Homeಅಂತರಾಷ್ಟ್ರೀಯಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ.

- Advertisement -
- Advertisement -

ಉತ್ತರ ಕೊರಿಯಾದ ನಾಗರೀಕರ ಜೀವನವನ್ನು ಸುಧಾರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲರಾದ ಕಾರಣ ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕ್ಷಮೆಯಾಚಿಸಿದ್ದಾರೆ.

ವಾರಾಂತ್ಯದಲ್ಲಿ ನಡೆದ ಮಿಲಿಟರಿ ಪೆರೇಡ್‌ನಲ್ಲಿ ಭಾಷಣ ಮಾಡಿದ ಅವರು ಸೈನಿಕರ ತ್ಯಾಗಕ್ಕೆ ಧನ್ಯವಾದಗಳನ್ನು ಹೇಳಿ, ಕಣ್ಣೀರಿಡುತ್ತಾ ನಾಗರೀಕರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಶನಿವಾರ, ಆಡಳಿತಾರೂಢ ಕಾರ್ಮಿಕರ ಪಕ್ಷ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ, ಇತ್ತೀಚೆಗೆ ಎದುರಾಗಿದ್ದ ವಿಕೋಪಕ್ಕೆ ಸ್ಪಂದಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಸಹಾಯ ಮಾಡಿದ್ದಕ್ಕಾಗಿ ಸಾವಿರಾರು ಸೈನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲಿನ ದೂರದರ್ಶನ ಕೇಂದ್ರವು ಬಿಡುಗಡೆ ಮಾಡಿದ ವೀಡಿಯೊ ತುಣುಕಿನಲ್ಲಿ, ಕಿಮ್ ಕಣ್ಣೀರು ಹಾಕುತ್ತಿದ್ದರು.

ಕಿಮ್ ಜಾಂಗ್ ಉನ್ ಕಣ್ಣೀರು ಹಾಕಿದ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಕೊರೊನಾ ವೈರಸ್ ವಿರೋಧಿ ಕ್ರಮಗಳು, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಹಲವು ಚಂಡಮಾರುತಗಳ ಪರಿಣಾಮವು ನಾಗರಿಕರ ಜೀವನವನ್ನು ಸುಧಾರಿಸುವ ಭರವಸೆಗಳನ್ನು ಈಡೇರಿಸದಂತೆ ಸರ್ಕಾರವನ್ನು ತಡೆಯುತ್ತಿದೆ ಎಂದು ಕಿಮ್ ಹೇಳಿದರು.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

“ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ. ನನ್ನನ್ನು ಸಂಪೂರ್ಣವಾಗಿ ನಂಬಿದ್ದಾರೆ. ನನ್ನ ಅಯ್ಕೆ ಮತ್ತು ದೃಢನಿರ್ಧಾರವನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ಈಗಾಗಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳ ಮೇಲೆ ವಿಧಿಸಿರುವ ಅಂತರರಾಷ್ಟ್ರೀಯ ನಿರ್ಬಂಧಗಳಿಂದ ಉತ್ತರ ಕೊರಿಯಾದ ಆರ್ಥಿಕತೆಯು ತೀವ್ರವಾಗಿ ಸ್ಥಗಿತಗೊಂಡಿದೆ. ಕೊರೊನಾ ವೈರಸ್ ಅನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೇಶವು ಎಲ್ಲಾ ಗಡಿ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಇದಕ್ಕೆ ಮತ್ತಷ್ಟು ಹೊಡೆತ ಬಿದ್ದಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಕಾಡುತ್ತಿರುವ ತ್ರಿಬ್ಬಂದಿತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...