Homeಮುಖಪುಟಕೇಂದ್ರ ಸಚಿವ ಸಂಪುಟ ಪುನರ್ರಚನೆ: ಡಾ. ಹರ್ಷವರ್ಧನ್‌ ಸೇರಿ 9 ಸಚಿವರ ರಾಜೀನಾಮೆ

ಕೇಂದ್ರ ಸಚಿವ ಸಂಪುಟ ಪುನರ್ರಚನೆ: ಡಾ. ಹರ್ಷವರ್ಧನ್‌ ಸೇರಿ 9 ಸಚಿವರ ರಾಜೀನಾಮೆ

- Advertisement -
- Advertisement -

ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರ್ರಚನೆಗೆ ಇನ್ನೇನು ಕೆಲವೇ ಗಂಟೆಗಳಿದ್ದು ಇದಕ್ಕೂ ಮುನ್ನವೇ 4 ಜನ ಪ್ರಮುಖ ಮಂತ್ರಿಗಳು ತಮ್ಮ ಖಾತೆಗೆ ರಾಜೀನಾಮೆ ನೀಡಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಸಚಿವ D.V. ಸದಾನಂದ ಗೌಡ, ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮತ್ತು ಇತರ ಒಂಬತ್ತು ಮಂತ್ರಿಗಳು ಇಂದು ಮಧ್ಯಾಹ್ನ ಸಂಪುಟ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಕೇಂದ್ರ ಸಚಿವ ಸಂಪುಟದಿಂದ ಹೊರಬಂದಿದ್ದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ದೇಬಶ್ರೀ ಚೌಧುರಿ, ಸಂಜಯ್ ಧೋತ್ರೆ ಮತ್ತು ರತನ್ ಲಾಲ್ ಕಟಾರಿಯಾ ಕೂಡ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಜೊತೆಗೆ ಆರೋಗ್ಯ ಇಲಾಖೆ ರಾಜ್ಯ ಮಂತ್ರಿ ಸಚಿವ ಅಶ್ವಿನಿ ಚೌಬೆ ಇಂದು ಕೇಂದ್ರ ಸರ್ಕಾರದ ಕ್ಯಾಬಿನೇಟ್ ತ್ಯಜಿಸಿದ್ದಾರೆ.

ಕೊರೋನಾ 2 ನೇ ಅಲೆಯ ನಿಯಂತ್ರಣದಲ್ಲಿ ವಿಫಲರಾಗಿದ್ದ ಡಾ. ಹರ್ಷ ವರ್ಧನ್ ಇಂದು ಮಧ್ಯಾಹ್ನ ರಾಜೀನಾಮೆ ನೀಡಿರುವುದು ಎಲ್ಲರನ್ನೂ ಆಶ್ಚರ್ಯಕ್ಕೆ ಒಳಗಾಗುವಂತೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಿಗಳ ರಾಜೀನಾಮೆ ಎಂದರೆ ಕೊರೋನಾ ಎರಡನೆ ಅಲೆಯ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂಬ ಅಂಶವನ್ನು ಸರ್ಕಾರ ನೇರವಾಗಿ ಒಪ್ಪಿಕೊಂಡಿದೆ. ಹರ್ಷವರ್ಧನ್ ಜೊತೆಗೆ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿದ್ದ ಅಶ್ವಿನ್ ಚೌಬೆ ಕೂಡ ರಾಜೀನಾಮೆಯನ್ನು ನೀಡಿದ್ದಾರೆ. ಆರೋಗ್ಯ ಮಂತ್ರಿಗಳ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸಮರ್ಥರು ಯಾರು ? ಕೊರೊನಾ 3 ನೇ ಅಲೆಯನ್ನು ಎದುರಿಸಲು ಹೊಸ ಸಚಿವರಿಂದ ಸಾಧ್ಯವೇ ಎಂಬ ಪ್ರಶ್ನೆಗಳು ಕಾಡುತ್ತಿದ್ದು ಸಂಜೆ 6 ಗಂಟೆಯ ನಂತರ ಇದಕ್ಕೆಲ್ಲ ಉತ್ತರ ಸಿಗಲಿದೆ.

ರಸಗೊಬ್ಬರದ ಬೆಲೆ ಏರಿಕೆ, ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ, ರೆಮೆಡಿಸಿವರ್‌ ಸೇರಿದಂತೆ ಔಷಧ ಪೂರೈಕೆಯ ವ್ಯತ್ಯಯ ಕಂಡುಬಂದಿತ್ತು. ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಸಾವಿರಾರು ಜನರು ಮೃತಪಟ್ಟಿದ್ದರು. ಇದೆಲ್ಲವನ್ನೂ ಪರಿಗಣಿಸಿ D.V ಸದಾನಂದ ಗೌಡರನ್ನು ಕ್ಯಾಬಿನೇಟ್‌ನಿಂದ ಕೈಬಿಡಲಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014 ರಲ್ಲಿ ಅಸ್ತಿತ್ವಕ್ಕೆ ಬಂದಾಗಿನಿಂದ ಸದಾನಂದ ಗೌಡರು ಕ್ಯಾಬಿನೇಟ್‌ನ ಖಾಯಂ ಸದಸ್ಯರಾಗಿದ್ದರು. ಹಿಂದೆ ರೈಲ್ವೆಯಂತಹ ಮಹತ್ವದ ಇಲಾಖೆಯ ಜವಾಬ್ದಾರಿಯನ್ನು ಸದಾನಂದ ಗೌಡರ ಹೆಗಲಿಗೇರಿಸಲಾಗಿತ್ತು.

ಇದನ್ನೂ ಓದಿ:  ಇಂದು ಸಂಜೆ ಕೆಂದ್ರ ಸಚಿವ ಸಂಪುಟ ವಿಸ್ತರಣೆ ಖಚಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...