Homeಅಂತರಾಷ್ಟ್ರೀಯಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ.

- Advertisement -
- Advertisement -

ಉತ್ತರ ಕೊರಿಯಾದ ನಾಗರೀಕರ ಜೀವನವನ್ನು ಸುಧಾರಿಸುವಲ್ಲಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ವಿಫಲರಾದ ಕಾರಣ ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕ್ಷಮೆಯಾಚಿಸಿದ್ದಾರೆ.

ವಾರಾಂತ್ಯದಲ್ಲಿ ನಡೆದ ಮಿಲಿಟರಿ ಪೆರೇಡ್‌ನಲ್ಲಿ ಭಾಷಣ ಮಾಡಿದ ಅವರು ಸೈನಿಕರ ತ್ಯಾಗಕ್ಕೆ ಧನ್ಯವಾದಗಳನ್ನು ಹೇಳಿ, ಕಣ್ಣೀರಿಡುತ್ತಾ ನಾಗರೀಕರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಶನಿವಾರ, ಆಡಳಿತಾರೂಢ ಕಾರ್ಮಿಕರ ಪಕ್ಷ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ, ಇತ್ತೀಚೆಗೆ ಎದುರಾಗಿದ್ದ ವಿಕೋಪಕ್ಕೆ ಸ್ಪಂದಿಸಿದ್ದಕ್ಕಾಗಿ ಮತ್ತು ದೇಶದಲ್ಲಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಸಹಾಯ ಮಾಡಿದ್ದಕ್ಕಾಗಿ ಸಾವಿರಾರು ಸೈನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲಿನ ದೂರದರ್ಶನ ಕೇಂದ್ರವು ಬಿಡುಗಡೆ ಮಾಡಿದ ವೀಡಿಯೊ ತುಣುಕಿನಲ್ಲಿ, ಕಿಮ್ ಕಣ್ಣೀರು ಹಾಕುತ್ತಿದ್ದರು.

ಕಿಮ್ ಜಾಂಗ್ ಉನ್ ಕಣ್ಣೀರು ಹಾಕಿದ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಕೊರೊನಾ ವೈರಸ್ ವಿರೋಧಿ ಕ್ರಮಗಳು, ಅಂತರರಾಷ್ಟ್ರೀಯ ನಿರ್ಬಂಧಗಳು ಮತ್ತು ಹಲವು ಚಂಡಮಾರುತಗಳ ಪರಿಣಾಮವು ನಾಗರಿಕರ ಜೀವನವನ್ನು ಸುಧಾರಿಸುವ ಭರವಸೆಗಳನ್ನು ಈಡೇರಿಸದಂತೆ ಸರ್ಕಾರವನ್ನು ತಡೆಯುತ್ತಿದೆ ಎಂದು ಕಿಮ್ ಹೇಳಿದರು.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

“ನಮ್ಮ ಜನರ ಕಷ್ಟಗಳನ್ನು ನಿವಾರಿಸಲು ನನ್ನ ಪ್ರಯತ್ನಗಳು ಮತ್ತು ಪ್ರಾಮಾಣಿಕತೆ ಸಾಕಾಗಲಿಲ್ಲ. ಆದರೂ ನನ್ನ ಜನರು ಯಾವಾಗಲೂ ನನ್ನ ಕೈಬಿಟ್ಟಿಲ್ಲ. ನನ್ನನ್ನು ಸಂಪೂರ್ಣವಾಗಿ ನಂಬಿದ್ದಾರೆ. ನನ್ನ ಅಯ್ಕೆ ಮತ್ತು ದೃಢನಿರ್ಧಾರವನ್ನು ಬೆಂಬಲಿಸಿದ್ದಾರೆ” ಎಂದು ಹೇಳಿದರು.

ಈಗಾಗಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳ ಮೇಲೆ ವಿಧಿಸಿರುವ ಅಂತರರಾಷ್ಟ್ರೀಯ ನಿರ್ಬಂಧಗಳಿಂದ ಉತ್ತರ ಕೊರಿಯಾದ ಆರ್ಥಿಕತೆಯು ತೀವ್ರವಾಗಿ ಸ್ಥಗಿತಗೊಂಡಿದೆ. ಕೊರೊನಾ ವೈರಸ್ ಅನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೇಶವು ಎಲ್ಲಾ ಗಡಿ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಇದಕ್ಕೆ ಮತ್ತಷ್ಟು ಹೊಡೆತ ಬಿದ್ದಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಕಾಡುತ್ತಿರುವ ತ್ರಿಬ್ಬಂದಿತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...