Homeಅಂತರಾಷ್ಟ್ರೀಯಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ.

- Advertisement -
- Advertisement -

ಉತ್ತರ ಕೊರಿಯಾದ ನಾಗರೀಕರ ಜೀವನವನ್ನು ಸುಧಾರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲರಾದ ಕಾರಣ ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕ್ಷಮೆಯಾಚಿಸಿದ್ದಾರೆ.

ವಾರಾಂತ್ಯದಲ್ಲಿ ನಡೆದ ಮಿಲಿಟರಿ ಪೆರೇಡ್‌ನಲ್ಲಿ ಭಾಷಣ ಮಾಡಿದ ಅವರು ಸೈನಿಕರ ತ್ಯಾಗಕ್ಕೆ ಧನ್ಯವಾದಗಳನ್ನು ಹೇಳಿ, ಕಣ್ಣೀರಿಡುತ್ತಾ ನಾಗರೀಕರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಶನಿವಾರ, ಆಡಳಿತಾರೂಢ ಕಾರ್ಮಿಕರ ಪಕ್ಷ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ, ಇತ್ತೀಚೆಗೆ ಎದುರಾಗಿದ್ದ ವಿಕೋಪಕ್ಕೆ ಸ್ಪಂದಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಸಹಾಯ ಮಾಡಿದ್ದಕ್ಕಾಗಿ ಸಾವಿರಾರು ಸೈನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲಿನ ದೂರದರ್ಶನ ಕೇಂದ್ರವು ಬಿಡುಗಡೆ ಮಾಡಿದ ವೀಡಿಯೊ ತುಣುಕಿನಲ್ಲಿ, ಕಿಮ್ ಕಣ್ಣೀರು ಹಾಕುತ್ತಿದ್ದರು.

ಕಿಮ್ ಜಾಂಗ್ ಉನ್ ಕಣ್ಣೀರು ಹಾಕಿದ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಕೊರೊನಾ ವೈರಸ್ ವಿರೋಧಿ ಕ್ರಮಗಳು, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಹಲವು ಚಂಡಮಾರುತಗಳ ಪರಿಣಾಮವು ನಾಗರಿಕರ ಜೀವನವನ್ನು ಸುಧಾರಿಸುವ ಭರವಸೆಗಳನ್ನು ಈಡೇರಿಸದಂತೆ ಸರ್ಕಾರವನ್ನು ತಡೆಯುತ್ತಿದೆ ಎಂದು ಕಿಮ್ ಹೇಳಿದರು.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

“ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ. ನನ್ನನ್ನು ಸಂಪೂರ್ಣವಾಗಿ ನಂಬಿದ್ದಾರೆ. ನನ್ನ ಅಯ್ಕೆ ಮತ್ತು ದೃಢನಿರ್ಧಾರವನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ಈಗಾಗಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳ ಮೇಲೆ ವಿಧಿಸಿರುವ ಅಂತರರಾಷ್ಟ್ರೀಯ ನಿರ್ಬಂಧಗಳಿಂದ ಉತ್ತರ ಕೊರಿಯಾದ ಆರ್ಥಿಕತೆಯು ತೀವ್ರವಾಗಿ ಸ್ಥಗಿತಗೊಂಡಿದೆ. ಕೊರೊನಾ ವೈರಸ್ ಅನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೇಶವು ಎಲ್ಲಾ ಗಡಿ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಇದಕ್ಕೆ ಮತ್ತಷ್ಟು ಹೊಡೆತ ಬಿದ್ದಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಕಾಡುತ್ತಿರುವ ತ್ರಿಬ್ಬಂದಿತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...