆ ತೆರೆಯುವ ಬಿಜೆಪಿ ಕನಸಿಗೆ ಮಗ್ಗುಲಮುಳ್ಳಾಗಿದೆ. ಅಲ್ಲದೆ, ಪ್ರಧಾನಿ ಮೋದಿ ಯಾವಾಗ ತಮಿಳುನಾಡಿಗೆ ಹೋದರೂ #gobackmodi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗುತ್ತದೆ. ಈ ಬಿಜೆಪಿ ವಿರೋಧಿ ಸಾಮಾಜಿಕ ಮಾಧ್ಯಮ ಅಭಿಯಾನ ಕೇಂದ್ರ ಬಿಜೆಪಿ ನಾಯಕರ ಪಾಲಿಗೆ ನುಂಗಲಾಗದ ತುತ್ತಾಗಿರುವುದು ಸುಳ್ಳಲ್ಲ.

ತಮಿಳುನಾಡನ್ನು ಹೇಗಾದರೂ ಗೆಲ್ಲಲೇಬೇಕು ಎಂಬ ಕಾರಣಕ್ಕಾಗಿಯೇ ಆರ್‌ಎಸ್‌ಎಸ್ ನಾಯಕರು, ಅಪ್ರಸ್ತುತವಾಗಿದ್ದ “ಸೆಂಗೋಲ್” ಪ್ರತಿಷ್ಠಾಪನೆ ಡ್ರಾಮಾವನ್ನು ನೂತನ ಸಂಸತ್ ಭವನದಲ್ಲಿ ಮೋದಿ ಮೂಲಕ ಮಾಡಿಸಿದ್ದರು. ಆದರೆ, ಅದೂ ನಿರೀಕ್ಷಿತ ಮೈಲೇಜ್ ನೀಡದ ಕಾರಣ ಇದೀಗ ಡಿಎಂಕೆ ಪಕ್ಷವನ್ನು ಮಣಿಸಲು, ಈ ಹಿಂದೆ ಎಡಿಎಂಕೆ ವಿರುದ್ಧ ಯಶಸ್ವಿಯಾಗಿದ್ದ ಸಿಬಿಐ-ಇಡಿ ರೈಡ್ ರಾಜಕಾರಣವನ್ನು ಬಿಜೆಪಿ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಇದ್ದು, ಬಿಜೆಪಿ ನಾಯಕರ ಪಾಲಿಗೆ ಈ ಕ್ರಮ ಅನಿವಾರ್ಯವಾಗಿದೆ ಎಂದು ತಮಿಳುನಾಡಿನ ಅನೇಕ ಪತ್ರಕರ್ತರು ಚಿಂತಕರು ವ್ಯಾಖ್ಯಾನಿಸುತ್ತಿದ್ದಾರೆ.

ನಮ್ಮನ್ನು ಸುಮ್ಮನೆ ಕೆಣಕಬೇಡಿ: ಸ್ಟಾಲಿನ್

ಬಿಜೆಪಿ ಅಧಿಕಾರಕ್ಕೆ ಬರುವ ಮುಂಚಿನ 10 ವರ್ಷದಲ್ಲಿ ಜಾರಿ ನಿರ್ದೇಶನಾಲಯ ಒಟ್ಟಾರೆ ಮಾಡಿದ ರೈಡುಗಳ ಸಂಖ್ಯೆ ಕೇವಲ 112 ಮಾತ್ರ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದೇ ಸಂಸ್ಥೆ ವಿರೋಧ ಪಕ್ಷಗಳ ನಾಯಕರ ವಿರುದ್ಧ ಕನಿಷ್ಟ 3000 ರೈಡ್ ಮಾಡಿದೆ. ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಇದು ಸ್ಪಷ್ಟ ಉದಾಹರಣೆ. ಆದರೆ, ಸುಮ್ಮನೆ ನಮ್ಮನ್ನು ಕೆಣಕಬೇಡಿ. ನಮ್ಮನ್ನು ಕೆಣಕಿ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ. ನಮಗೂ ಎಲ್ಲ ರೀತಿಯ ರಾಜಕಾರಣ ಗೊತ್ತು. ಇದು ಬೆದರಿಕೆ ಅಲ್ಲ, ಎಚ್ಚರಿಕೆ!
ಎಂ.ಕೆ ಸ್ಟಾಲಿನ್, ಮುಖ್ಯಮಂತ್ರಿ, ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...