Homeಅಂತರಾಷ್ಟ್ರೀಯಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ.

- Advertisement -
- Advertisement -

ಉತ್ತರ ಕೊರಿಯಾದ ನಾಗರೀಕರ ಜೀವನವನ್ನು ಸುಧಾರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲರಾದ ಕಾರಣ ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕ್ಷಮೆಯಾಚಿಸಿದ್ದಾರೆ.

ವಾರಾಂತ್ಯದಲ್ಲಿ ನಡೆದ ಮಿಲಿಟರಿ ಪೆರೇಡ್‌ನಲ್ಲಿ ಭಾಷಣ ಮಾಡಿದ ಅವರು ಸೈನಿಕರ ತ್ಯಾಗಕ್ಕೆ ಧನ್ಯವಾದಗಳನ್ನು ಹೇಳಿ, ಕಣ್ಣೀರಿಡುತ್ತಾ ನಾಗರೀಕರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಶನಿವಾರ, ಆಡಳಿತಾರೂಢ ಕಾರ್ಮಿಕರ ಪಕ್ಷ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ, ಇತ್ತೀಚೆಗೆ ಎದುರಾಗಿದ್ದ ವಿಕೋಪಕ್ಕೆ ಸ್ಪಂದಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಸಹಾಯ ಮಾಡಿದ್ದಕ್ಕಾಗಿ ಸಾವಿರಾರು ಸೈನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲಿನ ದೂರದರ್ಶನ ಕೇಂದ್ರವು ಬಿಡುಗಡೆ ಮಾಡಿದ ವೀಡಿಯೊ ತುಣುಕಿನಲ್ಲಿ, ಕಿಮ್ ಕಣ್ಣೀರು ಹಾಕುತ್ತಿದ್ದರು.

ಕಿಮ್ ಜಾಂಗ್ ಉನ್ ಕಣ್ಣೀರು ಹಾಕಿದ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಕೊರೊನಾ ವೈರಸ್ ವಿರೋಧಿ ಕ್ರಮಗಳು, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಹಲವು ಚಂಡಮಾರುತಗಳ ಪರಿಣಾಮವು ನಾಗರಿಕರ ಜೀವನವನ್ನು ಸುಧಾರಿಸುವ ಭರವಸೆಗಳನ್ನು ಈಡೇರಿಸದಂತೆ ಸರ್ಕಾರವನ್ನು ತಡೆಯುತ್ತಿದೆ ಎಂದು ಕಿಮ್ ಹೇಳಿದರು.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

“ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ. ನನ್ನನ್ನು ಸಂಪೂರ್ಣವಾಗಿ ನಂಬಿದ್ದಾರೆ. ನನ್ನ ಅಯ್ಕೆ ಮತ್ತು ದೃಢನಿರ್ಧಾರವನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ಈಗಾಗಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳ ಮೇಲೆ ವಿಧಿಸಿರುವ ಅಂತರರಾಷ್ಟ್ರೀಯ ನಿರ್ಬಂಧಗಳಿಂದ ಉತ್ತರ ಕೊರಿಯಾದ ಆರ್ಥಿಕತೆಯು ತೀವ್ರವಾಗಿ ಸ್ಥಗಿತಗೊಂಡಿದೆ. ಕೊರೊನಾ ವೈರಸ್ ಅನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೇಶವು ಎಲ್ಲಾ ಗಡಿ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಇದಕ್ಕೆ ಮತ್ತಷ್ಟು ಹೊಡೆತ ಬಿದ್ದಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಕಾಡುತ್ತಿರುವ ತ್ರಿಬ್ಬಂದಿತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...